Homeಕರ್ನಾಟಕರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

ರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

- Advertisement -
- Advertisement -

ಯಕ್ಷಗಾನ ಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿಯ ಎಂಜಿಎಂ ಕಾಲೇಜಿನ ಎ.ಎಲ್‌.ಎನ್‌. ರಾವ್‌ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಫೆ. 11, 12ರಂದು ಆಯೋಜಿಸಲಾಗಿದ್ದು, ಈ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಲೇಖಕ ರೋಹಿತ್‌ ಚಕ್ರತೀರ್ಥರಿಗೆ ಅವಕಾಶ ನೀಡಲಾಗಿದೆ. ಇದೀಗ ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

”ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ” ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಹಸರಾಂತ ಕಲಾವಿದರಾದ ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಅವಕಾಶ ನೀಡಿದ್ದು ಸರಿಯಲ್ಲ. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಇತ್ತೀಚೆಗೆ ನಡೆದ ಮಲ್ಪೆ ಬೀಚ್‌ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಬಿಜೆಪಿ ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರೋಹಿತ್ ಚಕ್ರತೀರ್ಥ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ, ಹಾಗಾಗಿ ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆಯಾ  ಎನ್ನುವ ಸಂಶಯ ಮೂಡುತ್ತಿದೆ.

ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಉಡುಪಿಯಲ್ಲಿ ನಡೆಯುತ್ತಿರುವುದು ಇದೇ ಮೊದಲ ಬಾರಿಗೆ, ಇದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚುವ ಮೂಲಕ ವಿವಾದಕ್ಕೀಡಾಗಿರುವ ರೋಹಿತ್ ಚಕ್ರತೀರ್ಥಯನ್ನ ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ಅನೇಕ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬಂದಿದ್ದವು. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿತ್ತು. ಇಂತಹ ನಾಡದ್ರೋಹಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದು ನಾಡಿನ ಪ್ರಜ್ಞಾವಂತ ಜನರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...