Homeಕರ್ನಾಟಕರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

ರೋಹಿತ್ ಚಕ್ರತೀರ್ಥಗೆ ಯಕ್ಷಗಾನ ಸಮ್ಮೇಳನ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆ ಯಾಕೆ?: ರಂಗಕರ್ಮಿಗಳ ಪ್ರಶ್ನೆ

- Advertisement -
- Advertisement -

ಯಕ್ಷಗಾನ ಕಲೆ ಪ್ರೋತ್ಸಾಹಿಸುವ ಉದ್ದೇಶದಿಂದ ಉಡುಪಿಯ ಎಂಜಿಎಂ ಕಾಲೇಜಿನ ಎ.ಎಲ್‌.ಎನ್‌. ರಾವ್‌ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನವನ್ನು ಫೆ. 11, 12ರಂದು ಆಯೋಜಿಸಲಾಗಿದ್ದು, ಈ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಲೇಖಕ ರೋಹಿತ್‌ ಚಕ್ರತೀರ್ಥರಿಗೆ ಅವಕಾಶ ನೀಡಲಾಗಿದೆ. ಇದೀಗ ಈ ಬಗ್ಗೆ ಆಕ್ಷೇಪಗಳು ವ್ಯಕ್ತವಾಗುತ್ತಿವೆ.

”ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ” ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನೆ ಮಾಡಿದ್ದಾರೆ.

ಹಸರಾಂತ ಕಲಾವಿದರಾದ ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಅವಕಾಶ ನೀಡಿದ್ದು ಸರಿಯಲ್ಲ. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕುವೆಂಪು ವರ್ಣಾಶ್ರಮ ಪದ್ಧತಿಯನ್ನು ಒಪ್ಪಿ ಬೆಂಬಲಿಸಿದ್ದರು: ರೋಹಿತ್ ಚಕ್ರತೀರ್ಥ ಭಾಷಣಕ್ಕೆ ವ್ಯಾಪಕ ಖಂಡನೆ

ಇತ್ತೀಚೆಗೆ ನಡೆದ ಮಲ್ಪೆ ಬೀಚ್‌ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಬಿಜೆಪಿ ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡಲು ಬಳಸಿಕೊಳ್ಳುತ್ತಿದ್ದಾರೆ. ಇದೀಗ ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರೋಹಿತ್ ಚಕ್ರತೀರ್ಥ ಅವರು ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ, ಹಾಗಾಗಿ ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆಯಾ  ಎನ್ನುವ ಸಂಶಯ ಮೂಡುತ್ತಿದೆ.

ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನ ಉಡುಪಿಯಲ್ಲಿ ನಡೆಯುತ್ತಿರುವುದು ಇದೇ ಮೊದಲ ಬಾರಿಗೆ, ಇದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚುವ ಮೂಲಕ ವಿವಾದಕ್ಕೀಡಾಗಿರುವ ರೋಹಿತ್ ಚಕ್ರತೀರ್ಥಯನ್ನ ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.

ಪಠ್ಯ ಪರಿಷ್ಕರಣೆಯಲ್ಲಿ ಅನೇಕ ಮಹಾನ್ ವ್ಯಕ್ತಿಗಳ ಪಾಠವನ್ನು ಕೈಬಿಡಲಾಗಿದೆ, ತಿರುಚಲಾಗಿದೆ ಎಂಬ ಆರೋಪಗಳು ಜೋರಾಗಿ ಕೇಳಿಬಂದಿದ್ದವು. ಅಲ್ಲದೆ ಆದಿವಾಸಿಗಳನ್ನು ಅವಮಾನಿಸಿದ್ದಾರೆ ಎಂದೂ ಕುವೆಂಪುರವರ ರಚಿಸಿದ ನಾಡಗೀತೆಯನ್ನು ತಿರುಚಿದ್ದಾರೆಂದು ರೋಹಿತ್ ಚಕ್ರತೀರ್ಥ ವಿರುದ್ಧ ದೂರು ದಾಖಲಾಗಿತ್ತು. ಇಂತಹ ನಾಡದ್ರೋಹಿಗೆ ರಾಜ್ಯಮಟ್ಟದ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದು ನಾಡಿನ ಪ್ರಜ್ಞಾವಂತ ಜನರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...