Homeಮುಖಪುಟರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

ರೆಪೊ ದರ ಹೆಚ್ಚಿಸಿದ ಆರ್‌ಬಿಐ: ಹಣದುಬ್ಬರ ನಿಯಂತ್ರಣ ಸಾಧ್ಯವೇ?

- Advertisement -
- Advertisement -

ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ರೆಪೊ ದರವನ್ನು 0.25%ರಷ್ಟು ಹೆಚ್ಚಿಸಿ 6.5%ಕ್ಕೆ ಏರಿಕೆ ಮಾಡಿದೆ. ಕೇಂದ್ರ ಬ್ಯಾಂಕ್ ಆಗಿರುವ ಆರ್‌ಬಿಐ ವಾಣಿಜ್ಯ ಬ್ಯಾಂಕುಗಳಿಗೆ ನೀಡುವ ಹಣದ ಬಡ್ಡಿ ದರವೇ ‘ರೆಪೊ’ ಆಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಸೆಂಟ್ರಲ್ ಬ್ಯಾಂಕಿನ ದ್ವೈಮಾಸಿಕ ಹಣಕಾಸು ನೀತಿ ಸಭೆಯ ನಂತರ ರೆಪೊ ದರ ಹೆಚ್ಚಳದ ಘೋಷಣೆ ಮಾಡಿದ್ದಾರೆ.

ಮೇ ತಿಂಗಳ ನಂತರ ರೆಪೋ ದರದಲ್ಲಿ ಮಾಡುತ್ತಿರುವ ಆರನೇ ಏರಿಕೆ ಇದಾಗಿದೆ. ಸೆಂಟ್ರಲ್ ಬ್ಯಾಂಕ್ ಡಿಸೆಂಬರ್‌ನಲ್ಲಿ ರೆಪೊ ದರವನ್ನು 35 ಬೇಸಿಸ್ ಪಾಯಿಂಟ್‌ಗಳಿಂದ 6.25%ಗೆ ಹೆಚ್ಚಿಸಿದೆ.

“ಕಳೆದ ಮೂರು ವರ್ಷಗಳಲ್ಲಿ ಅಭೂತಪೂರ್ವ ಘಟನೆಗಳು ಪ್ರಪಂಚದಾದ್ಯಂತ ವಿತ್ತೀಯ ನೀತಿಯನ್ನು ಪರೀಕ್ಷಿಸಿವೆ” ಎಂದು ಶಕ್ತಿಕಾಂತ್ ದಾಸ್‌ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

2023-24ರ ಆರ್ಥಿಕ ವರ್ಷದಲ್ಲಿ ಭಾರತದ ಆರ್ಥಿಕ ಬೆಳವಣಿಗೆಯು 6.4% ಆಗಲಿದೆ ಎಂದು ಶಕ್ತಿಕಾಂತ್ ದಾಸ್‌ ಭವಿಷ್ಯ ನುಡಿದಿದ್ದಾರೆ.

ಜನವರಿ 31ರಂದು ಕೇಂದ್ರ ಹಣಕಾಸು ಸಚಿವಾಲಯ ಬಿಡುಗಡೆ ಮಾಡಿದ ಆರ್ಥಿಕ ಸಮೀಕ್ಷೆಯು, ಮುಂದಿನ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ದೇಶೀಯ ಬೆಳವಣಿಗೆ ಅಥವಾ ಜಿಡಿಪಿ 6% ರಿಂದ 6.8% ರಷ್ಟಿರುತ್ತದೆ ಎಂದು ಅಂದಾಜಿಸಿದೆ. ಈ ಹಣಕಾಸು ವರ್ಷದಲ್ಲಿ (2022-’23), ಭಾರತದ ಆರ್ಥಿಕತೆಯು 7% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತದೆ.

ಈ ಹಣಕಾಸು ವರ್ಷದಲ್ಲಿ 6.5% ಮತ್ತು ಮುಂದಿನ ವರ್ಷ 5.3% ಹಣದುಬ್ಬರವನ್ನು ರಿಸರ್ವ್ ಬ್ಯಾಂಕ್‌ ಅಂದಾಜಿಸಿದೆ ಎಂದು ದಾಸ್ ಹೇಳಿದ್ದಾರೆ.

ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ತಡೆಯಲು ಸಾಧ್ಯವೇ?

“ಹಣದುಬ್ಬರವನ್ನು ತಡೆಯಲು ರಿಸರ್ವ್ ಬ್ಯಾಂಕ್ ರೆಪೊ ರೇಟ್ ಹೆಚ್ಚಿಸುತ್ತದೆ. ಆದರೆ ನಿಜಕ್ಕೂ ರೆಪೊ ರೇಟ್ ಹೆಚ್ಚಳದಿಂದ ಹಣದುಬ್ಬರ ನಿಯಂತ್ರಣ ಸಾಧ್ಯವೇ?” ಎಂಬ ಪ್ರಶ್ನೆ ನಮ್ಮ ಮುಂದಿದೆ.

ಆರ್ಥಿಕ ವಿಶ್ಲೇಷಕರಾದ ಶಿವಸುಂದರ್‌ ಅವರು ‘ನಾನುಗೌರಿ.ಕಾಂ’ ಜೊತೆ ಮಾತನಾಡಿ, “ಹಣವನ್ನು ರಿಸರ್ವ್ ಬ್ಯಾಂಕ್‌ ಪ್ರಿಂಟ್ ಮಾಡುತ್ತದೆ. ರಿಸರ್ವ್ ಬ್ಯಾಂಕ್‌ನಿಂದ ಹಣವನ್ನು ಇತರ ಬ್ಯಾಂಕ್‌ಗಳು ತೆಗೆದುಕೊಳ್ಳುತ್ತವೆ. ಅದು ಸಾಲದ ರೂಪದಲ್ಲಿ ಇರುತ್ತದೆ. ಈ ಸಾಲದ ಬಡ್ಡಿ ದರವೇ ರೆಪೊ ಆಗಿದೆ. ರೆಪೊ ರೇಟ್‌ ಹೆಚ್ಚಾದರೆ ವಾಣಿಜ್ಯ ಬ್ಯಾಂಕ್‌ಗಳು ನೀಡುವ ಇತರ ಸಾಲದಲ್ಲೂ ಬಡ್ಡಿ ಹೆಚ್ಚಳವಾಗುತ್ತದೆ” ಎಂದು ವಿವರಿಸಿದರು.

ಮುಂದುವರಿದು, “ಬಡ್ಡಿ ದರ ಹೆಚ್ಚಾದಾಗ ಜನರು ಸಾಲ ತೆಗೆದುಕೊಳ್ಳುವುದನ್ನೂ ಕಡಿಮೆ ಮಾಡುತ್ತಾರೆ. ಸಾಲ ತೆಗೆದುಕೊಳ್ಳುವುದು ಕಡಿಮೆಯಾದಾಗ ಆರ್ಥಿಕತೆಯಲ್ಲಿ ನಗದಿನ ಹರಿವೂ ಕಡಿಮೆಯಾಗುತ್ತದೆ. ನಗದಿನ ಹರಿವು ಕಡಿಮೆಯಾದರೆ ಹಣದುಬ್ಬರ ಕಡಿಮೆಯಾಗುತ್ತದೆ ಎಂಬುದು ಆರ್‌ಬಿಐ ಮಾಡುವ ಯೋಚನೆ. ಹಣದುಬ್ಬರಕ್ಕೆ ಕೇವಲ ನಗದಿನ ಏರಿಳಿತ ಮಾತ್ರ ಕಾರಣವಲ್ಲ” ಎಂದು ತಿಳಿಸಿದರು.

“ಹಣದುಬ್ಬರಕ್ಕೆ ಆರ್ಥಿಕತೆಯಲ್ಲಿನ ಬೇಡಿಕೆ, ಪೂರೈಕೆಯ ಕೊರತೆ, ಖರೀದಿನ ಸಾಮರ್ಥ್ಯ ಕುಸಿತ ಇವೆಲ್ಲವೂ  ಕಾರಣವಾಗಿರುತ್ತವೆ. ನಗದಿನ ಹರಿವಿನ ನಿಯಂತ್ರಣದಿಂದ ಇವೆಲ್ಲವನ್ನೂ ಸರಿದೂಗಿಸಲು ಸಾಧ್ಯವಿಲ್ಲ. ಸಾಲದ ಕೊರತೆಯನ್ನು ಉಂಟು ಮಾಡಿದರೆ ಒಟ್ಟಾರೆ ಆರ್ಥಿಕ ಚಟುವಟಿಕೆಗಳೂ ಕಡಿಮೆಯಾಗುತ್ತವೆ. ಆರ್ಥಿಕ ಚಟುವಟಿಕೆಗಳು ಕಡಿಮೆಯಾದಾಗ, ತೆರಿಗೆ ಸಂಗ್ರಹವೂ ಕುಸಿತವಾಗುತ್ತದೆ, ನಿರುದ್ಯೋಗವೂ ಹೆಚ್ಚುತ್ತದೆ. ಜನರ ಖರೀದಿ ಸಾಮರ್ಥ್ಯವೂ ಕಡಿಮೆಯಾಗುತ್ತದೆ. ಇದರಿಂದಾಗಿ ಹಣದುಬ್ಬರ ಹೆಚ್ಚೂ ಆಗಬಹುದು” ಎಂಬ ಅಭಿಪ್ರಾಯಪಟ್ಟರು.

“ಹಣದುಬ್ಬರ ಕಡಿಮೆ ಮಾಡಲು ಆರ್‌ಬಿಐ ಯೋಚಿಸುತ್ತದೆ. ನಗದಿನ ಹರಿವಿನ ವಿಚಾರದಲ್ಲಿ ಒಟ್ಟಾರೆ ಆರ್ಥಿಕ ಚಟುವಟಿಕೆಯನ್ನು ನೋಡುವುದು ಅತ್ಯಂತ ಸೀಮಿತ ತಿಳಿವಳಿಕೆ. ರೆಪೊ ರೇಟ್ ಹೆಚ್ಚಾದಾಗ ಬಡ್ಡಿ ದರ ಹೆಚ್ಚಾಗಿ ಹಣದ ಹರಿವು ಕಡಿಮೆಯಾಗುತ್ತದೆ ಎಂಬುದಷ್ಟೇ ತಕ್ಷಣಕ್ಕೆ ಕಣ್ಣಿಗೆ ಕಾಣುತ್ತದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....