Homeಮುಖಪುಟಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಮೋದಿ ಮಿತ್ರನ ಸಂಪತ್ತು ಹೆಚ್ಚಲು ಯಾವ ಮ್ಯಾಜಿಕ್ ನಡೆದಿದೆ?: ಖರ್ಗೆ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ

- Advertisement -
- Advertisement -

ಕೇಂದ್ರ ಸರ್ಕಾರವು ಅದಾನಿ ಗ್ರೂಪ್‌ನೊಂದಿಗೆ ಹೊಂದಿರುವ ಸಂಪರ್ಕದ ಸಂಬಂಧ ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆಯವರು ಸಂಸತ್ತಿನಲ್ಲಿ ಬುಧವಾರ ವಾಗ್ದಾಳಿ ನಡೆಸಿದರು.

ಎರಡೂವರೆ ವರ್ಷಗಳಲ್ಲಿ ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರ ಸಂಪತ್ತು 13 ಪಟ್ಟು ಹೆಚ್ಚಾಗಿದೆ ಎಂದು ದೂರಿದರು. ಇದು ರಾಜ್ಯಸಭೆಯಲ್ಲಿ ಭಾರೀ ಕೋಲಾಹಲಕ್ಕೆ ಕಾರಣವಾಯಿತು.

“2014ರಲ್ಲಿ ಪ್ರಧಾನಿ ಮೋದಿಯವರು ನಾ ಖಾವೂಂಗಾ ನಾ ಖಾನೇ ದುಂಗಾ (ನಾನು ತಿನ್ನಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳಿದ್ದರು. ಕೆಲವು ಕೈಗಾರಿಕೋದ್ಯಮಿಗಳನ್ನು ತಿನ್ನಲು ಏಕೆ ಬಿಡುತ್ತಿದ್ದಾರೆ ಎಂದು ಈಗ ನಾನು ಕೇಳಬಯಸುತ್ತೇನೆ” ಎಂದು ಖರ್ಗೆ ಪ್ರಶ್ನಿಸಿದರು.

“ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಕುಟುಕಿದರು. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆಯನ್ನು ಆರಂಭಿಸಲು ರಾಜ್ಯಸಭೆಯು ಬುಧವಾರ ‘ಶೂನ್ಯ ವೇಳೆ’ ಮತ್ತು ‘ಪ್ರಶ್ನೋತ್ತರ ಅವಧಿ’ ಎರಡನ್ನೂ ರದ್ದುಗೊಳಿಸಿತು.

ಅದಾನಿ ಸಮೂಹದ ಮೇಲೆ ಹಿಂಡೆನ್‌ಬರ್ಗ್‌ ರಿಸರ್ಚ್‌ ಮಾಡಿರುವ ಆರೋಪಗಳ ಕುರಿತು ಜಂಟಿ ಸಂಸದೀಯ ಸಮಿತಿಯು ತನಿಖೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸುತ್ತಿರುವುದು ಸದನಗಳಲ್ಲಿ ಸದ್ದು ಮಾಡುತ್ತಿದೆ.

ಅದಾನಿ ಗ್ರೂಪ್‌ನೊಂದಿಗೆ ಸಾರ್ವಜನಿಕ ವಲಯದ ಎಲ್‌ಐಸಿ ಮತ್ತು ಎಸ್‌ಬಿಐ ಹಣವನ್ನೂ ಹೂಡಿಕೆ ಮಾಡಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಉಂಟಾಗಿದೆ. ಅದಾನಿ ಗ್ರೂಪ್ ಷೇರುಗಳ ಇತ್ತೀಚಿನ ತೀವ್ರ ಕುಸಿತವು ಸಾಮಾನ್ಯ ಜನರ ಹಣವನ್ನು ಒಳಗೊಂಡಿರುವ ‘ಮೆಗಾ ಹಗರಣ’ ಎಂದು ವಿರೋಧ ಪಕ್ಷಗಳು ಬಣ್ಣಸಿವೆ. ಅದಾನಿ ಹಗರಣ ಸಂಬಂಧ ಯಾವ ಕ್ರಮ ಜರುಗಿಸಲಾಗಿದೆ ಎಂದು ಪ್ರತಿಪಕ್ಷಗಳು ಸರ್ಕಾರವನ್ನು ಪ್ರಶ್ನಿಸುತ್ತಿವೆ.

ಕಾಂಗ್ರೆಸ್‌ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಬುಧವಾರ ಸದನದಲ್ಲಿ ಮಾತನಾಡುತ್ತಾ, “ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು.

ಖರ್ಗೆ ಅವರ ಆರೋಪಗಳಿಗೆ ಆಕ್ಷೇಪ ವ್ಯಕ್ತಪಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, “ಅವರು (ಪ್ರತಿಪಕ್ಷಗಳು) ಸೂಕ್ಷ್ಮವಾಗಿ ಮತ್ತು ಬಹಿರಂಗವಾಗಿ, ಪ್ರಧಾನಿ ವಿರುದ್ಧ ಪದೇ ಪದೇ ಚುಚ್ಚು ಮಾತುಗಳನ್ನಾಡುತ್ತಿದ್ದಾರೆ” ಎಂದು ತಿಳಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗಳನ್ನು ಖಂಡಿಸಿದ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ, ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್, “ಖರ್ಗೆ ಅವರ ಆರೋಪವನ್ನು ಸಾಬೀತುಪಡಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದರು.

“ಉದ್ದೇಶಪೂರ್ವಕ ಸಂಪತ್ತಿನ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ಅದು ಷೇರು ಮಾರುಕಟ್ಟೆ ಲೆಕ್ಕಾಚಾರವಾಗಿದೆ. ಅದರಲ್ಲಿ ಸರ್ಕಾರದ ಪಾತ್ರವಿಲ್ಲ” ಎಂದಿದ್ದಾರೆ ಗೋಯಲ್.

“ಈ ಮೌಲ್ಯಮಾಪನ ಹೇಗಿರುತ್ತದೆ ಎಂಬುದನ್ನು ಮಾಜಿ ಹಣಕಾಸು ಸಚಿವರಿಂದ ಕಲಿಯಬೇಕೆಂದು ನಾನು ಅವರಲ್ಲಿ ಒತ್ತಾಯಿಸುತ್ತೇನೆ” ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿರಿ: ರೈತರ ಸಾಲಮನ್ನಾದಿಂದ ದೇಶಕ್ಕೆ ಉಪಯೋಗವಾಗಿಲ್ಲ; ತೇಜಸ್ವಿ ಸೂರ್ಯ ಹೇಳಿಕೆಗೆ ಮಣ್ಣಿನ ಮಕ್ಕಳ ಆಕ್ರೋಶ

ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ಪ್ರಧಾನಿ ಮೋದಿಯವರ ಮೇಲೆ ಕಟುವಾದ ವಾಗ್ದಾಳಿ ನಡೆಸಿದ್ದರು. ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರ ಬೆಳವಣಿಗೆಗೆ ಮೋದಿ ಕಾರಣರು ಎಂದು ದೂರಿದ್ದರು.

ಅದಾನಿಯ ವ್ಯಾಪಾರ ಸಮೂಹಕ್ಕೆ ಅನುಕೂಲವಾಗುವಂತೆ ಹಲವಾರು ನಿಯಮಗಳನ್ನು ಬದಲಾಯಿಸಿದ್ದರಿಂದ ಅದಾನಿಯವರ ಬೆಳವಣಿಗೆಗೆ ಪ್ರಧಾನಿ ಮೋದಿ ಕಾರಣ ಎಂದು ಆರೋಪಿಸಿದ್ದರು.

ವಿಮಾನ ನಿಲ್ದಾಣಗಳ ಸಂಬಂಧ ಅನುಭವವಿಲ್ಲದವರನ್ನು ವಿಮಾನ ನಿಲ್ದಾಣಗಳ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳಬಾರದು ಎಂಬ ನಿಯಮವಿದೆ. ಈ ನಿಯಮವನ್ನು ಭಾರತ ಸರ್ಕಾರ ಬದಲಾಯಿಸಿದೆ ಎಂದು ಟೀಕಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...