Homeಮುಖಪುಟನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ: ಬಿಜೆಪಿಗರ ಟೀಕೆಗೆ ಸಂಸದೆ ಮೊಯಿತ್ರಾ ತಿರುಗೇಟು

- Advertisement -
- Advertisement -

‘ಅಸಂಸದೀಯ’ ಭಾಷೆಯನ್ನು ಬಳಸಿದ್ದಕ್ಕಾಗಿ ಬಿಜೆಪಿ ಪಕ್ಷದ ಹಲವು ನಾಯಕರಿಂದ ಟೀಕೆಗಳನ್ನು ಎದುರಿಸುತ್ತಿರುವ ಫೈರ್‌ಬ್ರಾಂಡ್ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಬುಧವಾರ ಬಜೆಟ್ ಅಧಿವೇಶನದ ಸದನದಲ್ಲಿ ”ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ” ಎಂದು ಹೇಳುವ ಮೂಲಕ ಟೀಕೆಗೆ ತಿರುಗೇಟು ನೀಡಿದ್ದಾರೆ.

“ದೆಹಲಿಯ ಆ ಪ್ರತಿನಿಧಿ ನನ್ನನ್ನು ಕೆಣಕಿದ್ದಾರೆ. ಹಾಗಾಗಿ ನಾನು ಅವರಿಗೆ ಹೇಳುವುದು ಇಷ್ಟೇ, ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ ಎಂದು. ಬಿಜೆಪಿಯವರು ನನಗೆ ಸಂಸದೀಯ ಶಿಷ್ಟಾಚಾರ ಕಲಿಸುತ್ತಾರೆ ಎಂದರೆ ನನಗೆ ಆಶ್ಚರ್ಯವಾಗುತ್ತದೆ ಎಂದು ಮೊಯಿತ್ರಾ ಹೇಳಿದರು.

ಮಂಗಳವಾರ ಲೋಕಸಭೆಯಲ್ಲಿ ಅದಾನಿ ವಿಷಯದ ಕುರಿತು ಮಾತನಾಡಿದ ನಂತರ ಮೊಯಿತ್ರಾ ಅವರು ಸದನದಲ್ಲಿ ನಿಂದನೀಯ ಪದವನ್ನು ಬಳಸಿದ್ದಾರೆ ಎಂದು ಹೇಳಲಾಗಿತ್ತು.

“ಬಿಜೆಪಿಯವರು ನನಗೆ ಹೆಣ್ಣಾಗಿ ಇಂತಹ  ಬಳಸುತ್ತಾರೆ ಎಂದು ಹೇಳುತ್ತಾರೆ, ನಾನು ಅವರಿಗೆ ಪ್ರತಿಕ್ರಿಯೆ ನೀಡಲು ಗಂಡಾಗಬೇಕೆ? ಇವರಲ್ಲಿ ಪಿತೃಪ್ರಭುತ್ವವಿದೆ ಎಂದು ಹೇಳಿದರು.

ಮೊದಲ ಬಾರಿಗೆ, ಈ ಅದಾನಿ ಕಂಪನಿ ಎಂತಹದ್ದು ಎಂದು ಭಾರತದ ಜನರಿಗೆ ತೋರಿಸಲು ಸಾಧ್ಯವಾಗಿದೆ. ಬಿಜೆಪಿ ಸರ್ಕಾರ, ಕಳೆದ 3 ವರ್ಷಗಳಿಂದ ಅದಾನಿ ಕಂಪನಿಯ ಹಗರಣವನ್ನು ಕಾರ್ಪೆಟ್ ಅಡಿಯಲ್ಲಿ ತಳ್ಳಲು ಪ್ರಯತ್ನಿಸುತ್ತಿದೆ ಆದರೆ ಇದೀಗ ಅದೆಲ್ಲವೂ ಬಯಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಮೋದಿ ಸರ್ಕಾರ ಇತಿಹಾಸವನ್ನು ಬದಲಾಯಿಸಲು ಪ್ರಯತ್ನಿಸುತ್ತಿದೆ: ಮಹುವಾ ಮೊಯಿತ್ರಾ ಆಕ್ರೋಶ

ಈ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ, ”ಎಲ್ಲರೂ ತಮ್ಮ ನಾಲಿಗೆಯನ್ನು ನಿಯಂತ್ರಣದಲ್ಲಿಟ್ಟುಕೊಂಡು ಮಾತನಾಡಬೇಕು. ಅತಿಯಾದ ಉತ್ಸಾಹ ಮತ್ತು ಭಾವನಾತ್ಮಕತೆಗೆ ಒಳಗಾಗಬಾರದು ಎಂದು ಹೇಳಿದರು.

ಮತ್ತೊಬ್ಬ ಸಂಸದರು ಮಾತನಾಡುವಾಗ ಮೊಯಿತ್ರಾ ಅವರು ನಿಂದನೆ ಮಾಡಿರುವುದು ಕೇಳಿಬಂದಿದೆ. ಆ ಪದಬಳಕೆ ದುರದೃಷ್ಟಕರ ಮತ್ತು ಕ್ಷಮೆಯಾಚಿಸುವುದು ನಿರೀಕ್ಷಿತ ಸೌಜನ್ಯ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಮೊಯಿತ್ರಾ, ”ನಾನು ಯಾವ ರೀತಿಯ ಭಾಷೆಯನ್ನು ಬಳಸಬೇಕು ಎನ್ನುವುದು ಗೊತ್ತಿದೆ. ಈ ಬಿಜೆಪಿ ನಮಗೆ ಸಂಸದೀಯ ಶಿಷ್ಟಾಚಾರವನ್ನು ಕಲಿಸುತ್ತಿರುವುದು ನನಗೆ ಆಶ್ಚರ್ಯ ತಂದಿದೆ. ನಾನು ಸೇಬನ್ನು ಸೇಬು ಎಂದು ಕರೆಯುತ್ತೇನೆ, ಕಿತ್ತಳೆ ಅಲ್ಲ..” ಎಂದು ಮತ್ತೊಮ್ಮೆ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ಶುಭದಿನವಾಗಿದೆ ಏಕೆಂದರೆ ದೇಶವು ಅದಾನಿ ಕಂಪನಿ ಯಾವ ಪ್ರಮಾಣದಲ್ಲಿ ಹಗರಣ ಮಾಡಿದೆ ಎಂದು ದೇಶದ ಜನರು ನೋಡುವಂತಾಯಿತು ಎಂದು ಹೇಳಿದರು.

“ಈ ವಿಷಯವನ್ನು ಬಿಜೆಪಿಯವರು 2019 ರಿಂದ ನಮ್ಮಿಂದ ಮುಚ್ಚಿಡಲು ಪ್ರಯತ್ನಿಸುತ್ತಿದ್ದರು. ಆದರೆ ನಿನ್ನೆ ನಾವೆಲ್ಲರೂ ಮೊದಲ ಬಾರಿಗೆ ಅದಾನಿ ಕಂಪನಿ ಏನೆಂದು ಭಾರತಕ್ಕೆ ತೋರಿಸಿದ್ದೇವೆ. ಈಗ ಬಿಜೆಪಿ ಈ ಹಗರಣವನ್ನು ಕೆಳಗೆ ತಳ್ಳಲು ಪ್ರಯತ್ನಿಸುತ್ತಿದೆ. ಕಳೆದ ಮೂರು ವರ್ಷಗಳಿಂದ ರತ್ನಗಂಬಳಿಯ ಕೆಳಗೆ ಅದಾನಿ  ಹಗರಣವನ್ನು ಬಚ್ಚಿಟ್ಟಿದ್ದರು. ಆದರೆ ನಿನ್ನೆ ಭಾರತೀಯ ಪ್ರಜಾಪ್ರಭುತ್ವಕ್ಕೆ ‘ಶುಭ್ ದಿನ್’ (ಶುಭ ದಿನ) ಏಕೆಂದರೆ ಬಿಜೆಪಿ ಮರೆಮಾಡಲು ಪ್ರಯತ್ನಿಸುತ್ತಿರುವುದನ್ನು ದೇಶದ ಜನರು ನಿಖರವಾಗಿ ನೋಡುತ್ತಿದ್ದಾರೆ. ಎಲ್ಲಾ ವಿರೋಧ ಪಕ್ಷಗಳು ಒಟ್ಟಾಗಿ ಹೊರಬಂದಿದ್ದಕ್ಕೆ ನನಗೆ ಸಂತೋಷವಾಗಿದೆ. ಅದಾನಿ ಕಂಪನಿಯ ಹಗರಣದ ವ್ಯಾಪ್ತಿಯನ್ನು ಭಾರತದ ಜನರು ನೋಡಬಹುದು.

”ನೀವು ಸದನದಲ್ಲಿ ನನ್ನ ಭಾಷಣ ಮತ್ತು ಆ ಮಹಾನುಭಾವರ ವರ್ತನೆ ನೋಡಿದ್ದರೆ ನಿಮಗೆ ಅರ್ಥವಾಗುತ್ತದೆ. ಅವರನ್ನು ನಾನು ಸಂಭಾವಿತರು ಎಂದು ಕರೆಯುವುದಿಲ್ಲ.. ದೆಹಲಿಯ ಗೌರವಾನ್ವಿತ ಪ್ರತಿನಿಧಿ ಇಡೀ ಸಮಯದಲ್ಲಿ ನನಗೆ ಮಾತನಾಡಲು ಸಹ ಅವಕಾಶ ನೀಡಲಿಲ್ಲ. ಅವರು ನನ್ನನ್ನು ನಿರಂತರವಾಗಿ ಕೆಣಕಿದರು. ಆಗ ನಾನು ಅಧ್ಯಕ್ಷರ ಬಳಿ ಐದು ಬಾರಿ ರಕ್ಷಣೆ ಕೇಳಿದೆ. ನನಗೆ ರಕ್ಷಣೆ ನೀಡಲು ಅಧ್ಯಕ್ಷರಿಗೆ ಸಾಧ್ಯವಾಗಲಿಲ್ಲ. ನಾನು ಏನು ಹೇಳಿದರೂ ದಾಖಲೆಯಲ್ಲಿ ಇಲ್ಲ” ಎಂದು ಮೊಯಿತ್ರಾ ಹೇಳಿದರು.

ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಟಿಡಿಪಿ ಸಂಸದ ಕೆ ರಾಮ್ ಮೋಹನ್ ನಾಯ್ಡು ಅವರು ಮಾತನಾಡುತ್ತಿದ್ದಾಗ, ಮೊಯಿತ್ರಾ ಅವರು ಬಿಜೆಪಿ ಸಂಸದ ರಮೇಶ್ ಬಿಧುರಿ ವಿರುದ್ಧ ಕೆಲವು ಅಸಂಸದೀಯ ಭಾಷೆಯನ್ನು ಬಳಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಸದರು ಕೆಳಮನೆಯಲ್ಲಿ ಗದ್ದಲ ಆರಂಭಿಸಿದರು.

ರಾಷ್ಟ್ರಪತಿಗಳ ಭಾಷಣದ ಮೇಲಿನ ಧನ್ಯವಾದ ನಿರ್ಣಯದ ಸಂದರ್ಭದಲ್ಲಿ ಮೊಯಿತ್ರಾ ಅವರು ಚೀನಾ, ಪೆಗಾಸಸ್, ಬಿಬಿಸಿ ಸಾಕ್ಷ್ಯಚಿತ್ರ, ಮೊರ್ಬಿ ಸೇತುವೆ ಕುಸಿತ, ರಫೇಲ್ ಮತ್ತು ಅದಾನಿ ಸಮೂಹದ ಕಂಪನಿಗಳ ಇತ್ತೀಚಿನ ಹಗರಣ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಪ್ರಸ್ತಾಪಿಸಿದರು.

ಸದನದಲ್ಲಿ ಅದಾನಿಯನ್ನು ಮಿಸ್ಟರ್ ‘ಎ’ ಎಂದು ಸ್ಪಷ್ಟವಾಗಿ ಉಲ್ಲೇಖಿಸಿ, ಅವರು ಸರ್ಕಾರವನ್ನು ಮೂರ್ಖರನ್ನಾಗಿಸಿದ್ದಾರೆ ಎಂದು ಮೊಯಿತ್ರಾ ಹೇಳಿದ್ದಾರೆ.

“ಪ್ರಧಾನ ಮಂತ್ರಿಯವರೇ, ಮಿಸ್ಟರ್ ‘ಎ’ ಎನ್ನುವ ವ್ಯಕ್ತಿ ನಿಮಗೆ ಮೋಸ ಮಾಡಿದ್ದಾರೆ. ಅವರು ನಿಮ್ಮ ನಿಯೋಗಗಳಲ್ಲಿ ನಿಮ್ಮೊಂದಿಗೆ ಪ್ರಯಾಣಿಸುತ್ತಾರೆ. ಅವರು ಭಾರತಕ್ಕೆ ಭೇಟಿ ನೀಡಿದಾಗ ರಾಷ್ಟ್ರದ ಮುಖ್ಯಸ್ಥರನ್ನು ಭೇಟಿಯಾಗುತ್ತಾರೆ. ಅವರು ತಾನೇ ಪ್ರಧಾನಿ ಎನ್ನುವಂತೆ ಬಿಂಬಿಸುತ್ತಾರೆ. ಅವರು ಪ್ರಧಾನಿಯ ಹಿಂದೆ ರಿಮೋಟ್ ಕಂಟ್ರೋಲ್ ಎಂದು ಜಗತ್ತಿಗೆ ತೋರುವಂತೆ ಮಾಡುತ್ತಾರೆ” ಎಂದು ಮೊಯಿತ್ರಾ ಹೇಳಿದರು.

”ಮಹುವಾ ಹಿಂದೆ ಯಾರಿದ್ದಾರೆ ಎಂದು ಎಲ್ಲರೂ ಕೇಳುತ್ತಿದ್ದಾರೆ. ನಕಲಿ ಸುದ್ದಿ ಬ್ರಿಗೇಡ್, ಪ್ರತಿದಿನ ಹೊಸ ಕಥೆ ಹರಿಬಿಡುತ್ತದೆ. ಆದರೆ ನನ್ನ ಹಿಂದೆ ಯಾರೂ ಇಲ್ಲ, ಮಹುವಾ ಹಿಂದೆ ಸತ್ಯ ಇದೆ” ಎಂದು ಅವರು ಪ್ರತಿಪಾದಿಸಿದರು.

ಅವರ ಹೇಳಿಕೆಗೆ ಬಿಜೆಪಿ ನಾಯಕರು ಸದನದಲ್ಲಿ ಕೋಲಾಹಲ ಸೃಷ್ಟಿಸಿದರು. ಅವರ ಭಾಷಣದ ವೇಳೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಟಿಎಂಸಿ ಸಂಸದೆ ಮೋಯಿತ್ರಾ, ”ನನ್ನನ್ನು ಕೆಣಕಲು ಮತ್ತು ಭಾಷಣದ ಹರಿವನ್ನು ಹಾಳುಮಾಡಲು ಅವರು ಈ ರೀತಿ ಮಾಡುತ್ತಿರುವುದರಿಂದ ನಾನು ಅದನ್ನು ಪುನರಾವರ್ತಿಸಬೇಕಾಗಿದೆ ಎಂದು ಹೇಳುತ್ತಾ ನಾನು ಮಾತ್ರ ಸತ್ಯದ ಹಿಂದೆ ಇದ್ದೇನೆ” ಎಂದು ಮೊಯಿತ್ರಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...