Homeಕರ್ನಾಟಕಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

ಪ್ರೇಮಿಗಳ ದಿನ ‘ಹಸು ತಬ್ಬಿಕೊಳ್ಳಿ’: ಹೊಸ ಆಚರಣೆಗೆ ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಕರೆ

- Advertisement -
- Advertisement -

ಫೆಬ್ರುವರಿ 14 ಪ್ರೇಮಿಗಳ ದಿನವನ್ನು ಆಚರಿಸಲಾಗುತ್ತಿದೆ. ಅದೇ ದಿನ “ಹಸು ತಬ್ಬಿಕೊಳ್ಳುವ ದಿನ” ಆಚರಿಸಲು ಕೇಂದ್ರೀಯ ಪಶು ಕಲ್ಯಾಣ ಮಂಡಳಿ ಮನವಿ ಮಾಡಿದೆ.

“ಅನಿಮಲ್‌ ವೆಲ್‌ಫೇರ್‌ ಆಫ್‌ ಇಂಡಿಯಾ”ದ ಅಧಿಕೃತ ವೆಬ್‌ಸೈಟ್‌ನಲ್ಲಿಈ ಕುರಿತು ಪ್ರಕಟಿಸಲಾಗಿದ್ದು, ಮಂಡಳಿಯ ಕಾರ್ಯದರ್ಶಿ ಎಸ್‌.ಕೆ.ದುತ್ತ ಅವರು ಇದಕ್ಕೆ ಸಹಿ ಮಾಡಿದ್ದಾರೆ.

ಮನವಿಯಲ್ಲಿ ಏನಿದೆ?

“ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದು ಮಂಡಲಿಯ ಮನವಿಯಲ್ಲಿ ಉದ್ದೇಶಿಸಲಾಗಿದೆ.

“ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದಿದೆ.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಲಾಗಿದೆ.

No photo description available.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿವೆ.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದಾರೆ. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದಾರೆ.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದಾರೆ.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...