Homeಮುಖಪುಟಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

ಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

- Advertisement -
- Advertisement -

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತನನ್ನು ಕೊಲ್ಲಲಾಗಿದೆ. ಕಾರು ಹತ್ತಿಸಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವರದಿಗಾರನು ಕೊನೆಯುಸಿರೆದಿದ್ದಾನೆ.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದಾರೆ.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರಕರ್ ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಪತ್ರಕರ್ತ ಶಶಿಕಾಂತ ವಾರಿಷೆ

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಪ್ರಾಥಮಿಕ ಸಾಕ್ಷ್ಯಗಳು ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಆರೋಪಿ ಅಂಬರ್ಕರ್ ಬಂಧನವಾಗಿದ್ದು ಸ್ಥಳೀಯ ವರದಿಗಾರರ ಸಂಘವು ವಾರಿಷೆಯ ಹತ್ಯೆಯನ್ನು ಖಂಡಿಸಿದೆ. ಇದನ್ನು ‘ಕೊಲೆ’ ಎಂದು ಪರಿಗಣಿಸಬೇಕೆಂದು ಮನವಿ ಮಾಡಿದೆ.

ಮಹಾರಾಷ್ಟ್ರ ಟೈಮ್ಸ್‌ನ ಆನ್‌ಲೈನ್ ವರದಿಗಾರ ಪ್ರಸಾದ್ ರಾನಡೆ ಪ್ರತಿಕ್ರಿಯಿಸಿ, “ಇದು ನಮ್ಮಲ್ಲಿ ಯಾರಾಗಾದರೂ ಆಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...