Homeಮುಖಪುಟಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

ಮಹಾರಾಷ್ಟ್ರ: ಸಿಎಂ, ಪಿಎಂಗೆ ಧನ್ಯವಾದ ಸಲ್ಲಿಸಿದ್ದ ಅಪರಾಧಿಯ ಕುರಿತು ವರದಿ ಬರೆದ ಪತ್ರಕರ್ತನ ಹತ್ಯೆ

- Advertisement -
- Advertisement -

ಅಪರಾಧ ಹಿನ್ನೆಲೆಯುಳ್ಳ ಲ್ಯಾಂಡ್‌ ಏಜೆಂಟ್ ಕುರಿತು ಫೆಬ್ರವರಿ 6ರಂದು ಮಹಾರಾಷ್ಟ್ರ ರತ್ನಗಿರಿ ಮೂಲದ ಸ್ಥಳೀಯ ದೈನಿಕವು ಮೊದಲ ಪುಟದ ವರದಿಯನ್ನು ಪ್ರಕಟಿಸಿದ ಕೆಲವೇ ಗಂಟೆಗಳ ಬಳಿಕ, ವರದಿ ಬರೆದ ಪತ್ರಕರ್ತನನ್ನು ಕೊಲ್ಲಲಾಗಿದೆ. ಕಾರು ಹತ್ತಿಸಿ ಗಾಯಗೊಳಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ವರದಿಗಾರನು ಕೊನೆಯುಸಿರೆದಿದ್ದಾನೆ.

‘ಮಹಾನಗರಿ ಟೈಮ್ಸ್’ ಪತ್ರಿಕೆಯ ಪ್ರಾದೇಶಿಕ ಮುಖ್ಯಸ್ಥ 48 ವರ್ಷದ ಶಶಿಕಾಂತ್ ವಾರಿಷೆ ಅವರು ಸ್ಥಳೀಯ ಪ್ರಭಾವಿ ವ್ಯಕ್ತಿಯಾದ ಪಂಢರಿನಾಥ್ ಅಂಬರ್ಕರ್ ಅವರ ಬಗ್ಗೆ ವರದಿಯನ್ನು ಬರೆದಿದ್ದರು.

“ರಿಫೈನರಿ ಪರ ಏಜೆಂಟ್ ಆಗಿರುವ ವ್ಯಕ್ತಿಯು ಪ್ರಧಾನ ಮಂತ್ರಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಜೊತೆಯಲ್ಲಿ ತನ್ನ ಫೋಟೋಗಳನ್ನು ಏಕೆ ಹಂಚಿಕೊಳ್ಳುತ್ತಿದ್ದಾನೆ?” ಎಂದು ವರದಿಯಲ್ಲಿ ಗಮನ ಸೆಳೆಯಲಾಗಿತ್ತು.

ಕೊಂಕಣಕ್ಕೆ ಸಂಸ್ಕರಣಾಗಾರ ಯೋಜನೆಯನ್ನು ತಂದಿದ್ದಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿ ಲ್ಯಾಂಡ್ ಏಜೆಂಟ್ ತನ್ನ ಫೋಟೋಗಳೊಂದಿಗೆ ಪೋಸ್ಟರ್‌ಗಳನ್ನು ಹಾಕಿದ್ದನು.

ಸುದ್ದಿಯು ವಾರಿಷೆ ಅವರ ಬೈಲೈನ್ ಹೊಂದಿರಲಿಲ್ಲ. ಆದರೆ ಇದನ್ನು ಬರೆದವರು ಯಾರೆಂಬುದು ಅಂಬರ್ಕರ್‌ಗೆ ಚೆನ್ನಾಗಿ ಗೊತ್ತಿತ್ತು ಎಂದು ವಾರಿಷೆ ಸಹೋದ್ಯೋಗಿಗಳು ಹೇಳಿದ್ದಾರೆ.

ವರದಿ ಪ್ರಕಟವಾದ ದಿನ ಅಂದು ಮಧ್ಯಾಹ್ನ 1.30ರ ಸುಮಾರಿಗೆ ವಾರಿಷೆಯವರ ಮೇಲೆ ದಾಳಿ ಮಾಡಲಾಯಿತು. ರತ್ನಗಿರಿಯ ಮುನ್ಸಿಪಲ್ ಕೌನ್ಸಿಲ್ ರಾಜಾಪುರದ ಪೆಟ್ರೋಲ್ ಪಂಪ್‌ನ ಹೊರಗೆ ಈ ಘಟನೆ ನಡೆಯಿತು. ವಾರಿಷೆ ತನ್ನ ದ್ವಿಚಕ್ರ ವಾಹನಕ್ಕೆ ಪೆಟ್ರೊಲ್ ಹಾಕಿಸಲು ನಿಂತಿದ್ದಾಗ ಅಂಬರ್ಕರ್ ತನ್ನ ಮಹೀಂದ್ರ ಥಾರ್ ಎಸ್‌ಯುವಿಯನ್ನು ವಾರಿಷೆ ಮೇಲೆ ಹತ್ತಿಸಿ ಸುಮಾರು 100 ಮೀಟರ್ ಎಳೆದೊಯ್ದಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ವಾರಿಷೆಯವರನ್ನು, ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಾಯಗೊಂಡು ಒಂದು ದಿನದ ನಂತರ ಫೆಬ್ರವರಿ 7 ರಂದು ಅವರು ನಿಧನರಾದರು.

ಸ್ಥಳದಿಂದ ಪರಾರಿಯಾಗಿದ್ದ ಅಂಬರಕರ್ ನನ್ನು ಫೆ.7ರ ಸಂಜೆ ಬಂಧಿಸಿ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಕೊಲೆಯಾದ ಪತ್ರಕರ್ತ ಶಶಿಕಾಂತ ವಾರಿಷೆ

“ನಾವು ಆರಂಭದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 (ಕೊಲೆಗೆ ಸಮನಾಗಿರುವುದಿಲ್ಲ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ. ಆದರೆ ವಾರಿಷೆಯವರನ್ನು ಕೊಲ್ಲುವ ಉದ್ದೇಶವಿದ್ದದ್ದು ಸಾಕ್ಷ್ಯಗಳಿಂದ ಕಂಡುಬಂದ ಬಳಿಕ ಐಪಿಸಿಯ ಸೆಕ್ಷನ್ 302 (ಕೊಲೆ) ಅಡಿಯಲ್ಲೂ ಆರೋಪ ಹೊರಿಸಲಾಗಿದೆ. ಪ್ರಾಥಮಿಕ ಸಾಕ್ಷ್ಯಗಳು ಅಂಬರ್ಕರ್‌ ಕೊಲ್ಲುವ ಉದ್ದೇಶದಿಂದಲೇ ಬಂದಿದ್ದನು ಎಂದು ತಿಳಿಸುತ್ತಿವೆ. ಅಂಬರ್ಕರ್‌ನನ್ನು ಫೆಬ್ರವರಿ 14ರವರೆಗೆ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ” ಎಂದು ರತ್ನಗಿರಿ ಪೊಲೀಸ್ ವರಿಷ್ಠಾಧಿಕಾರಿ ಧನಂಜಯ್ ಕುಲಕರ್ಣಿ ಮಾಹಿತಿ ನೀಡಿದ್ದಾರೆ.

ಆರೋಪಿ ಅಂಬರ್ಕರ್ ಬಂಧನವಾಗಿದ್ದು ಸ್ಥಳೀಯ ವರದಿಗಾರರ ಸಂಘವು ವಾರಿಷೆಯ ಹತ್ಯೆಯನ್ನು ಖಂಡಿಸಿದೆ. ಇದನ್ನು ‘ಕೊಲೆ’ ಎಂದು ಪರಿಗಣಿಸಬೇಕೆಂದು ಮನವಿ ಮಾಡಿದೆ.

ಮಹಾರಾಷ್ಟ್ರ ಟೈಮ್ಸ್‌ನ ಆನ್‌ಲೈನ್ ವರದಿಗಾರ ಪ್ರಸಾದ್ ರಾನಡೆ ಪ್ರತಿಕ್ರಿಯಿಸಿ, “ಇದು ನಮ್ಮಲ್ಲಿ ಯಾರಾಗಾದರೂ ಆಗಬಹುದು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...