Homeಕರ್ನಾಟಕಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

ಅನರ್ಹ ಶಾಸಕರಿಗಿರುವುದು ಒಂದೇ ದಾರಿ- ವಿಧಾನಸಭೆ ವಿಸರ್ಜನೆ, ಆದರೆ ಯಡಿಯೂರಪ್ಪ ಒಪ್ಪುತ್ತಾರಾ?

- Advertisement -
- Advertisement -

ಅನರ್ಹ ಶಾಸಕರು ಈಗ ಇರುವುದು ಮೂರೇ ಜನ. ಆದರೆ, ಉಳಿದವರೂ ಅನರ್ಹರಾಗುವ ಸಾಧ್ಯತೆ ಇದ್ದೇ ಇದೆ. ಸ್ಪೀಕರ್ ರಮೇಶ್ ಕುಮಾರ್ ಅವರ ಆದೇಶದಂತೆ ಅವರು ಈಗ ಅನರ್ಹರಾಗುತ್ತಿರುವುದಷ್ಟೇ ಅಲ್ಲ, ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ, ಅಂದರೆ 2023ರವರೆಗೆ ಮತ್ತೆ ಚುನಾವಣೆಗೆ ನಿಲ್ಲುವಂತೆಯೂ ಇಲ್ಲ.

ಹೌದು, ಇದಕ್ಕೆ ಅವರಿಗೆ ಕೂಡಲೇ ಇರುವ ದಾರಿಯೆಂದರೆ ಸುಪ್ರೀಂಕೋರ್ಟಿಗೆ ಹೋಗುವುದು. ಆದರೆ ಸುಪ್ರೀಂಕೋರ್ಟು ಏನು ಹೇಳುತ್ತದೆಂದು ಊಹಿಸುವಂತಿಲ್ಲ. ಸ್ಪೀಕರ್ ಮಾತಾಡುತ್ತಿರುವ ಭಾಷೆ ಮತ್ತು ಕರ್ನಾಟಕದ ವಿಧಾನಸಭೆಯ ನಡಾವಳಿಗಳು ಪಕ್ಷಾಂತರ ನಿಷೇಧಕ್ಕೆ ಪ್ರೋತ್ಸಾಹ ಕೊಡುವುದು ನಾಚಿಕೆಗೇಡು ಎಂಬ ಸಂದೇಶವನ್ನು ಸಾರ್ವಜನಿಕವಾಗಿ ನೀಡಿಯಾಗಿದೆ. ಹಾಗಾಗಿಯೇ ವಾಚಾಮಗೋಚರವಾಗಿ ಆಡಳಿತ ಪಕ್ಷಗಳ ಸದಸ್ಯರು ಬಯ್ಯುತ್ತಿದ್ದರೂ, ಬಿಜೆಪಿಯ ಸದಸ್ಯರು ಬಾಯೇ ತೆರೆಯಲಿಲ್ಲ. ಗಲಾಟೆ ಆದರೆ ಅನಗತ್ಯವಾಗಿ ಸದನದ ಕಲಾಪ ಎಳೆಯಬಹುದು ಅಥವಾ ಗಲಾಟೆ ನೆಪದಲ್ಲಿ ಕೆಲವರನ್ನು ಅಮಾನತುಗೊಳಿಸಿದರೆ ಕಷ್ಟ ಎಂಬುದಷ್ಟೇ ಅದಕ್ಕೆ ಕಾರಣವಲ್ಲ.

ತಮ್ಮ ಆಪರೇಷನ್ ಕಮಲ ಎಂಬ ಅಸಹ್ಯವನ್ನು ಸಮರ್ಥಿಸಿಕೊಳ್ಳುವುದು ಬಿಜೆಪಿಗರಿಗೆ ಸುಲಭವಾಗಿರಲಿಲ್ಲ. ಹೀಗಿರುವಾಗ ಸುಪ್ರೀಂಕೋರ್ಟು ಅವರ ಸಮರ್ಥನೆಗೆ ಬರುತ್ತದೆ ಎಂಬ ನಿರೀಕ್ಷೆ ಇಟ್ಟುಕೊಳ್ಳಲಾಗದು. ಹಾಗಾಗಿ ಅನರ್ಹರಾಗಿರುವ ಮತ್ತು ಮುಂದೆ ಆಗಬಲ್ಲವರಿಗೆ ಇರುವುದು ಒಂದೇ ದಾರಿ. ಅದು ವಿಧಾನಸಭೆ ವಿಸರ್ಜನೆ ಆದರೆ ಮತ್ತೆ ಗೆದ್ದು ಬರುವುದು.

ಇದಕ್ಕೆ ವಿಸರ್ಜನೆಯೇ ಏಕಾಗಬೇಕು? ಏಕೆಂದರೆ ಅನರ್ಹತೆಗೊಂಡಿರುವುದು ಇಡೀ ಅವಧಿಗೆ. ಅಂದರೆ, ಒಂದು ವೇಳೆ ಮತ್ತೆ ಉಪಚುನಾವಣೆ ನಡೆದರೂ ಸ್ಪರ್ಧಿಸಬಾರದು ಎಂದಾಗಿಬಿಟ್ಟರೆ, ಬಿಜೆಪಿಯು ಅದೇ ಕ್ಷೇತ್ರದ ಬಿಜೆಪಿಯ ಸೋತ ಅಭ್ಯರ್ಥಿಗೆ ಟಿಕೆಟ್ ಕೊಡಲು ಮುಂದಾಗಬಹುದು. ಹಾಗೇನಾದರೂ ಆದರೆ, ಸದರಿ ಅನರ್ಹ ಶಾಸಕರಿಗೆ ಅದು ರಾಜಕೀಯ ಸಮಾಪ್ತಿಯಾಗಿಬಿಡುತ್ತದೆ.

ಆದರೆ, ಈಗಲೇ 76 ವರ್ಷವಾಗಿರುವುದರಿಂದ ಸಿಎಂ ಕುರ್ಚಿಯ ಕನಸಿಗೆ ಕಲ್ಲು ಹಾಕುತ್ತಿರುವ ಹೈಕಮ್ಯಾಂಡ್ ಮತ್ತೆ ಬಹುಮತ ಸಿಕ್ಕರೂ ತನ್ನನ್ನು ಮುಖ್ಯಮಂತ್ರಿ ಮಾಡದೇ ಹೋಗಬಹುದೆನ್ನುವ ಆತಂಕ ಯಡಿಯೂರಪ್ಪನವರದ್ದು. ಹೇಗೂ ಕೇಂದ್ರದಲ್ಲಿ ಅಧಿಕಾರ ಇರುವುದರಿಂದ ರಾಜ್ಯಪಾಲರಾಗಿ ಎಂದು ಹೇಳುವ ಸಾಧ್ಯತೆ ಇದೆ. ರಾಜ್ಯಪಾಲನಾಗಿ ಕೂರುವ ವ್ಯಕ್ತಿತ್ವ, ಮನಸ್ಥಿತಿ ಯಡಿಯೂರಪ್ಪನವರದ್ದಲ್ಲ. ಹಾಗಾಗಿ ವಿಧಾನಸಭೆ ವಿಸರ್ಜನೆಗೆ ಅವರು ಒಪ್ಪಲಿಕ್ಕಿಲ್ಲ.

ಒಟ್ಟಿನಲ್ಲಿ ಪಕ್ಕಾ ತ್ರಿಶಂಕು ಸ್ಥಿತಿ ಅನರ್ಹ ಶಾಸಕರಿಗೆ ಏರ್ಪಟ್ಟಿದೆ. ಇದು ಎಷ್ಟು ಬೇಗ ನಿವಾರಣೆಯಾಗಬಹುದು ಎಂಬುದನ್ನು ಯಾರೂ ಹೇಳುವ ಸ್ಥಿತಿಯಲ್ಲಿಲ್ಲ. ಈ ತ್ರಿಶಂಕು ಸ್ಥಿತಿ ಕೇವಲ ಅವರದ್ದಾಗಿರದೇ ರಾಜ್ಯ ಸರ್ಕಾರದ್ದು ಮತ್ತು ರಾಜ್ಯದ ಜನತೆಯದ್ದೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...