Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...