Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...