Homeಮುಖಪುಟರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಗುರುವಾರ ಸದನವನ್ನುದ್ದೇಶಿಸಿ ಮಾತನಾಡುವಾಗ ತಮ್ಮ ಕೆಲವು ಹೇಳಿಕೆಗಳನ್ನು ಕಡತದಿಂದ ತಗೆದುಹಾಕಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು.

ಬುಧವಾರ ಸದನದಲ್ಲಿ ಮಲ್ಲಿಕಾರ್ಜುನ ಖರ್ಗೆಯವರು, “ಕಳೆದ ಎರಡೂವರೆ ವರ್ಷಗಳಲ್ಲಿ” ಅದಾನಿ ಸಮೂಹದ ಸಂಪತ್ತಿನ ಏರಿಕೆಯನ್ನು ಪ್ರಶ್ನಿಸಿ ಪ್ರಧಾನಿ ಮೋದಿ ಮತ್ತು ಅವರ ಸರ್ಕಾರವನ್ನು ಗುರಿಯಾಗಿಸಿ ಟೀಕಿಸಿದ್ದರು. ಆದರೆ ಆ ನಂತರ ಸದನದ ದಾಖಲೆಗಳಿಂದ ಖರ್ಗೆಯವರ ಕೆಲವು ಟೀಕೆಗಳನ್ನು ತೆಗೆದುಹಾಕಲಾಗಿದೆ.

ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆಯವರು ಅದಾನಿ ಸಂಸ್ಥೆಯ ವಂಚನೆ ಬಗ್ಗೆ ಮಾತನಾಡುತ್ತ ಪ್ರಧಾನಿಯನ್ನು ಟೀಕಿಸಿದ್ದಾರೆ. ಆದರೆ ಅದನ್ನು ರಾಜ್ಯಸಭಾ ಕಡತದಿಂದ ತಗೆದುಹಾಕಲಾಗಿದೆ. ಇದನ್ನು ನಾವು ‘ಸೆನ್ಸಾರ್‍‌ಶಿಪ್’ ಎಂದು ಹೇಳುತ್ತೇವೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

”ಪ್ರಧಾನಿ ಮೋದಿಯವರ ಆತ್ಮೀಯ ಸ್ನೇಹಿತರೊಬ್ಬರ ಸಂಪತ್ತು 2.5 (ಎರಡೂವರೆ) ವರ್ಷಗಳಲ್ಲಿ 13 ಪಟ್ಟು ಹೆಚ್ಚಾಗಿದೆ. 2014ರಲ್ಲಿ 50,000 ಕೋಟಿಯಷ್ಟಿದ್ದ ಅವರ ಸಂಪತ್ತು 2019ರಲ್ಲಿ 1 ಲಕ್ಷ ಕೋಟಿ ಆಯಿತು. ಕೇವಲ ಎರಡು ವರ್ಷಗಳಲ್ಲಿ ಅವರ ಆಸ್ತಿ 12 ಲಕ್ಷ ಕೋಟಿ ರೂ.ಗೆ ತಲುಪಲು ಏನೆಲ್ಲಾ ಮ್ಯಾಜಿಕ್ ನಡೆದಿದೆ ಎಂದು ನನಗೆ ಗೊತ್ತಿಲ್ಲ” ಎಂದು ಖರ್ಗೆ ಕುಟುಕಿದ್ದಾರೆ. ಇದರ ನಡುವೆ ಬಿಜೆಪಿ ಸಂಸದರು ಪ್ರತಿಭಟನೆಯನ್ನೂ ನಡೆಸಿದ್ದಾರೆ ಎಂದರು.

ಇದನ್ನೂ ಓದಿ: ರಾಹುಲ್ ಗಾಂಧಿ ಪಪ್ಪು ಅಲ್ಲ, ಅವರು ಬಿಜೆಪಿಗರನ್ನೇ ಪಪ್ಪು ಮಾಡಿದ್ದಾರೆ: ಆದಿರ್ ಚೌಧರಿ

”ನಾನು ಸತ್ಯವನ್ನು ಮಾತನಾಡಿದರೆ ಅದು ದೇಶವಿರೋಧಿಯಾಗುತ್ತದೆಯೇ? ನಾನು ದೇಶವಿರೋಧಿ ಅಲ್ಲ, ನಾನು ಇಲ್ಲಿ ಎಲ್ಲರಿಗಿಂತಲೂ ಹೆಚ್ಚು ದೇಶಭಕ್ತನಾಗಿದ್ದೇನೆ. ನಾನು ‘ಭೂಮಿ-ಪುತ್ರ’. ನೀವು ದೇಶವನ್ನು ಲೂಟಿ ಮಾಡುತ್ತಿದ್ದೀರಿ, ಆದರೆ ನನ್ನನ್ನು ದೇಶವಿರೋಧಿ ಎನ್ನುತ್ತಿದ್ದೀರಿ” ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಯಾವುದಕ್ಕೂ ಹೆದರುವುದಿಲ್ಲ ಎನ್ನುವುದಾದರೆ, ಅದಾನಿ-ಹಿಂಡನ್‌ಬರ್ಗ್ ವಿವಾದದ ಕುರಿತು ಜಂಟಿ ಸಂಸದೀಯ ತನಿಖೆ ನಡೆಸಲು ಯಾಕೆ ಹೆದರುತ್ತಿದ್ದಾರೆ ಎಂದು ಖರ್ಗೆ ಪ್ರಶ್ನಿಸಿದರು. ಖರ್ಗೆಯವರ ಈ ಹೇಳಿಕೆಗಳಲ್ಲಿ ಕೆಲವನ್ನು ಕಡತದಿಂದ ತಗೆದುಹಾಕಲಾಗಿದೆ.

ರಾಷ್ಟ್ರಪತಿಗಳ ಭಾಷಣಕ್ಕೆ ಧನ್ಯವಾದ ನಿರ್ಣಯದ ಮೇಲಿನ ಚರ್ಚೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಚರ್ಚೆಗಳು ಜೋರಾಗಿ ನಡೆದವು. ಇಂದು ಉಭಯ ಸದನಗಳು ಕೇಂದ್ರ ಬಜೆಟ್ 2023 ಅನ್ನು ಚರ್ಚಿಸಲು ಸಿದ್ಧವಾಗಿವೆ.

ಇಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ನೀಡಲಿದ್ದಾರೆ. ಬುಧವಾರ ಲೋಕಸಭೆಯಲ್ಲಿ ಮಾಡಿದ ಭಾಷಣದಲ್ಲಿ, 140 ಕೋಟಿ ಜನರು ತಮ್ಮ ಸರ್ಕಾರದ ಮೇಲೆ ನಂಬಿಕೆ ಇಟ್ಟಿರುವ “ರಕ್ಷಣಾತ್ಮಕ ಗುರಾಣಿ” ಎಂದು ಪ್ರಧಾನಿ ಮೋದಿ ಹೇಳಿದರು. ವಿಪಕ್ಷಗಳ ಆರೋಪಗಳಿಂದ ಅಥವಾ ಸುಳ್ಳು ಆರೋಪಗಳಿಂದ ಜನರ ನಂಬಿಕೆಯನ್ನು ಸುಳ್ಳು ಮಾಡಲು ಸಾಧ್ಯವಿಲ್ಲ ಎಂದರು.

ಈ ನಡುವೆ ಪ್ರತಿಪಕ್ಷಗಳು “ಅದಾನಿ, ಅದಾನಿ,” ಮತ್ತು “ಜೆಪಿಸಿ, ಜೆಪಿಸಿ” ಎಂದು ಕೂಗಿದರು. ಆಗ ಮೋದಿ ಸ್ವಲ್ಪ ಹೊತ್ತು ಭಾಷಣ ನಿಲ್ಲಿಸಿ, ನಂತರ ಭಾಷಣ ಮುಂದುವರೆಸಿದರು. ಅದಾನಿ ಗುಂಪಿನ ಬಗ್ಗೆ ರಾಹುಲ್ ಗಾಂಧಿಯವರು ಮಾಡಿದ ಆರೋಪಗಳ ಬಗ್ಗೆ ಮೋದಿ ಎಲ್ಲೂ ಉಲ್ಲೇಖಿಸಲಿಲ್ಲ.

ಈ ಬಗ್ಗೆ ರಾಹುಲ್ ಗಾಂಧಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿಯವರು ಅದಾನಿಗೆ ರಕ್ಷಣೆ ನೀಡುತ್ತಿದ್ದಾರೆ ಮತ್ತು ಅದಾನಿ ಬಗ್ಗೆ ನಾವು ಎತ್ತಿರುವ ಪ್ರಶ್ನೆಗಳಿಗೆ ಉತ್ತರವನ್ನು ನೀಡಲಿಲ್ಲ ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...