Homeಕರ್ನಾಟಕಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

- Advertisement -
- Advertisement -

ಇತ್ತೀಚೆಗೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಅವರು, ಪ್ರಹ್ಲಾದ್ ಜೋಶಿಯವರ ಬಗ್ಗೆ ಮಾತನಾಡುತ್ತ ಬ್ರಾಹ್ಮಣ ಸಮುದಾಯದ ಬಗ್ಗೆ ಮಾತನಾಡಿದ್ದರು. ಇದನ್ನು ಬಿಜೆಪಿ ನಾಯಕರು, ಕುಮಾರಸ್ವಾಮಿ ಬ್ರಾಹ್ಮಣರ ವಿರೋಧಿ ಎಂದು ಆರೋಪಿಸಿದ್ದರು. ಅದಕ್ಕೆ ಇದೀಗ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕ ಬಿಜೆಪಿ ವಿರುದ್ದ ಕಿಡಿಕಾರಿದ್ದಾರೆ.

ಕುಮಾರಸ್ವಾಮಿ ಅವರು ಮಾತನಾಡುವ ವೇಳೆ, ”ಪ್ರಹ್ಲಾದ್ ಜೋಶಿಯವರು ನಮ್ಮ ದಕ್ಷಿಣ ಕರ್ನಾಟಕದ ಬ್ರಾಹ್ಮಣರಿದ್ದರಲ್ಲ, ಆ ಸಂಸ್ಕೃತಿಯ ಬ್ರಾಹ್ಮಣರಲ್ಲ. ಬ್ರಾಹ್ಮಣರ ಸಂಸ್ಕಾರದಲ್ಲಿಯೂ ಎರಡು ಮೂರು ಥರ ಇವೆ. ಇವರು ಶೃಂಗೇರಿಯ ಮಠ ಒಡೆದ, ಅಲ್ಲಿನ ವಿಗ್ರಹ ಕೆಡವಿದ ದೇಶಸ್ಥ ಬ್ರಾಹ್ಮಣರ ಗುಂಪಿಗೆ ಸೇರಿದವರು. ಮಹಾತ್ಮ ಗಾಂಧಿಯನ್ನು ಕೊಂದಂತಹ ವರ್ಗಕ್ಕೆ ಸೇರಿದವರು” ಎಂದು ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಹೇಳಿದ್ದರು.

ಬಿಜೆಪಿಯು ಹೆಚ್‌ಡಿಕೆ ಅವರನ್ನು ಬ್ರಾಹ್ಮಣ ವಿರೋಧಿ ಎಂದು ಬಿಂಬಿಸಿತ್ತು. ಈ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಕುಮಾರಸ್ವಾಮಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

”ಪೇಶ್ವೆಗಳ ವಂಶಾವಳಿಗೆ ಸಂಬಂಧಪಟ್ಟ ವ್ಯಕ್ತಿಯನ್ನು ಬಿಜೆಪಿ ಪಕ್ಷ ಮುಂದಿನ ಮುಖ್ಯಮಂತ್ರಿ ಮಾಡಲು ಹುನ್ನಾರ ನಡೆಸಿದೆ ಎಂಬುದು ನನ್ನ ಹೇಳಿಕೆ ಆಗಿತ್ತು. ನನ್ನ ಹೇಳಿಕೆಯಲ್ಲಿ ಗೊಂದಲ ಇಲ್ಲ, ಸ್ಪಷ್ಟತೆ ಇತ್ತು” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಗಾಂಧಿ ಕೊಂದ, ಶೃಂಗೇರಿ ಮಠ ಒಡೆದ ಬ್ರಾಹ್ಮಣರ ಬಗ್ಗೆ ಎಚ್ಚರಿಕೆಯಿಂದಿರಿ: ಪ್ರಹ್ಲಾದ್ ಜೋಶಿ ವಿರುದ್ಧ ಹೆಚ್‌ಡಿಕೆ ಆಕ್ರೋಶ

”ಕರ್ನಾಟಕ ರಾಜ್ಯದ ಮೇಲೆ, ಅದರಲ್ಲೂ ನಾವೆಲ್ಲರೂ ಶ್ರದ್ಧೆ, ಭಕ್ತಿಯಿಂದ ನಡೆದುಕೊಳ್ಳುವ ಶ್ರೀ ಶೃಂಗೇರಿ ಪೀಠ, ಮತ್ತೂ ಅಲ್ಲಿನ ದೇವಾಲಯಗಳ ಮೇಲೆ ಪೇಶ್ವೆಗಳಿಂದ ಪೈಶಾಚಿಕ ದಾಳಿ ನಡೆದಿತ್ತು. ಇದು ಇತಿಹಾಸ, ಈ ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ” ಎಂದಿದ್ದಾರೆ.

”ನಾನು ಹೇಳಿದ್ದೇ ಒಂದು, ಕೆಲವರು ತಿರುಚಿ ಅಪಪ್ರಚಾರ ನಡೆಸುತ್ತಿರುವುದೇ ಇನ್ನೊಂದು. ಈ ಒಂದು ಇನ್ನೊಂದರ ನಡುವೆ ಅಜಗಜಾಂತರ ವ್ಯತ್ಯಾಸವಿದೆ. ಸತ್ಯಕ್ಕೂ ಸುಳ್ಳಿಗೂ ಇರುವಷ್ಟೇ ದೂರವಿದೆ. ಪಾಪ.. ಕೆಲವರಿಗೆ ತಿರುಚುವುದೇ ಕೆಲಸ, ಅದೇ ಅವರಿಗೆ ಸರ್ವಸ್ವ. ನಾನು ಏನು ಮಾಡಲಿ? ಸತ್ಯ ಹೇಳಿದ್ದೇನೆ, ಚರ್ಚೆಯಾಗಲಿ” ಎಂದು ಅವರು ಹೇಳಿದ್ದಾರೆ.

”ಶಿವಾಜಿ ಮಹಾರಾಜರು, ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ ಮತ್ತು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನೇ ಬಿಡದವರು ಇವರು. ಇನ್ನು ನನ್ನನ್ನು ಬಿಟ್ಟಾರೆಯೇ? ಕೀಳು ನಿಂದನೆ, ಚಿತಾವಣೆಯಷ್ಟೇ ಇವರ ಆಯುಧಗಳು. ನಿಂದನೆ ಮತ್ತು ನಿಂದಕರ ಬಗ್ಗೆ ನಾನು ಅಂಜುವ ಪೈಕಿ ಅಲ್ಲ” ಎಂದಿದ್ದಾರೆ.

”ನಾನು ಎತ್ತಿದ ವಿಚಾರಕ್ಕೆ ಸಂಬಂಧವೇ ಇಲ್ಲದಂತೆ ಬಿಜೆಪಿಯವರು ಅವೇಶಭರಿತರಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಆದರೆ, ವಿಧಾನಸೌಧದಲ್ಲಿ ಬಿಜೆಪಿಯು ಪೇಶ್ವೆಗಳ ವಂಶಾವಳಿಯ ನಾಯಕನ ಪ್ರತಿಷ್ಠಾಪನೆ ಮಾಡಲು ಹೊರಟಿರುವ ನನ್ನ ಪ್ರಶ್ನೆಗೆ ಉತ್ತರ ಕೊಡುವ ದಮ್ಮು ತಾಕತ್ತು ತೋರಿಸುತ್ತಿಲ್ಲ, ಯಾಕೆ? ಇಂಥ ವಿಕೃತಿಗಳಿಗೆ ನಾನು ಸೊಪ್ಪು ಹಾಕುವುದಿಲ್ಲ.”

”ಯಾರೋ ಮಾಡಿದ ಆದೇಶ, ಕಟ್ಟಪ್ಪಣೆಗೆ ಅಂಜಿ ನನ್ನ ಬಗ್ಗೆ ಬಿಜೆಪಿ ನಾಯಕರು ಸರಣಿ ಹೇಳಿಕೆ ನೀಡಬಹುದು. ಜಾಲತಾಣಗಳಲ್ಲಿ ಅಪಪ್ರಚಾರ ಮಾಡಿಸಬಹುದು. ಆದರೆ, ಅವರೆಲ್ಲ ತಮ್ಮ ಆತ್ಮಸಾಕ್ಷಿಯನ್ನು ಒಮ್ಮೆ ಪ್ರಶ್ನೆ ಮಾಡಿಕೊಳ್ಳಲಿ. ಪೇಶ್ವೆ ವಂಶಾವಳಿ ನಾಯಕನ ಸರಣಿ ಹುನ್ನಾರಗಳ ಬಗ್ಗೆ ಮಾತನಾಡುವ ಧೈರ್ಯ ಅವರು ತೋರುತ್ತಾರೆಯೇ?” ಎಂದು ಪ್ರಶ್ನಿಸಿದ್ದಾರೆ.

”ನನಗೆ ಸೋಲುವ ಭಯವಂತೆ, ಹತಾಶೆಯಂತೆ ಎಂದು ಬೊಗಳೆ ಬಿಟ್ಟುಕೊಂಡು ಕೇಕೆ ಹಾಕಿದರೆ ಜನ ನಂಬುವುದಿಲ್ಲ, ಅವರಿಗೂ ಗರ್ಭಗುಡಿಯಲ್ಲಿ ಏನು ನಡೆಯುತ್ತಿದೆ ಎಂಬುದು ಚೆನ್ನಾಗಿ ಗೊತ್ತು. ಸತ್ಯ ಸಾಯುವುದೂ ಇಲ್ಲ… ಅಲ್ಲವೇ?”

”ಜಗಜ್ಯೋತಿ ಬಸವೇಶ್ವರರು, ಗೌತಮ ಬುದ್ಧ, ಮಹಾತ್ಮ ಗಾಂಧೀಜಿ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದನ್ನೇ ನಾನು ಹೇಳಿದ್ದೇನೆ. ಇನ್ನು, ಬ್ರಾಹ್ಮಣ ಸಮೂಹವನ್ನು ನಿಂದಿಸುವ ಪ್ರಶ್ನೆ ಎಲ್ಲಿ? ನಾನು ನಿಂದಿಸಿಲ್ಲ, ನಿಂದಿಸುವುದೂ ಇಲ್ಲ. ಮತ್ತೆ ಮತ್ತೆ ಸ್ಪಷ್ಟನೆ ಅನಗತ್ಯ” ಎಂದು ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಂಯಮ ಮುಗಿದಿದೆ’: ಟ್ರಂಪ್ ಬೆದರಿಕೆಗೆ ಜಗ್ಗದ ಇರಾನ್; ಪ್ರದೇಶವನ್ನು ಮೀರಿ ಪ್ರತಿಕ್ರಿಯೆ ನೀಡುವುದಾಗಿ ಎಚ್ಚರಿಕೆ ನೀಡಿದ ಐಆರ್‌ಜಿಸಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನಿಗೆ ನೀಡಿದ್ದ ಗಡುವು ಕೆಲವೇ ಗಂಟೆಗಳು ಬಾಕಿ ಇರುವಾಗ, ಟ್ರಂಪ್ ಬೆದರಿಕೆಯನ್ನು ಧಿಕ್ಕರಿಸಿದ ಇರಾನ್ "ಸಂಯಮ ಮುಗಿದಿದೆ" ಎಂದು ಹೇಳಿದೆ ಮತ್ತು ಅದು ಈಗ ಈ ಪ್ರದೇಶದಲ್ಲಿನ...

ಒಡಿಶಾ| ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣ; ಬುಡಕಟ್ಟು ಜನಾಂಗ – ಪೊಲೀಸರ ನಡುವೆ ಘರ್ಷಣೆ

ಒಡಿಶಾದ ರಾಯಗಡ ಜಿಲ್ಲೆಯಲ್ಲಿ ಸಿಜಿಮಾಲಿ ಬಾಕ್ಸೈಟ್ ಗಣಿಗೆ ರಸ್ತೆ ನಿರ್ಮಾಣದ ಬಗ್ಗೆ ಮಂಗಳವಾರ (ಏಪ್ರಿಲ್ 7) ಸ್ಥಳೀಯ ಬುಡಕಟ್ಟು ಜನಾಂಗದವರೊಂದಿಗಿನ ಘರ್ಷಣೆಯಲ್ಲಿ 40 ಭದ್ರತಾ ಸಿಬ್ಬಂದಿ ಸೇರಿದಂತೆ ಸುಮಾರು 50 ಜನರು ಗಾಯಗೊಂಡಿದ್ದಾರೆ. ಜಿಲ್ಲೆಯ...

ಮಹಿಳೆಯರ ಶಬರಿಮಲೆ ಪ್ರವೇಶಕ್ಕೆ ಅನುಮತಿಸಿದ್ದ ತೀರ್ಪು ತಪ್ಪು : 9 ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ ಪೀಠದ ಮುಂದೆ ಕೇಂದ್ರ ಸರ್ಕಾರ ಹೇಳಿಕೆ-ವರದಿ

ಶಬರಿಮಲೆ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಎಲ್ಲಾ ವಯಸ್ಸಿನ ಮಹಿಳೆಯರಿಗೆ ಶಬರಿಮಲೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡಿದ 2018ರ ತೀರ್ಪು ತಪ್ಪಾಗಿದೆ ಮತ್ತು ಅದನ್ನು ತಪ್ಪು ಕಾನೂನು ಎಂದು ಘೋಷಿಸಲು ಅರ್ಹವಾಗಿದೆ ಎಂಬುವುದಾಗಿ ಕೇಂದ್ರ...

ಕೇರಳದಲ್ಲಿ ಬಿಜೆಪಿ ಅಭ್ಯರ್ಥಿಯಿಂದ ‘ಲವ್ ಜಿಹಾದ್’ ಹೇಳಿಕೆ; ಜಿಲ್ಲಾಧಿಕಾರಿಯಿಂದ ವರದಿ ಕೇಳಿದ ಚುನಾವಣಾ ಆಯೋಗ

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಎಡ ಪ್ರಜಾಸತ್ತಾತ್ಮಕ ರಂಗ ಅಥವಾ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗದ ಗೆಲುವು ರಾಜ್ಯದಲ್ಲಿ "ಲವ್ ಜಿಹಾದ್" ಘಟನೆಗಳಿಗೆ ಕಾರಣವಾಗುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಪಿ ಕೆ ಕೃಷ್ಣದಾಸ್ ನೀಡಿದ ಹೇಳಿಕೆಯ...

ಮಣಿಪುರ: ಇಬ್ಬರು ಮಕ್ಕಳ ಹತ್ಯೆ ಖಂಡಿಸಿ ಇಂಫಾಲ್ ಕಣಿವೆಯಲ್ಲಿ ಪ್ರತಿಭಟನೆ; 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರ: ಕಣಿವೆಯ ಐದು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಬ್ರಾಡ್‌ಬ್ಯಾಂಡ್, ವಿಎಸ್‌ಎಟಿಗಳು ಮತ್ತು ವಿಪಿಎನ್ ಸೇರಿದಂತೆ ಇಂಟರ್ನೆಟ್ ಮತ್ತು ಮೊಬೈಲ್ ಡೇಟಾ ಸೇವೆಗಳನ್ನು ಸ್ಥಗಿತಗೊಳಿಸಲು ಮಣಿಪುರ ಸರ್ಕಾರ ಮಂಗಳವಾರ ಆದೇಶಿಸಿದೆ. ಗೃಹ ಇಲಾಖೆಯ ಅಧಿಕೃತ...

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...