Homeಮುಖಪುಟಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

- Advertisement -
- Advertisement -

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಭಾಷಣದಲ್ಲಿ ಭಾಗವತ್ ಮಾತುಗಳು:-
”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

“ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು.

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

”ಭಾಗವತ್ ಅವರ ಅಜಾಗರೂಕ ಹೇಳಿಕೆಯು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾನಹಾನಿ ಉಂಟುಮಾಡಿದೆ. ಮೋಹನ್ ಭಾಗವತ್ ಅವರ ಹೇಳಿಕೆಯು ದೇಶಾದ್ಯಂತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಸುಧೀರ್ ಓಜಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...