Homeಮುಖಪುಟಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

- Advertisement -
- Advertisement -

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಭಾಷಣದಲ್ಲಿ ಭಾಗವತ್ ಮಾತುಗಳು:-
”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

“ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು.

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

”ಭಾಗವತ್ ಅವರ ಅಜಾಗರೂಕ ಹೇಳಿಕೆಯು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾನಹಾನಿ ಉಂಟುಮಾಡಿದೆ. ಮೋಹನ್ ಭಾಗವತ್ ಅವರ ಹೇಳಿಕೆಯು ದೇಶಾದ್ಯಂತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಸುಧೀರ್ ಓಜಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...