Homeಮುಖಪುಟಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

ಬ್ರಾಹ್ಮಣರ ಬಗ್ಗೆ ಅವಹೇಳನ ಆರೋಪ: RSS ಮುಖ್ಯಸ್ಥ ಮೋಹನ್ ಭಾಗವತ್ ವಿರುದ್ಧ ದೂರು ದಾಖಲು

- Advertisement -
- Advertisement -

RSS ಮುಖ್ಯಸ್ಥ ಮೋಹನ್ ಭಾಗವತ್ ಅವರು ಬ್ರಾಹ್ಮಣರನ್ನು ಅವಹೇಳನ ಮಾಡಿದ್ದಾರೆ ಎನ್ನುವಂತಹ ಆರೋಪ ಕೇಳಿಬಂದಿದ್ದು, ಇದೀಗ ಅವರ ವಿರುದ್ಧ ಬಿಹಾರ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ.

ಭಾನುವಾರ ಮುಂಬಯಿಯಲ್ಲಿ ನಡೆದ ಸಂತ ರವಿದಾಸ್‌ ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವತ್‌ ಮಾತನಾಡುವಾಗ, ಈ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣ ಸಮುದಾಯ ಸೃಷ್ಟಿಸಿದೆ ಎಂದು ಹೇಳಿದ್ದಾರೆ. ಇದು ಬ್ರಾಹ್ಮಣರಿಗೆ ಅವಮಾನ ಮಾಡುವ ಹೇಳಿಕೆ ಎಂದು ವಕೀಲ ಸುಧೀರ್‌ ಕುಮಾರ್‌ ಓಜಾ ಅವರು ಮುಜಾಫರ್‌ಪುರ ಜಿಲ್ಲೆಯ ಮುಖ್ಯ ಜ್ಯುಡಿಷಿಯಲ್ ಮ್ಯಾಜಿಸ್ಟ್ರೇಟ್ (ಸಿಜೆಎಂ) ಕೋರ್ಟ್‌ನಲ್ಲಿ ಪ್ರಕರಣ ಹೂಡಿದ್ದಾರೆ. ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಫೆಬ್ರವರಿ 20ಕ್ಕೆ ಮುಂದೂಡಲಾಗಿದೆ.

ಭಾಷಣದಲ್ಲಿ ಭಾಗವತ್ ಮಾತುಗಳು:-
”ಹಿಂದೂ ಸಮಾಜದಲ್ಲಿ ಚಾಲ್ತಿಯಲ್ಲಿರುವ ಈ ಕೆಟ್ಟ ಜಾತಿ ಪದ್ಧತಿಯನ್ನು ಸೃಷ್ಟಿಸಿದ್ದು ದೇವರಲ್ಲ, ಅದು ಪುರೋಹಿತ ವರ್ಗದವರು ಸೃಷ್ಟಿ ಮಾಡಿರುವಂತಹದ್ದು” ಎಂದು ದೂಷಿಸಿದ್ದರು. ಪುರೋಹಿತಶಾಹಿಯೊಂದಿಗೆ ಸಂಬಂಧ ಹೊಂದಿರುವ ಬ್ರಾಹ್ಮಣರ ಬಗ್ಗೆ ಭಾಗವತ್‌ ಮಾತನಾಡಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ಹೇಳಿರುವುದನ್ನೇ ನಾನು ಹೇಳಿದ್ದೇನೆ, ಬ್ರಾಹ್ಮಣರನ್ನು ಅವಮಾನಿಸಿಲ್ಲ: ಹೆಚ್‌ಡಿಕೆ ಸ್ಪಷ್ಟನೆ

“ಸತ್ಯವೇ ದೇವರು. ವ್ಯಕ್ತಿಯೊಬ್ಬರ ಹೆಸರು, ಸಾಮರ್ಥ್ಯ ಮತ್ತು ಗೌರವ ಏನೇ ಇದ್ದರೂ ಎಲ್ಲರೂ ಒಂದೇ. ಅವರ ನಡುವೆ ಯಾವುದೇ ವ್ಯತ್ಯಾಸ ಇರುವುದಿಲ್ಲ. ಶಾಸ್ತ್ರಗಳ ಹೆಸರಿನಲ್ಲಿ ಕೆಲವು ಪಂಡಿತರು ಹೇಳುವುದು ಸುಳ್ಳು. ಜಾತಿ ಶ್ರೇಷ್ಠತೆಯ ವ್ಯಸನದಿಂದ ತಪ್ಪುದಾರಿಗೆ ನಮ್ಮನ್ನು ಎಳೆಯಲಾಗಿದೆ. ಈ ಭ್ರಮೆಯನ್ನು ತೊಲಗಿಸಬೇಕಿದೆ. ದೇಶದಲ್ಲಿ ಎಲ್ಲರಲ್ಲಿಯೂ ಆತ್ಮಸಾಕ್ಷಿ ಮತ್ತು ಜಾಗೃತಿ ಒಂದೇ ರೀತಿ ಇದೆ. ಆದರೆ ಅಭಿಪ್ರಾಯಗಳು ಮಾತ್ರ ಬೇರೆ ಬೇರೆ ಇರುತ್ತವೆ” ಎಂದು ಭಾಗವತ್ ಹೇಳಿದ್ದರು.

ಭಾಗವತ್ ಅವರು ಬ್ರಾಹ್ಮಣರ ಬಗ್ಗೆ ಮಾತನಾಡಿದ್ದಾರೆ ಎಂದು ಮಾಧ್ಯಮಗಳು ಸುದ್ದಿ ಬಿತ್ತರಿಸಿದ ಮೇಲೆ ಸೋಮವಾರ ಸ್ಪಷ್ಟನೆ ನೀಡಿದ್ದ ಭಾಗವತ್, ‘ಪಂಡಿತ್’ ಎನ್ನುವುದರ ಅರ್ಥ ಬ್ರಾಹ್ಮಣರು ಎಂದಲ್ಲ, ಬದಲಾಗಿ ‘ಬುದ್ಧಿಜೀವಿಗಳು’ ಎಂದು ಆತು ತಿರುಗಿಸುವ ಪ್ರಯತ್ನ ಮಾಡಿದರು. ಈ RSS ಕೂಡ ಭಾಗವತ್‌ ಅವರು ಯಾವುದೇ ನಿರ್ದಿಷ್ಟ ಜಾತಿಯನ್ನು ಉಲ್ಲೇಖಿಸಿಲ್ಲ ಎಂದು ಭಾಗವತ್ ಹೇಳಿಕೆಯನ್ನು ಸಮರ್ಥಿಸಿಕೊಳ್ಳುವ ಪ್ರಯತ್ನ ಮಾಡಿತು.

ಆದರೆ, ವಕೀಲ ಸುಧೀರ್ ಓಜಾ ಅವರು ದೂರು ಸಲ್ಲಿಸಿದ್ದು,”ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ವಿರುದ್ಧ ನಾನು ಮುಜಫ್ಫರ್‌ಪುರ ಸಿಜೆಎಂ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 504, 505 ಮತ್ತು 506ರ ಅಡಿ (ಶಾಂತಿ ಕದಡುವ ಉದ್ದೇಶದ ಅವಮಾನ) ದೂರು ದಾಖಲಿಸಿದ್ದೇನೆ. ಇದಲ್ಲದೆ, 153 ಮತ್ತು 153ಎ ಸೆಕ್ಷನ್‌ಗಳನ್ನು ಕೂಡ ದೂರಿನಲ್ಲಿ ಸೇರಿಸಲಾಗಿದೆ” ಎಂದು ಅವರು ತಿಳಿಸಿದ್ದಾರೆ.

”ಭಾಗವತ್ ಅವರು, ಫೆ. 5ರಂದು ಈ ಕೆಟ್ಟ ಜಾತಿ ವ್ಯವಸ್ಥೆಯನ್ನು ಬ್ರಾಹ್ಮಣರು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಹೇಳಿಕೆ ನೀಡಿದ್ದರು. ಸಮಾಜದಲ್ಲಿ ವಿಭಜನೆ ಸೃಷ್ಟಿಸಲು ಉದ್ದೇಶಪೂರ್ವಕವಾಗಿ ಅವರು ಈ ಹೇಳಿಕೆ ಕೊಟ್ಟಿದ್ದಾರೆ. ಮತ ಬ್ಯಾಂಕ್ ರಾಜಕಾರಣವನ್ನು ಗಮನದಲ್ಲಿ ಇರಿಸಿಕೊಂಡು ಅವರು ಈ ರೀತಿ ಹೇಳಿದ್ದಾರೆ” ಎಂದು ಸುಧೀರ್ ಓಜಾ ಆರೋಪಿಸಿದ್ದಾರೆ.

”ಭಾಗವತ್ ಅವರ ಅಜಾಗರೂಕ ಹೇಳಿಕೆಯು ಇಡೀ ಬ್ರಾಹ್ಮಣ ಸಮುದಾಯಕ್ಕೆ ಮಾನಹಾನಿ ಉಂಟುಮಾಡಿದೆ. ಮೋಹನ್ ಭಾಗವತ್ ಅವರ ಹೇಳಿಕೆಯು ದೇಶಾದ್ಯಂತ ಸಮುದಾಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ” ಎಂದು ಸುಧೀರ್ ಓಜಾ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...