Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...