Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...