Homeಮುಖಪುಟಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

- Advertisement -
- Advertisement -

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಗುಂಪೊಂದು ತಾವು ಪ್ರದಶಿಸಿದ ಸ್ಕಿಟ್‌ನಲ್ಲಿ ”ಬಿಆರ್ ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

Jhatkaa.org ನಲ್ಲಿ ಪ್ರಕಟವಾದ ಅರ್ಜಿಯಲ್ಲಿ, ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ (CMS) ಕಾಲೇಜು ತಂಡ ಈ ಇವೆಂಟ್‌ನಲ್ಲಿ ಜಾತಿವಾದವನ್ನು ಎತ್ತಿ ತೋರಿಸುವ ಮತ್ತು ಕೆಲವು ಸಂವೇದನಾಶೀಲವಲ್ಲದ ಭಾಷೆಗಳನ್ನು ಬಳಸಿ ಸ್ಕಿಟ್ ಮಾಡಿದ್ದಾರೆ ಎಂದು ಹೇಳುತ್ತದೆ. ಈ ಅರ್ಜಿದಾರರು ಅನಾಮಧೇಯರಾಗಿ ಉಳಿಯಲು ಬಯಸಿದ್ದು, ಹಾಸ್ಯದ ಹೆಸರಿನಲ್ಲಿ ಜಾತಿ ತಾರತಮ್ಯವನ್ನು ಸಾಮಾನ್ಯ ಎನ್ನುವಂತೆ ಸ್ಕಿಟ್‌ನಲ್ಲಿ ಬಳಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಜೈನ್ ವಿಶ್ವವಿದ್ಯಾಲಯದ ಮ್ಯಾನೇಜ್‌ಮೆಂಟ್ ಸ್ಟಡೀಸ್ ಕೇಂದ್ರದ ಥಿಯೇಟರ್ ಗ್ರೂಪ್, ‘ದಿ ಡೆಲ್ರಾಯ್ಸ್ ಬಾಯ್ಸ್’, ‘ಮ್ಯಾಡ್-ಆಡ್ಸ್’ ನ ಭಾಗವಾಗಿ, ಫೆಸ್ಟ್‌ನಲ್ಲಿ ಹಾಸ್ಯ ಜೊತೆಗೆ ದಲಿತರನ್ನು ಗೇಲಿ ಮಾಡುತ್ತ ಈ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ”ಅವರು ಪ್ರದರ್ಶಿಸಿದ ಸ್ಕಿಟ್ ಕೆಳ ಜಾತಿಯ ಹಿನ್ನೆಲೆಯ ವ್ಯಕ್ತಿಯೊಬ್ಬ ಮೇಲ್ಜಾತಿ ಮಹಿಳೆಯೊಂದಿಗೆ ಡೇಟಿಂಗ್ ಮಾಡಲು ಪ್ರಯತ್ನಿಸುತ್ತಿರುವುದನ್ನು ಪ್ರದರ್ಶಿಸಿತು. ಈ ವೇಳೆ ಆತ ತಾನು ದಲಿತ ಎಂದು ಹೇಳಿಕೊಂಡಾಗ ‘ಡೋಂಟ್ ಟಚ್ ಮಿ, ಟಚ್ ಮಿ’ ಅಂತ ಸಾಂಗ್ ಕೂಡ ಪ್ಲೇ ಮಾಡಲಾಗಿದೆ. ತಯಾರಕರು ಬಿಆರ್ ಅಂಬೇಡ್ಕರ್ ಅವರನ್ನು ‘ಬೀಯರ್ ಅಂಬೇಡ್ಕರ್’ ಆಗಿ ಪರಿವರ್ತಿಸಿದ್ದಾರೆ ಮತ್ತು ಹಾಸ್ಯವನ್ನು ಪ್ರಚೋದಿಸಲು ‘ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು’ ಎಂಬ ಹಲವಾರು ಇತರ ‍ವಿವಾದಾತ್ಮಕ ನುಡಿಗಟ್ಟುಗಳನ್ನು ಬಳಸಿದ್ದಾರೆ” ಎಂದು ಅರ್ಜಿದಾರರು ತಿಳಿಸಿದ್ದಾರೆ.

ಈ ವೇದಿಕೆ ಮೇಲೆ ಇಂತಹ ಸ್ಕ್ರಿಪ್ಟ್ ಹೊಂದಿರುವ ಸ್ಕಿಟ್‌ನ್ನು ಹೇಗೆ ಪ್ರದರ್ಶನ ಮಾಡಿದರು ಎನ್ನುವುದು ಪ್ರಶ್ನೆಯಾಗಿದೆ. ಏಕೆಂದರೆ ವೇದಿಕೆಯ ಮೇಲೆ ಜಾರಿಗೊಳಿಸುವ ಮೊದಲು ಅನುಮೋದನೆ ಪಡೆಯಬೇಕಾಗುತ್ತದೆ, ಅದಕ್ಕೆ ಕೆಲವು ಸುತ್ತುಗಳು ಇರುತ್ತವೆ. ಅವೆಲ್ಲವನ್ನೂ ದಾಟಿಕೊಂಡು ಬಂದು ಈ ಸ್ಕಿಟ್ ಪ್ರದರ್ಶನಗೊಳ್ಳುತ್ತದೆ ಎಂದರೆ ಇದು ಸ್ವೀಕಾರಾರ್ಹವಲ್ಲ. ಬೆಂಗಳೂರಿನಲ್ಲಿ 25 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಫೆಬ್ರವರಿ 5 ರಂದು ಕಾಲೇಜು ಫೆಸ್ಟ್‌ ನಡೆಸಿತ್ತಿ. ಈ ವೇಳೆ ಇಂತಹ ಸ್ಕಿಟ್ ಪ್ರದರ್ಶನಗೊಂಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಫೆಬ್ರವರಿ 9, ಗುರುವಾರದಂದು ಮಹಾರಾಷ್ಟ್ರದ ಪೊಲೀಸ್ ಅಧೀಕ್ಷಕರಿಗೆ ವಂಚಿತ್ ಬಹುಜನ ಯುವ ಆಗಡಿಯ ರಾಜ್ಯ ಸದಸ್ಯ ಅಕ್ಷಯ್ ಬನ್ಸೋಡೆ ಅವರು ಸೆಕ್ಷನ್ ಎಕ್ಸ್ (3) SC/ST ಕಾಯ್ದೆಯಡಿಯಲ್ಲಿ ದೂರು ಸಲ್ಲಿಸಿದ್ದಾರೆ. ಹಾಗೆಯೇ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153, 153A, 295, 499, 500, 503, 504, 506 ಮತ್ತು 34ರಲ್ಲಿ ದೂರು ದಾಖಲಾಗಿದೆ. ದೂರನ್ನು ಎಫ್‌ಐಆರ್ ಎಂದು ಪರಿಗಣಿಸಿ ಪ್ರದರ್ಶಕರು ಮತ್ತು ವಿಶ್ವವಿದ್ಯಾಲಯದ ಅಧಿಕಾರಿಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವಂತೆ ದೂರುದಾರರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಕೊಪ್ಪಳ: ಜಮೀನಿಗೆ ಹಸು ನುಗ್ಗಿತೆಂದು ದಲಿತ ಮಹಿಳೆಯ ಮೇಲೆ ಸವರ್ಣೀಯ ವ್ಯಕ್ತಿಯಿಂದ ಹಲ್ಲೆ

ಅರ್ಜಿದಾರರಲ್ಲಿ ಒಬ್ಬರು, ”ಅವರು ಈಗ ಮೂರು ವಿಭಿನ್ನ ಸ್ಥಳಗಳಲ್ಲಿ ಸ್ಕಿಟ್‌ನ್ನು ಪ್ರದರ್ಶಿಸಿದ್ದಾರೆ. ನಾವು ಇಲ್ಲಿ ಬೆಂಗಳೂರಿನಲ್ಲಿ ಸ್ಕಿಟ್ ವೀಕ್ಷಿಸಿದಾಗ, ಅದರ ವಿರುದ್ದ ತಕ್ಷಣ ಧ್ವನಿ ಎತ್ತಿದ್ದೇವೆ ಎಂದಿದ್ದಾರೆ. ಆದರೆ ಸ್ಕಿಟ್ ಉತ್ತಮ ಹಾಸ್ಯದಲ್ಲಿದೆ ಎಂದು ಸಂಘಟಕರು ಭಾವಿಸಿದ್ದಾರೆ ಎಂದು Jhatkaa.org ನಲ್ಲಿ ಹಿರಿಯ ಎಂಗೇಜ್‌ಮೆಂಟ್ಸ್ ಅಸೋಸಿಯೇಟ್ ದೃಷ್ಟದ್ಯುಮ್ನ್ ಹೇಳಿದ್ದಾರೆ. ”ಸ್ಕಿಟ್‌ನ ಕೊನೆಯಲ್ಲಿ 20-30 ಸೆಕೆಂಡುಗಳಲ್ಲಿ ಕೀಳಾಗಿ ನೋಡುವ ಸಂಭಾಷಣೆಗಳು ಹಾಗೂ ಕೆರಳಿಸುವ ಉದ್ದೇಶದಿಂದ ಮೇಲ್ವರ್ಗದ ತಮಾಷೆಯ ಮಾತುಗಳನ್ನು ಮಾತನಾಡಿದ್ದಾರೆ. ಸ್ಕಿಟ್‌ನ ಬಹುಪಾಲು ಜಾತಿಯನ್ನು ಅವಹೇಳನ ಮಾಡುವಂತಹ ದೃಶ್ಯಗಳೇ ತುಂಬಿದೆ” ಎಂದು ಹೇಳಿಲಾಗಿದೆ.

ಈ ಸ್ಕಿಟ್‌ ಪ್ರದರ್ಶನ ಮಾಡಿದ ‘ದಿ ಡೆಲ್ರಾಯ್ಸ್ ಬಾಯ್ಸ್’ ಅವರು ಕ್ಷಮೆಯಾಚಿಸುವ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ”ಒಂದು ತಂಡವಾಗಿ ನಾವು ಕೆಟ್ಟದಾಗಿ ಮಾತನಾಡಿರುವುದಕ್ಕೆ ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳಲು ಬಯಸುತ್ತೇವೆ, ನಮ್ಮ ತಪ್ಪಿಗೆ ನಾವು ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇವೆ. ಸಾಮಾಜಿಕ ಸಂದೇಶವನ್ನು ತರುವುದು ನಮ್ಮ ಉದ್ದೇಶವಾಗಿತ್ತು ಆದರೆ ನಮ್ಮಿಂದ ತಪ್ಪಾಗಿದೆ ಎಂದು ಅವರು ಬರೆದಿದ್ದಾರೆ. ಅವರು ತಮ್ಮ ಇನ್ಸ್ಟಾಗ್ರಾಮ್ ಪುಟದಲ್ಲಿ ಸಾರ್ವಜನಿಕ ಕ್ಷಮೆಯಾಚನೆಯನ್ನು ಸಹ ಪೋಸ್ಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...