Homeಮುಖಪುಟಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

ಪ್ರಧಾನಿ ಮೋದಿ ಪದವಿ ವಿಚಾರ ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿಲ್ಲ: ಗುಜರಾತ್ ವಿವಿ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಪದವಿ ಪ್ರಮಾಣಪತ್ರದ ಮಾಹಿತಿಯನ್ನು ಒದಗಿಸುವ ಸಿಐಸಿ ಆದೇಶವನ್ನು ರದ್ದುಗೊಳಿಸುವಂತೆ ಗುಜರಾತ್ ವಿಶ್ವವಿದ್ಯಾಲಯವು ಹೈಕೋರ್ಟ್‌ಗೆ ಕೇಳಿಕೊಂಡಿದೆ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು ಎಂದು ಗುಜರಾತ್ ಹೈಕೋರ್ಟ್‌ಗೆ ತಿಳಿಸಿದೆ.

ವಿಶ್ವವಿದ್ಯಾನಿಲಯದ ಪರವಾಗಿವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಏಳು ವರ್ಷಗಳ ಹಿಂದಿನ ಆದೇಶವನ್ನು ಅನುಸರಿಸದಿದ್ದಕ್ಕಾಗಿ ಮಾಹಿತಿ ಹಕ್ಕು (ಆರ್‌ಟಿಐ) ಕಾಯಿದೆಯಡಿ ನೀಡಿರುವ ವಿನಾಯಿತಿಗಳನ್ನು ಉಲ್ಲೇಖಿಸಿ, ಬಾಲಿಶವಾದ ಅರ್ಜಿಯನ್ನು ತಳ್ಳಿಹಾಕಲು 2005ರ ಪಾರದರ್ಶಕತೆ ಕಾನೂನನ್ನು ಬಳಸಲಾಗುತ್ತದೆ ಎಂದು ಪ್ರತಿಪಾದಿಸಿದರು.

ಯಾರೋ ಒಬ್ಬರು ಸಾರ್ವಜನಿಕ ಕಚೇರಿಯನ್ನು ಹೊಂದಿದ್ದಾರೆ ಎಂದ ಮಾತ್ರಕ್ಕೆ ಅವರು ಇನ್ನೊಬ್ಬರ ಎಲ್ಲಾ ವೈಯಕ್ತಿಕ ಮಾಹಿತಿ ಪಡೆಯಲು ಸಾಧ್ಯವಿಲ್ಲ ಎಂದು ಮೆಹ್ತಾ ವಾದಿಸಿದರು.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ಪ್ರಧಾನಿ ಮೋದಿ ಅವರ ಪದವಿಗಳ ಬಗೆಗಿನ ಮಾಹಿತಿಯು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ಈ ಹಿಂದೆಯೂ ವಿಶ್ವವಿದ್ಯಾಲಯವು ತಮ್ಮ ವೆಬ್‌ಸೈಟ್‌ನಲ್ಲಿ ವಿವರಗಳನ್ನು ಹಾಕಿತ್ತು ಎಂದು ಹೇಳಿದರು.

ಆದರೂ ಕೇಜ್ರಿವಾಲ್ ಪರ ವಕೀಲ ಪರ್ಸಿ ಕವೀನಾ ಅವರು, ಈ ಮಾಹಿತಿಯು ಸಾರ್ವಜನಿಕ ಡೊಮೇನ್‌ನಲ್ಲಿ ಲಭ್ಯವಿಲ್ಲ ಎಂದು ಪ್ರತಿಪಾದಿಸಿದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರು, ಸಿಐಸಿ ಆದೇಶವನ್ನು ಪ್ರಶ್ನಿಸಿ ಗುಜರಾತ್ ವಿಶ್ವವಿದ್ಯಾಲಯ ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಕಾಯ್ದಿರಿಸಿದ್ದಾರೆ.

ಏಪ್ರಿಲ್ 2016 ರಲ್ಲಿ, ಆಗಿನ ಸಿಐಸಿ ಎಂ ಶ್ರೀಧರ್ ಆಚಾರ್ಯುಲು ಅವರು, ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮೋದಿ ಅವರು ಗಳಿಸಿರುವ ಪದವಿಗಳ ಬಗ್ಗೆ ಮಾಹಿತಿ ನೀಡುವಂತೆ ದೆಹಲಿ ವಿಶ್ವವಿದ್ಯಾಲಯ ಮತ್ತು ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದರು. ಆದರೆ, ಮೂರು ತಿಂಗಳ ನಂತರ, ಗುಜರಾತ್ ಹೈಕೋರ್ಟ್ ಅಹಮದಾಬಾದ್ ಮೂಲದ ವಿಶ್ವವಿದ್ಯಾನಿಲಯಕ್ಕೆ ಅಗತ್ಯವಿರುವ ಮಾಹಿತಿಯನ್ನು ಒದಗಿಸುವಂತೆ ಸಿಐಸಿ ಆದೇಶವನ್ನು ತಡೆಹಿಡಿಯಿತು.

ಗುರುವಾರದ ವಿಚಾರಣೆಯ ಸಂದರ್ಭದಲ್ಲಿ, ಪಿಎಂ ಮೋದಿ ಪದವಿಗಳ ಬಗ್ಗೆ ಮುಚ್ಚಿಡಲು ಏನೂ ಇಲ್ಲ ಏಕೆಂದರೆ ಅದು “ಈಗಾಗಲೇ ಸಾರ್ವಜನಿಕ ಡೊಮೇನ್‌ನಲ್ಲಿದೆ” ಮತ್ತು ವಿಶ್ವವಿದ್ಯಾಲಯವು ಈ ಹಿಂದೆ ನಿರ್ದಿಷ್ಟ ದಿನಾಂಕದಂದು ಮಾಹಿತಿಯನ್ನು ತನ್ನ ವೆಬ್‌ಸೈಟ್‌ನಲ್ಲಿ ಇರಿಸಿತ್ತು ಎಂದು ಮೆಹ್ತಾ ಹೇಳಿದರು.

ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಅಡಿಯಲ್ಲಿ ನೀಡಲಾದ ವಿನಾಯಿತಿಗಳ ಕುರಿತು ಸುಪ್ರೀಂ ಕೋರ್ಟ್ ಮತ್ತು ಇತರ ಹೈಕೋರ್ಟ್‌ಗಳ ಕೆಲವು ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿದ ಮೆಹ್ತಾ, “ನೀವು ಅದರ ಬಗ್ಗೆ ಕುತೂಹಲ ಹೊಂದಿರುವ ಕಾರಣಕ್ಕಾಗಿ” ಒಬ್ಬರ ವೈಯಕ್ತಿಕ ಮಾಹಿತಿಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದರು.

“ಆರ್‌ಟಿಐ ಕಾರ್ಯಕರ್ತನಾಗುವುದು ಈಗ ವೃತ್ತಿಯಾಗಿ ಮಾರ್ಪಟ್ಟಿದೆ. ಸಂಪರ್ಕವಿಲ್ಲದ ಎಷ್ಟೋ ಜನರಿಗೆ ಎಷ್ಟೋ ವಿಷಯಗಳ ಬಗ್ಗೆ ಕುತೂಹಲವಿರುತ್ತದೆ. ಅಪರಿಚಿತರು ಅಂತಹ ಮಾಹಿತಿಯನ್ನು ಹುಡುಕುವಂತಿಲ್ಲ. ಬೇಜವಾಬ್ದಾರಿ ಬಾಲಿಶ ಕುತೂಹಲವು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ಆರ್‌ಟಿಐ ಕಾಯ್ದೆಯ ಸೆಕ್ಷನ್ 8 ರ ಪ್ರಕಾರ, ವಿಶ್ವವಿದ್ಯಾನಿಲಯವು ತನ್ನ ವಿದ್ಯಾರ್ಥಿಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಮೂರನೇ ವ್ಯಕ್ತಿಗೆ ಬಹಿರಂಗಪಡಿಸಲು ನಿರಾಕರಿಸಬಹುದು ಏಕೆಂದರೆ “ವಿಶ್ವಾಸಾರ್ಹ ಸಂಬಂಧ”, ಟ್ರಸ್ಟಿ ಮತ್ತು ಫಲಾನುಭವಿ ನಡುವಿನ ನಂಬಿಕೆಯ ಸಂಬಂಧದ ಕಾರಣಕ್ಕಾಗಿ ಎಂದು ಮೆಹ್ತಾ ಹೇಳಿದ್ದಾರೆ

”ದೊಡ್ಡ ಸಾರ್ವಜನಿಕ ಹಿತಾಸಕ್ತಿಯ ವರ್ಗಕ್ಕೆ ಸೇರಿದರೆ ಒಬ್ಬರು ಮಾಹಿತಿಯನ್ನು ಪಡೆಯಬಹುದು. ಆದರೆ, ನನ್ನ ಸಾರ್ವಜನಿಕ ಚಟುವಟಿಕೆಗೆ ಸಂಬಂಧಿಸದ ಖಾಸಗಿ ಮಾಹಿತಿಯನ್ನು ನೀವು ಹುಡುಕುವಂತಿಲ್ಲ. ಸಾರ್ವಜನಿಕರಿಗೆ ಅದರಲ್ಲಿ ಆಸಕ್ತಿ ಇದೆ ಎಂದ ಮಾತ್ರಕ್ಕೆ ಅದು ಸಾರ್ವಜನಿಕ ಹಿತಾಸಕ್ತಿಯಾಗಲಾರದು. ನ್ಯಾಯಾಲಯಗಳ ವ್ಯಾಖ್ಯಾನವು ಶೈಕ್ಷಣಿಕ ಅರ್ಹತೆ ವೈಯಕ್ತಿಕ ಮಾಹಿತಿಯಾಗಿದೆ, ಅದು ರಾಜಕಾರಣಿ ಅಥವಾ ಇತರ ಯಾವುದೇ ವ್ಯಕ್ತಿಯಾಗಿರಲಿ” ಎಂದು ಸಾಲಿಸಿಟರ್ ಜನರಲ್ ವಾದಿಸಿದರು.

ಮೆಹ್ತಾಗೆ ಪ್ರತಿಕ್ರಿಯಿಸಿದ ವಕೀಲ ಕವಿನಾ, ಪ್ರಧಾನಿ ಪದವಿಗಳ ಬಗ್ಗೆ ಸಾರ್ವಜನಿಕ ಡೊಮೇನ್‌ನಲ್ಲಿ ಮಾಹಿತಿ ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಚುನಾವಣೆಯಲ್ಲಿ ಸ್ಪರ್ಧಿಸುವ ರಾಜಕಾರಣಿಗಳು ತಮ್ಮ ಶೈಕ್ಷಣಿಕ ಅರ್ಹತೆಗಳನ್ನು ಬಹಿರಂಗಪಡಿಸಬೇಕು ಎಂದು ಪ್ರಜಾಪ್ರತಿನಿಧಿ ಕಾಯ್ದೆ (RPA) ಕಡ್ಡಾಯಗೊಳಿಸಿದೆ ಎಂದು ಕವಿನಾ ವಾದಿಸಿದರು.

ಅಮೆರಿಕದ ಮಾಜಿ ಅಧ್ಯಕ್ಷ ಟ್ರಂಪ್ ಮತ್ತು ಅವರ ಉತ್ತರಾಧಿಕಾರಿ ಬಿಡೆನ್ ಅವರ ನಿವಾಸಗಳನ್ನು ಎಫ್‌ಬಿಐ ಹೇಗೆ ಶೋಧಿಸಿದೆ ಎಂಬುದಕ್ಕೆ ಕವಿನಾ ಉದಾಹರಣೆ ನೀಡಿದರು.

”ಪದವಿಗಳ ಕುರಿತಾದ ಈ ಮಾಹಿತಿಯು ಸಾರ್ವಜನಿಕ ಚಟುವಟಿಕೆ ಮತ್ತು ಆಸಕ್ತಿಯೊಂದಿಗೆ ನೇರ ಸಂಪರ್ಕವನ್ನು ಹೊಂದಿದೆ. ಟ್ರಂಪ್ ಅವರ ಮನೆ ಮತ್ತು ಬಿಡೆನ್ ಅವರ ಮನೆಯನ್ನು FBI ತನಿಖೆ ನಡೆಸುತ್ತದೆ. ನೀವು ಸ್ಥಾನಮಾನದಲ್ಲಿ ದೊಡ್ಡವರಿರಬಹುದು ಆದರೆ, ನೀವು ಕಾನೂನಿಗಿಂತ ಮೇಲಲ್ಲ” ಎಂದು ಕವಿನಾ ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...