Homeಮುಖಪುಟಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

ಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

- Advertisement -
- Advertisement -

ಸಮಾರಂಭದ ಮುಖ್ಯ ಪ್ರಾಯೋಜಕರು ಅದಾನಿ ಗ್ರೂಪ್ ಆಗಿರುವುದರಿಂದ, ದಲಿತ ಕವಯಿತ್ರಿ ಮತ್ತು ಸ್ತ್ರೀವಾದಿ ಸುಕೀರ್ತರಾಣಿ ಅವರು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸುಕೀರ್ತರಾಣಿ ಅವರು ಸಮಕಾಲೀನ ತಮಿಳು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ಅವರು ಪ್ರಾಯೋಜಿಸಿದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುವುದು ತನ್ನ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಸುಕೀರ್ತರಾಣಿ ಹೇಳಿದ್ದಾರೆ. ಫೆಬ್ರವರಿ 4 ರ ಶನಿವಾರದಂದು ಪ್ರಶಸ್ತಿಯನ್ನು ತ್ಯಜಿಸಿರುವುದಾಗಿ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದಾರೆ.

ಈ ಪ್ರಶಸ್ತಿಗೆ ದೇಶದಾದ್ಯಂತದ ಕೇವಲ ಹನ್ನೆರಡು ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ನನಗೆ ದಲಿತ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಮುಂದಾಗಿದ್ದಕ್ಕೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸುಕೀರ್ತರಾಣಿ ಅವರು ಧನ್ಯವಾದ ಅರ್ಪಿಸಿದ್ದಾರೆ.  ಆದರೆ, “ಈ ಕಾರ್ಯಕ್ರಮದ ಮುಖ್ಯ ಪ್ರಾಯೋಜಕರು ಅದಾನಿ ಎಂದು ನನಗೆ ನಿನ್ನೆಯಷ್ಟೇ ತಿಳಿಯಿತು, ಅದಾನಿ ಗ್ರೂಪ್‌ನಿಂದ ಆರ್ಥಿಕವಾಗಿ ಬೆಂಬಲಿತವಾಗಿರುವ ಸಂಸ್ಥೆಯಿಂದ ಪ್ರಶಸ್ತಿ ಸ್ವೀಕರಿಸಲು ನನಗೆ ಇಷ್ಟವಿಲ್ಲ ಏಕೆಂದರೆ, ನಾನು ಮಾತನಾಡುವ ರಾಜಕೀಯ ವಿಚಾರಗಳು ಮತ್ತು ನಾನು ನಂಬಿರುವ ಸಿದ್ಧಾಂತಗಳು ಬೇರೆ ಹಾಗಾಗಿ ನಾನು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ತತ್ವಸಿದ್ದಾಂತಗಳ ಮೇಲಿನ ಅವರ ಬದ್ಧತೆಯನ್ನು ಸಾಕಷ್ಟು ಜನರು ಶ್ಲಾಘಿಸಿ, ಸುಕೀರ್ತರಾಣಿಯನ್ನು ಹೊಗಳಿದ್ದಾರೆ.

”ಅದಾನಿ ಪ್ರಾಯೋಜಿತ ಪ್ರಶಸ್ತಿಯನ್ನು ತಿರಸ್ಕರಿಸಿದ್ದಕ್ಕಾಗಿ ಸುಕೀರ್ತರಾಣಿಗೆ ಧನ್ಯವಾದಗಳು. ಈ ರೀತಿ ಮಾಡಲು ಸಾಕಷ್ಟು ಧೈರ್ಯ ಮತ್ತು ದೃಢತೆ ಬೇಕು. ನೀವು ಮುಂದುವರಿಸಿ, ನಿಮ್ಮ ಜೊತೆ ನಾವಿದ್ದೇವೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ನ ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಸುಕೀರ್ತರಾಣಿ ಆರು ಕವನ ಸಂಕಲನಗಳನ್ನು ಬರೆದಿದ್ದಾರೆ:- ಕೈಪತ್ರಿ ಯೇನ್ ಕನವು ಕೇಲ್, ಇರವು ಮಿರುಗಂ, ಕಾಮತ್ತಿಪೂ, ತೀಂಡಪದತ ಮುತ್ತಂ, ಅವಳೈ ಮೋಜಿಪೆಯರ್ತಲ್ ಮತ್ತು ಇಪ್ಪಡಿಕ್ಕು ಯೇವಲ್. ಅವರ ಕವನಗಳು ಇಂಗ್ಲಿಷ್, ಮಲಯಾಳಂ, ಕನ್ನಡ, ಹಿಂದಿ ಮತ್ತು ಜರ್ಮನ್ ಭಾಷೆಗಳಿಗೆ ಅನುವಾದಗೊಂಡಿವೆ. ಅವರಿಗೆ ತೇವಮಗಲ್ ಕವಿತೂವಿ ಪ್ರಶಸ್ತಿ, ಪುದುಮೈಪಿತ್ತನ್ ಸ್ಮಾರಕ ಪ್ರಶಸ್ತಿ ಮತ್ತು ಪೆಂಗಲ್ ಮುನ್ನಾನಿಯ ಮಹಿಳಾ ಸಾಧಕಿ ಪ್ರಶಸ್ತಿ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...