Homeಮುಖಪುಟಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

ಅದಾನಿ ಗ್ರೂಪ್ ಪ್ರಾಯೋಜಿತ ಪ್ರಶಸ್ತಿ ನಿರಾಕರಿಸಿದ ದಲಿತ ಕವಯಿತ್ರಿ, ಸ್ತ್ರೀವಾದಿ ಸುಕೀರ್ತರಾಣಿ

- Advertisement -
- Advertisement -

ಸಮಾರಂಭದ ಮುಖ್ಯ ಪ್ರಾಯೋಜಕರು ಅದಾನಿ ಗ್ರೂಪ್ ಆಗಿರುವುದರಿಂದ, ದಲಿತ ಕವಯಿತ್ರಿ ಮತ್ತು ಸ್ತ್ರೀವಾದಿ ಸುಕೀರ್ತರಾಣಿ ಅವರು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸಿದ್ದಾರೆ.

ಸುಕೀರ್ತರಾಣಿ ಅವರು ಸಮಕಾಲೀನ ತಮಿಳು ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ. ಅವರು ಪ್ರಾಯೋಜಿಸಿದ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುವುದು ತನ್ನ ಸಿದ್ಧಾಂತಕ್ಕೆ ವಿರುದ್ಧವಾಗಿದೆ ಎಂದು ಸುಕೀರ್ತರಾಣಿ ಹೇಳಿದ್ದಾರೆ. ಫೆಬ್ರವರಿ 4 ರ ಶನಿವಾರದಂದು ಪ್ರಶಸ್ತಿಯನ್ನು ತ್ಯಜಿಸಿರುವುದಾಗಿ ಅವರು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದಾರೆ.

ಈ ಪ್ರಶಸ್ತಿಗೆ ದೇಶದಾದ್ಯಂತದ ಕೇವಲ ಹನ್ನೆರಡು ಮಹಿಳೆಯರನ್ನು ಆಯ್ಕೆ ಮಾಡಲಾಗಿದೆ. ಅವರಲ್ಲಿ ನನಗೆ ದಲಿತ ಸಾಹಿತ್ಯಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿ ನೀಡಲು ಮುಂದಾಗಿದ್ದಕ್ಕೆ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಸುಕೀರ್ತರಾಣಿ ಅವರು ಧನ್ಯವಾದ ಅರ್ಪಿಸಿದ್ದಾರೆ.  ಆದರೆ, “ಈ ಕಾರ್ಯಕ್ರಮದ ಮುಖ್ಯ ಪ್ರಾಯೋಜಕರು ಅದಾನಿ ಎಂದು ನನಗೆ ನಿನ್ನೆಯಷ್ಟೇ ತಿಳಿಯಿತು, ಅದಾನಿ ಗ್ರೂಪ್‌ನಿಂದ ಆರ್ಥಿಕವಾಗಿ ಬೆಂಬಲಿತವಾಗಿರುವ ಸಂಸ್ಥೆಯಿಂದ ಪ್ರಶಸ್ತಿ ಸ್ವೀಕರಿಸಲು ನನಗೆ ಇಷ್ಟವಿಲ್ಲ ಏಕೆಂದರೆ, ನಾನು ಮಾತನಾಡುವ ರಾಜಕೀಯ ವಿಚಾರಗಳು ಮತ್ತು ನಾನು ನಂಬಿರುವ ಸಿದ್ಧಾಂತಗಳು ಬೇರೆ ಹಾಗಾಗಿ ನಾನು ದೇವಿ ಪ್ರಶಸ್ತಿಗಳನ್ನು ಸ್ವೀಕರಿಸಲು ನಿರಾಕರಿಸುತ್ತೇನೆ” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ‘ಮೋದಿ-ಅದಾನಿ ಭಾಯಿ-ಭಾಯಿ’ ಘೋಷಣೆ ಕೂಗಿದ ವಿಪಕ್ಷ ನಾಯಕರು

ತತ್ವಸಿದ್ದಾಂತಗಳ ಮೇಲಿನ ಅವರ ಬದ್ಧತೆಯನ್ನು ಸಾಕಷ್ಟು ಜನರು ಶ್ಲಾಘಿಸಿ, ಸುಕೀರ್ತರಾಣಿಯನ್ನು ಹೊಗಳಿದ್ದಾರೆ.

”ಅದಾನಿ ಪ್ರಾಯೋಜಿತ ಪ್ರಶಸ್ತಿಯನ್ನು ತಿರಸ್ಕರಿಸಿದ್ದಕ್ಕಾಗಿ ಸುಕೀರ್ತರಾಣಿಗೆ ಧನ್ಯವಾದಗಳು. ಈ ರೀತಿ ಮಾಡಲು ಸಾಕಷ್ಟು ಧೈರ್ಯ ಮತ್ತು ದೃಢತೆ ಬೇಕು. ನೀವು ಮುಂದುವರಿಸಿ, ನಿಮ್ಮ ಜೊತೆ ನಾವಿದ್ದೇವೆ” ಎಂದು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ ನ ರಾಷ್ಟ್ರೀಯ ಕಾರ್ಯದರ್ಶಿ ಕವಿತಾ ಶ್ರೀವಾಸ್ತವ ಹೇಳಿದ್ದಾರೆ.

ಸುಕೀರ್ತರಾಣಿ ಆರು ಕವನ ಸಂಕಲನಗಳನ್ನು ಬರೆದಿದ್ದಾರೆ:- ಕೈಪತ್ರಿ ಯೇನ್ ಕನವು ಕೇಲ್, ಇರವು ಮಿರುಗಂ, ಕಾಮತ್ತಿಪೂ, ತೀಂಡಪದತ ಮುತ್ತಂ, ಅವಳೈ ಮೋಜಿಪೆಯರ್ತಲ್ ಮತ್ತು ಇಪ್ಪಡಿಕ್ಕು ಯೇವಲ್. ಅವರ ಕವನಗಳು ಇಂಗ್ಲಿಷ್, ಮಲಯಾಳಂ, ಕನ್ನಡ, ಹಿಂದಿ ಮತ್ತು ಜರ್ಮನ್ ಭಾಷೆಗಳಿಗೆ ಅನುವಾದಗೊಂಡಿವೆ. ಅವರಿಗೆ ತೇವಮಗಲ್ ಕವಿತೂವಿ ಪ್ರಶಸ್ತಿ, ಪುದುಮೈಪಿತ್ತನ್ ಸ್ಮಾರಕ ಪ್ರಶಸ್ತಿ ಮತ್ತು ಪೆಂಗಲ್ ಮುನ್ನಾನಿಯ ಮಹಿಳಾ ಸಾಧಕಿ ಪ್ರಶಸ್ತಿ ನೀಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...