Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...