Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...