Homeಮುಖಪುಟಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

ಹಳೆಯ ಬಜೆಟ್ ಪ್ರತಿ ಓದಿ ನಗೆಪಾಟಲಿಗೀಡಾದ ಗೆಹ್ಲೋಟ್: ಶೇಮ್ ಶೇಮ್‌ ಎಂದ ಬಿಜೆಪಿ

- Advertisement -
- Advertisement -

ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶುಕ್ರವಾರ 2023-24ರ ಬಜೆಟ್‌ ಪ್ರತಿಯನ್ನು ಓದಲು ಬದಲಿಗೆ ಹಿಂದಿನ ವರ್ಷದ ಬಜೆಟ್‌ನ ಆಯ್ದ ಭಾಗಗಳನ್ನು ತಪ್ಪಾಗಿ ಓದುವ ಮೂಲಕ ನಗೆಪಾಟಲಿಗೀಡಾಗಿದ್ದಾರೆ.

ಮುಖ್ಯ ಸಚೇತಕ ಮಹೇಶ್ ಜೋಶಿ ಅವರು ಬಂದು ತಡೆಯುವ ಮೊದಲು ಗೆಹ್ಲೋಟ್ ಅವರು ಬಜೆಟ್ ಪೇಪರ್‌ಗಳನ್ನು ಓದುತ್ತಿರುವುದು ರಾಜ್ಯ ಅಸೆಂಬ್ಲಿಯ ವಿಡಿಯೊದಲ್ಲಿ ಸೆರೆಲಾಗಿದೆ. ನಂತರ ಅವರು ಭಾಷಣ ನಿಲ್ಲಿಸಿ ಕ್ಷಮೆಯಾಚಿಸಿದ್ದಾರೆ. ಪ್ರತಿಪಕ್ಷ ಬಿಜೆಪಿಯ ಶಾಸಕರು ನಗೆಗಡಲಲ್ಲಿ ತೇಲುತ್ತಾ, “ಶೇಮ್‌, ಶೇಮ್‌” ಎಂದು ಆಡಿಕೊಂಡಿದ್ದಾರೆ.

ನಂತರ ಪ್ರತಿಪಕ್ಷಗಳು ಸದನದ ಬಾವಿಗೆ ನುಗ್ಗಿ ಪ್ರತಿಭಟಿಸಿದ ನಂತರ ಕಲಾಪವನ್ನು ಅರ್ಧ ಗಂಟೆ ಮುಂದೂಡಲಾಯಿತು.

ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಅವರು, “ಬಜೆಟ್ ಸೋರಿಕೆಯಾಗಿದೆಯೇ?” ಎಂದು ಪ್ರಶ್ನಿಸಿದರು. “ದಾಖಲೆಯನ್ನು ಹೊಸದಾಗಿ ರೂಪಿಸಿ ನಂತರ ವಿಧಾನಸಭೆಯಲ್ಲಿ ಮಂಡಿಸಬೇಕು” ಎಂದು ಒತ್ತಾಯಿಸಿದರು. ಗೆಹ್ಲೋಟ್‌ ವಿಚಾರ ಗೆಹ್ಲೋಟ್‌ ಅವರಿಗೆ ಮಾತ್ರ ಗೊತ್ತಿರಬೇಕಿತ್ತು ಎಂದಿರುವ ಕಟಾರಿಯ, “ಮುಖ್ಯಮಂತ್ರಿಯವರು ತಪ್ಪಾಗಿ ಓದುತ್ತಿದ್ದಾರೆಂದು ಇತರ ಶಾಸಕರಿಗೆ ಹೇಗೆ ಗೊತ್ತಾಯಿತು?” ಎಂದು ಪ್ರಶ್ನಿಸಿದ್ದಾರೆ.

“ಇದು ಸೋರಿಕೆಯಾದ ಬಜೆಟ್ ಅಲ್ಲದಿದ್ದರೆ ಇನ್ನೇನು ಆಗಿರಬಹುದು?” ಎಂದು ಅವರು ಕೇಳಿದ್ದಾರೆ. “ನೀವು [ಗೆಹ್ಲೋಟ್] ಮತ್ತೊಮ್ಮೆ ಬಜೆಟ್ ಅನ್ನು ರೂಪಿಸಬೇಕು, ನಂತರ ಅದನ್ನು ಸದನದಲ್ಲಿ ಮಂಡಿಸಬೇಕು. ನಮ್ಮದೇನೂ ಅಭ್ಯಂತರವಿಲ್ಲ” ಎಂದು ಪ್ರತಿಕ್ರಿಯಿಸಿದ್ದಾರೆ.

ಆದಾಗ್ಯೂ, ಗೆಹ್ಲೋಟ್ ಪ್ರತಿಕ್ರಿಯಿಸಿ, “ನನ್ನ ಕೈಯಲ್ಲಿರುವ ಬಜೆಟ್‌ ಪ್ರತಿಯಲ್ಲಿ ಬರೆದಿರುವುದಕ್ಕೂ ಸದನದ ಸದಸ್ಯರಿಗೆ ನೀಡಿದ ಪ್ರತಿಯಲ್ಲಿ ಬರೆದಿರುವುದಕ್ಕೂ ವ್ಯತ್ಯಾಸವಿದ್ದರೆ ಮಾತ್ರ ನೀವು [ವಿರೋಧ] ಸೂಚಿಸಬಹುದು. ನನ್ನ ಬಜೆಟ್ ಪ್ರತಿಗೆ ತಪ್ಪಾದ ಪುಟವನ್ನು ಸೇರಿಸಿದ್ದರೆ, ಬಜೆಟ್ ಸೋರಿಕೆಯ ವಿಷಯವು ಹೇಗೆ ಉದ್ಭವಿಸುತ್ತದೆ?” ಎಂದು ಪ್ರಶ್ನಿಸಿದರು.

ನಂತರ ಮುಖ್ಯಮಂತ್ರಿಯವರು ಸದನದಲ್ಲಿ ಬಜೆಟ್ ಮಂಡಿಸಲು ಮುಂದಾದರು.

ಗೆಹ್ಲೋಟ್ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿ, “ಅಭಿವೃದ್ಧಿ ಮತ್ತು ಪ್ರಗತಿಗೆ ವಿರುದ್ಧವಾಗಿರುವುದಾಗಿ ತೋರಿಸಲು ಬಿಜೆಪಿ ಬಯಸುತ್ತದೆ. ಬಜೆಟ್ ದಾಖಲೆ ಸೋರಿಕೆಯಾಗಿರುವ ಬಗ್ಗೆ ಅವರ ಆಧಾರರಹಿತ ಆರೋಪಗಳನ್ನು ಬಿಜೆ ಮಾಡಿದೆ. ತನ್ನ ಕ್ಷುಲ್ಲಕ ರಾಜಕೀಯಕ್ಕೆ ಬಜೆಟ್ ಅನ್ನು ಸಹ ಬಿಡುವುದಿಲ್ಲ ಎಂಬುದನ್ನು ಬಿಜೆಪಿ ತೋರಿಸಿದೆ” ಎಂದಿದ್ದಾರೆ.

ಗಿಗ್ ಕೆಲಸಗಾರರಿಗೆ ಕಾರ್ಯಕ್ರಮಗಳ ಘೋಷಣೆ

ರಾಜಸ್ಥಾನದಲ್ಲಿನ ಗಿಗ್ ಕಾರ್ಮಿಕರಿಗಾಗಿ ಹಲವಾರು ಕ್ರಮಗಳನ್ನು ಘೋಷಿಸಿದ್ದಾರೆ ತಮ್ಮ ಬಜೆಟ್‌ನಲ್ಲಿ ಅಶೋಕ್ ಗೆಹ್ಲೋಟ್ ಘೋಷಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ಓಲಾ, ಉಬರ್, ಸ್ವಿಗ್ಗಿ, ಜೊಮಾಟೊ, ಅಮೆಜಾನ್ ಮತ್ತು ಇತರ ಕಂಪನಿಗಳೊಂದಿಗೆ ಸಂಬಂಧ ಹೊಂದಿರುವ ಗಿಗ್ ಕೆಲಸಗಾರರ ಸಂಖ್ಯೆ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

“ಇಲ್ಲಿಯವರೆಗೆ, ಅವರಿಗೆ ಯಾವುದೇ ಸಾಮಾಜಿಕ ಭದ್ರತೆಯ ವ್ಯವಸ್ಥೆ ಇರಲಿಲ್ಲ” ಎಂದಿರುವ ಸಿಎಂ, “ಅವರನ್ನು ಕಿರುಕುಳದಿಂದ ರಕ್ಷಿಸಲು, ಗಿಗ್ ವರ್ಕರ್ಸ್ ವೆಲ್ಫೇರ್ ಆಕ್ಟ್ ಅನ್ನು ತರಲು ನಾನು ಪ್ರಸ್ತಾಪಿಸುತ್ತೇನೆ, ಅದರ ಅಡಿಯಲ್ಲಿ ಗಿಗ್ ವರ್ಕರ್ಸ್ ವೆಲ್ಫೇರ್ ಬೋರ್ಡ್ ರಚನೆಯ ಜೊತೆಗೆ 200 ಕೋಟಿ ರೂ.ಗಳೊಂದಿಗೆ ಗಿಗ್ ವರ್ಕರ್ಸ್ ಕಲ್ಯಾಣ ನಿಧಿಯನ್ನು ಸ್ಥಾಪಿಸಲಾಗುವುದು” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...