Homeಮುಖಪುಟ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

- Advertisement -
- Advertisement -

ಪ್ರೇಮಿಗಳ ದಿನವನ್ನು ‘ಹಸು ಅಪ್ಪು ದಿನ’ವನ್ನಾಗಿ ಆಚರಿಸಿ ಎಂದು ಭಾರತೀಯ ಪಶು ಕಲ್ಯಾಣ ಮಂಡಳಿಯು ಮಾಡಿದ್ದ ಮನವಿಯನ್ನು ಶುಕ್ರವಾರ ಹಿಂಪಡೆಯಲಾಗಿದೆ. ಹಸು ಅಪ್ಪಿಕೊ ದಿನಾಚರಣೆ ಮಾಡಲು ಮಂಡಳಿ ನೀಡಿದ್ದ ಮನವಿಯು ಅಪಹಾಸ್ಯಕ್ಕೆ ಈಡಾಗಿತ್ತು.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡಿದ ನಿರ್ದೇಶನದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಇತ್ತೀಚೆಗೆ ‘ಹಸು ಅಪ್ಪಿಕೋ ದಿನಾಚರಣೆ’ಗೆ ಕರೆ ನೀಡಿದ್ದ ಮಂಡಳಿಯು, “ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದಿತ್ತು.

ಮುಂದುವರಿದು, “ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದು ಹೇಳಿತ್ತು.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಿತ್ತು.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿದ್ದವು. ಹಲವಾರು ವ್ಯಂಗ್ಯಚಿತ್ರಗಳು ಹರಿದಾಡಿದ್ದವು. ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್‌ಗಳ ಸುರಿಮಳೆಯೇ ಆಗಿತ್ತು. ಹಸುವನ್ನು ಅಪ್ಪಿಕೊಳ್ಳಲು ಹೋಗಿ ವದೆ ತಿಂದವರ ವಿಡಿಯೊಗಳನ್ನು ವ್ಯಾಪಕವಾಗಿ ವೈರಲ್ ಆಗಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದರು.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದರು.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...