Homeಮುಖಪುಟ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

- Advertisement -
- Advertisement -

ಪ್ರೇಮಿಗಳ ದಿನವನ್ನು ‘ಹಸು ಅಪ್ಪು ದಿನ’ವನ್ನಾಗಿ ಆಚರಿಸಿ ಎಂದು ಭಾರತೀಯ ಪಶು ಕಲ್ಯಾಣ ಮಂಡಳಿಯು ಮಾಡಿದ್ದ ಮನವಿಯನ್ನು ಶುಕ್ರವಾರ ಹಿಂಪಡೆಯಲಾಗಿದೆ. ಹಸು ಅಪ್ಪಿಕೊ ದಿನಾಚರಣೆ ಮಾಡಲು ಮಂಡಳಿ ನೀಡಿದ್ದ ಮನವಿಯು ಅಪಹಾಸ್ಯಕ್ಕೆ ಈಡಾಗಿತ್ತು.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡಿದ ನಿರ್ದೇಶನದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಇತ್ತೀಚೆಗೆ ‘ಹಸು ಅಪ್ಪಿಕೋ ದಿನಾಚರಣೆ’ಗೆ ಕರೆ ನೀಡಿದ್ದ ಮಂಡಳಿಯು, “ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದಿತ್ತು.

ಮುಂದುವರಿದು, “ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದು ಹೇಳಿತ್ತು.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಿತ್ತು.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿದ್ದವು. ಹಲವಾರು ವ್ಯಂಗ್ಯಚಿತ್ರಗಳು ಹರಿದಾಡಿದ್ದವು. ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್‌ಗಳ ಸುರಿಮಳೆಯೇ ಆಗಿತ್ತು. ಹಸುವನ್ನು ಅಪ್ಪಿಕೊಳ್ಳಲು ಹೋಗಿ ವದೆ ತಿಂದವರ ವಿಡಿಯೊಗಳನ್ನು ವ್ಯಾಪಕವಾಗಿ ವೈರಲ್ ಆಗಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದರು.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದರು.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...