Homeಮುಖಪುಟ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

- Advertisement -
- Advertisement -

ಪ್ರೇಮಿಗಳ ದಿನವನ್ನು ‘ಹಸು ಅಪ್ಪು ದಿನ’ವನ್ನಾಗಿ ಆಚರಿಸಿ ಎಂದು ಭಾರತೀಯ ಪಶು ಕಲ್ಯಾಣ ಮಂಡಳಿಯು ಮಾಡಿದ್ದ ಮನವಿಯನ್ನು ಶುಕ್ರವಾರ ಹಿಂಪಡೆಯಲಾಗಿದೆ. ಹಸು ಅಪ್ಪಿಕೊ ದಿನಾಚರಣೆ ಮಾಡಲು ಮಂಡಳಿ ನೀಡಿದ್ದ ಮನವಿಯು ಅಪಹಾಸ್ಯಕ್ಕೆ ಈಡಾಗಿತ್ತು.

ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯ ನೀಡಿದ ನಿರ್ದೇಶನದ ಆಧಾರದ ಮೇಲೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಮಂಡಳಿ ತಿಳಿಸಿದೆ.

ಇತ್ತೀಚೆಗೆ ‘ಹಸು ಅಪ್ಪಿಕೋ ದಿನಾಚರಣೆ’ಗೆ ಕರೆ ನೀಡಿದ್ದ ಮಂಡಳಿಯು, “ಗೋವು ಭಾರತೀಯ ಸಂಸ್ಕೃತಿ ಮತ್ತು ಗ್ರಾಮೀಣ ಆರ್ಥಿಕತೆಯ ಬೆನ್ನೆಲುಬು ಎಂದು ನಮಗೆಲ್ಲರಿಗೂ ತಿಳಿದಿದೆ, ಗೋವು ನಮ್ಮ ಜೀವನವನ್ನು ಉಳಿಸಿಕೊಳ್ಳುತ್ತದೆ, ಸಂಪತ್ತು ಮತ್ತು ಜೀವವೈವಿಧ್ಯತೆಯನ್ನು ಪಶುಗಳು ಪ್ರತಿನಿಧಿಸುತ್ತವೆ. ತಾಯಿಯಂತೆ ಪೋಷಿಸುವ ಸ್ವಭಾವದಿಂದಾಗಿ, ಮನುಷ್ಯನ ಶ್ರೀಮಂತಿಕೆಗೆ ಎಲ್ಲವನ್ನೂ ನೀಡುವ ಕಾರಣದಿಂದಾಗಿ ಹಸುವನ್ನು ‘ಕಾಮಧೇನು’ ಮತ್ತು ‘ಗೋ ಮಾತಾ’ ಎಂದು ಕರೆಯಲಾಗುತ್ತದೆ” ಎಂದಿತ್ತು.

ಮುಂದುವರಿದು, “ಕಾಲಾನಂತರದಲ್ಲಿ ಪಾಶ್ಚಿಮಾತ್ಯ ಸಂಸ್ಕೃತಿಯ ಬೆಳವಣಿಗೆಯಿಂದಾಗಿ ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ. ಪಾಶ್ಚಿಮಾತ್ಯ ನಾಗರಿಕತೆಯ ಬೆರಗು ನಮ್ಮ ಭೌತಿಕ ಸಂಸ್ಕೃತಿ ಮತ್ತು ಪರಂಪರೆಯನ್ನು ಬಹುತೇಕ ಮರೆತುಹೋಗುವಂತೆ ಮಾಡಿದೆ” ಎಂದು ಹೇಳಿತ್ತು.

“ಹಸುಗಳಿಂದಾಗುವ ಅಪಾರ ಪ್ರಯೋಜನದ ದೃಷ್ಟಿಯಿಂದ, ಹಸುವಿನ ಜೊತೆ ಅಪ್ಪಿಕೊಳ್ಳುವುದು ಭಾವನಾತ್ಮಕ ಶ್ರೀಮಂತಿಕೆಯನ್ನು ತರುತ್ತದೆ. ಆದ್ದರಿಂದ ನಮ್ಮ ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷ ಹೆಚ್ಚಿಸುತ್ತದೆ. ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಕೌ ಹಗ್‌ ಡೇ (ಗೋವು ತಬ್ಬಿಕೊಳ್ಳುವ ದಿನ) ಆಚರಿಸಬಹುದು. ಗೋಮಾತೆಯ ಮಹತ್ವವನ್ನು ಗಮನದಲ್ಲಿಟ್ಟುಕೊಳ್ಳಿ. ಜೀವನವನ್ನು ಸಂತೋಷದಾಯಕವಾಗಿಸಿ. ಸಕಾರಾತ್ಮಕ ಶಕ್ತಿ ತುಂಬಿಕೊಳ್ಳಿ” ಎಂದು ಸಲಹೆ ನೀಡಿತ್ತು.

ಅಪಹಾಸ್ಯಕ್ಕೀಡಾದ ಹಸು ಅಪ್ಪುವ ಕರೆ

‘ಹಸು ತಬ್ಬುವ ದಿನ ಆಚರಣೆ’ ಮಾಡಬೇಕೆಂದು ಪಶು ಕಲ್ಯಾಣ ಮಂಡಳಿ ನೀಡಿರುವ ಕರೆಗೆ ಟೀಕೆಗಳು ವ್ಯಕ್ತವಾಗಿದ್ದವು. ಹಲವಾರು ವ್ಯಂಗ್ಯಚಿತ್ರಗಳು ಹರಿದಾಡಿದ್ದವು. ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್‌ಗಳ ಸುರಿಮಳೆಯೇ ಆಗಿತ್ತು. ಹಸುವನ್ನು ಅಪ್ಪಿಕೊಳ್ಳಲು ಹೋಗಿ ವದೆ ತಿಂದವರ ವಿಡಿಯೊಗಳನ್ನು ವ್ಯಾಪಕವಾಗಿ ವೈರಲ್ ಆಗಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್‌ಗಳನ್ನು ಮಾಡುವ ಮೂಲಕ ಅನೇಕರು ವಿರೋಧ ವ್ಯಕ್ತಪಡಿಸಿದ್ದರು. ಕನ್ನಡ ಪರ ಹೋರಾಟಗಾರ ಎಸ್.ಸಿ.ದಿನೇಶ್‌ ಕುಮಾರ್‌, “ಪ್ರೇಮಿಗಳ ದಿನಕ್ಕೆ ಕೇಂದ್ರ ಸರ್ಕಾರದ ಕೌಂಟರ್. ಕೌ ಹಗ್‌ ಡೇ ಅಂತೆ. ದನ ತಬ್ಬಿಕೊಳ್ಳೋ ದಿನ! ಬಹುಶಃ ಮೋದಿಯವರೇ ಒಂದು ದನ ತಬ್ಕೊಂಡು ಉದ್ಘಾಟನೆ ಮಾಡಬಹುದು. ಆದರೆ ದನ ತಬ್ಕೊಳ್ಳೋದು ಹೆಂಗೆ? ಇದೊಂಥರ ಬಡಪಾಯಿ ದನಗಳಿಗೆ ಲೈಂಗಿಕ ಕಿರುಕುಳದ ಥರ ಅನ್ನಿಸಲ್ವಾ? ತೀರ್ಮಾನ ತೆಗೆದುಕೊಳ್ಳೋದಕ್ಕೆ ಮುಂಚೆ ದನಗಳಿಗೂ ಒಂದು ಮಾತು ಕೇಳಬೇಕಿತ್ತು ಅಲ್ವಾ? ನಿಮಗೇನನ್ನಿಸುತ್ತೆ?” ಎಂದು ಪ್ರಶ್ನಿಸಿದ್ದರು.

ಬರಹಗಾರ ಚಂದ್ರಪ್ರಭ ಕಠಾರಿ ಅವರು, “ಪ್ರೇಮಿಗಳ ದಿನಾಚರಣೆ (Valentines day) ಬಂದರೆ ಸಾಕು, ಈ ಮತಾಂಧರಿಗೆ ಯಾಕೊ ಮೈಯೆಲ್ಲ ತುರಿಕೆ ಶುರುವಾಗುತ್ತೆ. ಸಾಲದಕ್ಕೆ ಎಲೆಕ್ಷನ್ ಬೇರೆ ಹತ್ತಿರ ಇದೆ. 40% ಕಮಿಷನ್ ಭ್ರಷ್ಟ ಸರ್ಕಾರ ಅನ್ನೋ ಇಮೇಜ್ ಇನ್ನೂ ಅಳಿಸಲಾಗಿಲ್ಲ. ಏನೋ ಒಂದು ಡೈವರ್ಷನ್ ಟ್ಯಾಕ್ ಟಿಕ್ಸ್ ಮಾಡ್ಬೇಕಲ್ಲ. ಅದಕ್ಕೆ ಫೆಬ್ರವರಿ 14ರಂದು ಹಸುಗಳನ್ನು ತಬ್ಬಿಕೊ ಬೇಕಂತೆ (ಅದು ಎಗರಿಸಿ ಒದಿದಿದ್ರೆ ಸಾಕು). ಅವತ್ತೇ ಏಕೆ ದಿನಾ ತಬ್ಕೊಂಡು ಕೊಟ್ಟಿಗೆಯಲ್ಲೇ ಮಲಗಿ…ಯಾರು ಬೇಡ ಅಂದದ್ದು” ಎಂದು ಕುಟುಕಿದ್ದರು.

ಮುಂದುವರಿದು, “ಅದಿರಲಿ, ಸಾರ್ವಜನಿಕವಾಗಿ ಈ ಕೇಸರಿಗಳು ಇಂಥ ಹೇಳಿಕೆ ಕೊಟ್ರೆ ಆಶ್ಚರ್ಯವೇನಿಲ್ಲ. ಆದರೆ ಅನಿಮಲ್ ವೇಲ್‌ಫೇರ್‌ ಬೋರ್ಡ್ ಆಫ್ ಇಂಡಿಯಾದಂತಹ ಸರ್ಕಾರಿ ಸಂಸ್ಥೆಯ ಮೂಲಕ ಆರ್ಡರ್ ಮಾಡುವಷ್ಟು ಲಜ್ಜೆಗೇಡಿತನ ಈ ಫ್ಯಾಶಿಸ್ಟ್ ಮೋದಿ ಸರ್ಕಾರದ್ದು” ಎಂದು ಬೇಸರ ವ್ಯಕ್ತಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...