Homeಕರ್ನಾಟಕ‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

‘ಅತ್ಯಾಚಾರ ರಾಜಕೀಯ’ ಕುರಿತು ಸಂವಾದ ಕಾರ್ಯಕ್ರಮ ನಾಳೆ

- Advertisement -
- Advertisement -

‘ಅತ್ಯಾಚಾರದ ರಾಜಕೀಯ: ನ್ಯಾಯ, ಹೊಣೆಗಾರಿಕೆ ಮತ್ತು ಪುನಶ್ಚೇತನ’ ಸಾರ್ವಜನಿಕ ಸಂವಾದ ಕಾರ್ಯಕ್ರಮವನ್ನು ‘ಲೈಂಗಿಕ ದೌರ್ಜನ್ಯದ ವಿರುದ್ಧ ಕರ್ನಾಟಕ’ (‘ನಾವೆದ್ದು ನಿಲ್ಲದಿದ್ದರೆ’ ಒಕ್ಕೂಟದ ಭಾಗ) ವತಿಯಿಂದ ಫೆಬ್ರುವರಿ 11ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.

ಸೇಂಟ್ ಜೋಸೆಫ್ ವಿಶ್ವ ವಿದ್ಯಾಲಯದ ಆಡಿಟೋರಿಯಂ (ಲಾಂಗ್ ಫೋರ್ಡ್ ರೋಡ್, ಶಾಂತಿನಗರ ಬೆಂಗಳೂರು)ನಲ್ಲಿ ಬೆಳಿಗ್ಗೆ 9.30 ರಿಂದ ಸಂಜೆ 5.30 ರವರೆಗೆ ಕಾರ್ಯಕ್ರಮ ನಡೆಯಲಿದೆ.

ಮಹಿಳೆ ಮತ್ತು ಮಕ್ಕಳ ಮೇಲೆ ಯಾವುದೇ ಭಯವಿಲ್ಲದೆ ನಡೆಯುತ್ತಿರುವ ಅತ್ಯಾಚಾರ ಲೈಂಗಿಕ ದೌರ್ಜನ್ಯಗಳು, ಅದರ ಹೊಣೆಗಾರಿಕೆ ಮತ್ತು ಸಂತ್ರಸ್ತರ ಪುನಶ್ಚೇತನದ ಕುರಿತು ಚರ್ಚಿಸಲಾಗುತ್ತದೆ.

ಇತ್ತೀಚೆಗೆ ಕರ್ನಾಟಕದಲ್ಲಿ ಜರುಗಿದ ಕೆಲವು ಅತ್ಯಾಚಾರ ಘಟನೆಗಳ ವೈಯಕ್ತಿಕ ಹಂಚಿಕೆ, ಇಂದಿನ ಸಮಾಜೋ ರಾಜಕೀಯ ಮತ್ತು ಕಾನೂನು ವ್ಯವಸ್ಥೆಯ ಹಿನ್ನೆಲೆಯಲ್ಲಿ ಅವುಗಳನ್ನು ಪರಿಶೀಲಿಸುತ್ತ ಯಾವ ಪರಿಸ್ಥಿತಿಯಲ್ಲಿ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿವೆ ಮತ್ತು ಅವುಗಳ ಪರಿಣಾಮಗಳೇನಾಗುತ್ತಿವೆ ಎಂಬುದನ್ನು ಪರಿಣಿತರ ಜೊತೆಗೆ ಸಂವಾದದಲ್ಲಿ ವಿಶ್ಲೇಷಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

ಮಹಿಳಾ ದೃಷ್ಟಿಕೋನದಲ್ಲಿ ಅವುಗಳ ಚರ್ಚೆ ಮಾಡುತ್ತ ಲಿಂಗ, ಲಿಂಗತ್ವ, ವಯಸ್ಸು, ಜಾತಿ, ಧರ್ಮ ಮತ್ತು ವರ್ಗಗಳೆಂಬ ವಿಚಾರಗಳು ನ್ಯಾಯದ ಹಾದಿಯಲ್ಲಿ ಹೇಗೆ ತಡೆಯಾಗಿ ನಿಲ್ಲುತ್ತಿವೆ ಎಂಬುದನ್ನು ಈ ಸಂವಾದ ಕಾರ್ಯಕ್ರಮದಲ್ಲಿ ವಿಮರ್ಶಿಸಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ವಿವಿಧ ಭಾಗಗಳಿಂದ ಬರುತ್ತಿರುವ ಮಹಿಳಾ ಮತ್ತು ಮಾನವ ಹಕ್ಕುಗಳ ಸಂಘಟನೆಗಳು ಒಂದು ವೇದಿಕೆಯಡಿಯಲ್ಲಿ ಒಟ್ಟಿಗೆ ಸೇರುತ್ತಿವೆ. ಒಂದೊಂದು ಪ್ರಕರಣದಲ್ಲೂ ನ್ಯಾಯವನ್ನು ಕೇಳುವುದರೊಂದಿಗೆ ‘ಮಹಿಳೆಯರ ಮೇಲಿನ ದೌರ್ಜನ್ಯಗಳ ವಿರುದ್ಧ ಕರ್ನಾಟಕ’ ಪ್ರಶ್ನಿಸುತ್ತಿದೆ.  ಈ ಸಮಾವೇಶದ ಮೂಲಕ ಮಹಿಳೆಯರ ಆತಂಕವನ್ನು ಒಂದು ವ್ಯವಸ್ಥಿತ ಹಾಗೂ ಸೃಜನಶೀಲ ರೀತಿಯಲ್ಲಿ ಸಮಾಜದ ಮುಂದಿಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಸಾಮಾಜಿಕ ಕಾರ್ಯಕರ್ತರು, ನ್ಯಾಯವಾದಿಗಳು, ಮಾಧ್ಯಮ ತಜ್ಞರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಂವಾದದಲ್ಲಿ ಭಾಗಿಯಾಗಲಿದ್ದಾರೆ. ಸಮಾಜವು ಜಾತಿ, ಕೋಮು ಮತ್ತು ವರ್ಗಗಳಾಗಿ ವಿಭಜನೆಗೊಂಡಿರುವ ಈ ಸಂದರ್ಭದಲ್ಲಿ ಹೆಚ್ಚುತ್ತಿರುವ ಶಿಕ್ಷಾ ಭಯವಿಲ್ಲದಿರುವುದನ್ನು ಚರ್ಚಿಸಿ ನ್ಯಾಯ, ಹೊಣೆಗಾರಿಕೆ ಮತ್ತು ಸಂತ್ರಸ್ತರಿಗೆ ಸಂತೈಸುವ, ಪುನಶ್ಚೇತನ ಮೂಡಿಸುವ ಹಾದಿಗಳನ್ನೂ ಹುಡುಕುವುದು ಈ ಸಂವಾದದ ಉದ್ದೇಶವಾಗಿದೆ. ಕಾರ್ಯಕ್ರಮದ ಕೊನೆಯಲ್ಲಿ ನ್ಯಾಯಾಂಗ ಮತ್ತು ಶಾಸಕಾಂಗಗಳ ಅಧಿಕಾರ ರೂಢರಿಗೆ ಹಕ್ಕೊತ್ತಾಯಗಳನ್ನು ಸಲ್ಲಿಸಿ ಅವರಿಂದ ಹೊಣೆಗಾರಿಕೆಯ ಪ್ರತಿಕ್ರಿಯೆಗಳನ್ನು ನಿರೀಕ್ಷಿಸಲಾಗುವುದು ಎಂದು ಹೇಳಿದ್ದಾರೆ.

ಜನವಾದಿಮಹಿಳಾ ಸಂಘಟನೆಯ ಡಾ. ಮೀನಾಕ್ಷಿ ಬಾಳಿ, ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಗೃಹಕಾರ್ಮಿಕರ ಯೂನಿಯನ್‌ನ ಗೀತಾ ಮೆನನ್, ಸಾಧನಾ ಮಹಿಳಾ ಸಂಘದ ಗೀತಾ, ದಲಿತ ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಜ್ಯೋತಿ ಹಿಟ್ನಾಳ್, ಸಂವಾದ ಬದುಕು ಕಾಲೇಜಿನ ವಿಶ್ರಾಂತ ಪ್ರಾಂಶುಪಾಲರಾದ ಇಶ್ರತ್ ನಿಸ್ಸಾರ್, ಬೆಬಾಕ್ ಕಲೆಕ್ಟಿವ್ ಮುಂಬೈನ ಹಸೀನಾ ಖಾನ್, ನ್ಯಾಶನಲ್ ಫೆಡರೇಶನ್ ಫಾರ್ ದಲಿತ್ ವಿಮೆನ್‌ನ ರೂತ್ ಮನೋರಮಾ, ಒಂದೆಡೆ ಸಂಸ್ಥೆಯ ಅಕ್ಕಯ್‌ ಪದ್ಮಶಾಲಿ, ಓಪನ್ ಸ್ಪೇಸ್‌ನ ಅನಿತಾ ಚೆರಿಯೋ ಮತ್ತು ಸರ್ವೋಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ವೃಂದಾ ಗ್ರೋವರ್ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...