Homeಮುಖಪುಟಹೈಕೋರ್ಟ್‌ನಲ್ಲಿ 59 ಲಕ್ಷ, ಸುಪ್ರೀಂಕೋರ್ಟ್‌ನಲ್ಲಿ 69,511 ಪ್ರಕರಣಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

ಹೈಕೋರ್ಟ್‌ನಲ್ಲಿ 59 ಲಕ್ಷ, ಸುಪ್ರೀಂಕೋರ್ಟ್‌ನಲ್ಲಿ 69,511 ಪ್ರಕರಣಗಳು ಬಾಕಿ ಉಳಿದಿವೆ: ಕೇಂದ್ರ ಸರ್ಕಾರ

- Advertisement -
- Advertisement -

ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ ಸೇರಿದಂತೆ 59,87,477 ಪ್ರಕರಣಗಳು, ಸುಪ್ರೀಂ ಕೋರ್ಟ್‌ನಲ್ಲಿ 69,511 ಪ್ರಕರಣಗಳು ಫೆಬ್ರವರಿ 1ರವರೆಗೆ ಬಾಕಿ ಉಳಿದಿವೆ ಎಂದು ಕೇಂದ್ರ ಸರ್ಕಾರ ಗುರುವಾರ ರಾಜ್ಯಸಭೆಯಲ್ಲಿ ತಿಳಿಸಿದೆ.

ತೆಲುಗು ದೇಶಂ ಪಕ್ಷದ ಸಂಸದ ಕನಕಮೇಡಲ ರವೀಂದ್ರ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಈ ಹೇಳಿಕೆ ನೀಡಿದ್ದಾರೆ.

ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ 59,87,477 ಪ್ರಕರಣಗಳ ಪೈಕಿ ಅತಿ ಹೆಚ್ಚು (10,30,185) ಅಲಹಾಬಾದ್ ಹೈಕೋರ್ಟ್‌ನಲ್ಲಿವೆ. ನಂತರದ ಸ್ಥಾನದಲ್ಲಿ ರಾಜಸ್ಥಾನ (6,40,267), ಬಾಂಬೆ (6,20,586) ಹೈಕೋರ್ಟ್‌ಗಳಿದ್ದು, ಸಿಕ್ಕಿಂ ಹೈಕೋರ್ಟಿನಲ್ಲಿ ಫೆಬ್ರವರಿ 1ರವರೆಗೆ ಅತಿ ಕಡಿಮೆ (171) ಪ್ರಕರಣಗಳು ಬಾಕಿ ಉಳಿದಿವೆ.

ಡಿಸೆಂಬರ್ 31, 2022ರ ಅಂಕಿ-ಅಂಶದ ಪ್ರಕಾರ ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 4.34 ಕೋಟಿ ಪ್ರಕರಣಗಳು ಬಾಕಿ ಉಳಿದಿವೆ ಎಂದು ಪಿಟಿಐ ವರದಿ ಮಾಡಿದೆ.

ಫೆಬ್ರವರಿ 2ರಂದು ನೀಡಿದ ಪ್ರತ್ಯೇಕ ಉತ್ತರದಲ್ಲಿ, “ಫೆಬ್ರವರಿ 2ರಂದು ಸುಪ್ರೀಂ ಕೋರ್ಟ್‌ನಲ್ಲಿ 81 ಪ್ರಕರಣಗಳು, ಹೈಕೋರ್ಟ್‌ಗಳಲ್ಲಿ 1,24,810 ಪ್ರಕರಣಗಳು, ಜಿಲ್ಲಾ ಮತ್ತು ಅಧೀನ ನ್ಯಾಯಾಲಯಗಳಲ್ಲಿ 2,76,208 ಪ್ರಕರಣಗಳು 25 ವರ್ಷಗಳಿಂದ ಬಾಕಿ ಉಳಿದಿವೆ” ಎಂದು ರಿಜಿಜು ಹೇಳಿದ್ದಾರೆ.

ಜನತಾ ದಳ (ಯುನೈಟೆಡ್) ಸಂಸದ ರಾಮ್ ನಾಥ್ ಠಾಕೂರ್ ಅವರ ಪ್ರಶ್ನೆಗೆ ಉತ್ತರವಾಗಿ ಕಾನೂನು ಸಚಿವರು ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಲಯಗಳಲ್ಲಿ ಹೆಚ್ಚಿನ ಪ್ರಕರಣಗಳು ಬಾಕಿ ಉಳಿದಿರುವುದಕ್ಕೆ ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳ ಲಭ್ಯತೆ, ಪೋಷಕ ನ್ಯಾಯಾಲಯದ ಸಿಬ್ಬಂದಿ ಮತ್ತು ಮೂಲಭೂತ ಸೌಕರ್ಯದ ಕೊರತೆ ಸೇರಿದಂತೆ  ಹಲವಾರು ಕಾರಣಗಳಿವೆ ಎಂದು ರಿಜಿಜು ಹೇಳಿದ್ದಾರೆ.

ಆಗಾಗ್ಗೆ ಮುಂದೂಡಿಕೆ ಮಾಡುವುದು, ಮೇಲ್ವಿಚಾರಣಾ ಕಾರ್ಯವಿಧಾನಗಳ ಕೊರತೆ ಮತ್ತು ಪ್ರಕರಣಗಳ ಸಂಕೀರ್ಣತೆಯು ದೀರ್ಘಾವಧಿಯವರೆಗೆ ಬಾಕಿ ಉಳಿದಿರುವ ಪ್ರಕರಣಗಳಿಗೆ ಕಾರಣಗಳು ಎಂದು ಅವರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...