Homeಮುಖಪುಟ'ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ': ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.

ಹಮಾರಾ ಪ್ರಸಾದ್ ಮಾತನಾಡಿರುವ ವಿಡಿಯೋದಲ್ಲಿ, ”ಅಂಬೇಡ್ಕರ್ ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕ ಜನಸಾಮಾನ್ಯರಿಗೆ ಜ್ಞಾನೋದಯಕ್ಕೆ ಒಂದು ವಿವರಣೆ ಎಂದು ಹೇಳಿದ್ದಾರೆ. ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು.” ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿರುವ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು.) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ. ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದಾರೆ.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಟಿಎನ್‌ಎಂ ಜೊತೆ ಮಾತನಾಡಿದ್ದು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಅವರು ಬರೆದಿರುವ ಹಿಂದೂ ಧರ್ಮದಲ್ಲಿ ಒಗಟುಗಳು ಎಂಬ ಪುಸ್ತಕವು ಹಿಂದೂ ಧರ್ಮವನ್ನು ವಿಮರ್ಶಸಿದೆ. ಈ ಪುಸ್ತಕದಲ್ಲಿ, ”ಬ್ರಾಹ್ಮಣ ಧರ್ಮಶಾಸ್ತ್ರ ಎಂದು ಹೇಳುತ್ತ ಜನಸಾಮಾನ್ಯರ ಮೇಲೆ ಹೇರಲಾದ ನಂಬಿಕೆಗಳ ಮೌಢ್ಯದ ನಿರೂಪಣೆಯನ್ನು ಒಳಗೊಂಡಿದೆ. ಬ್ರಾಹ್ಮಣರು ಇಲ್ಲಿಯ ಮೂಲ ನಿವಾಸಿಗಳನ್ನು ಯಾವ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಮತ್ತು ಅವರನ್ನು ತರ್ಕಬದ್ಧ ಚಿಂತನೆಯ ಹಾದಿಗೆ ಕರೆದೊಯ್ಯುವ ಉದ್ದೇಶ ಈ ಪುಸ್ತಕದಲ್ಲಿದೆ. ಹಿಂದು ಧರ್ಮ ಸನಾತನವಾದ ಧರ್ಮ ಇದು ಎಂದಿಗೂ ಬದಲಾಗುವುದಿಲ್ಲ ಎನ್ನುವ ದೃಷ್ಟಿಕೋನದಲ್ಲಿ ಬ್ರಾಹ್ಮಣರು ಪ್ರಚಾರ ಮಾಡಿದ್ದಾರೆ.”

”ಹಿಂದೂ ನಾಗರಿಕತೆಯು ಎಂದೂ ಬದಲಾಗದೇ ಸ್ಥಿರವಾಗಿದೆ ಎಂದು ಹೇಳಿದ ಅನೇಕ ಯುರೋಪಿಯನ್ ವಿದ್ವಾಂಸರು ಅವರ ದೃಷ್ಟಿಕೋನವನ್ನು ಬಲಪಡಿಸಿದ್ದಾರೆ. ಆದರೆ ಅವರ ದೃಷ್ಟಿಕೋನ ಸತ್ಯ ಅಲ್ಲ. ಹಿಂದೂ ಸಮಾಜವು ಕಾಲಕಾಲಕ್ಕೆ ಬದಲಾಗಿದೆ ಮತ್ತು ಆಗಾಗ್ಗೆ ಬದಲಾವಣೆಯು ಆಗುತ್ತಿದೆ ಎಂದು ನಾನು ಈ ಪುಸ್ತಕದಲ್ಲಿ ತೋರಿಸಲು ಪ್ರಯತ್ನಿಸಿದೆ. ಈ ಸಂಬಂಧದಲ್ಲಿ, ಒಗಟುಗಳನ್ನು ಹಿಂಸೆಯಿಂದ ಅಹಿಂಸೆಗೆ ಮತ್ತು ಅಹಿಂಸೆಯಿಂದ ಹಿಂಸೆಗೆ ಹೋಲಿಸಿ, ಈ ಹಿಂದೂ ಧರ್ಮ ಸನಾತನವಲ್ಲ ಎಂದು ಜನಸಾಮಾನ್ಯರಿಗೆ ಅರಿವು ಮೂಡಿಸಲು ಬಯಸುತ್ತೇನೆ” ಎಂದು ಪುಸ್ತಕದ ಪರಿಚಯದಲ್ಲಿ ಅಂಬೇಡ್ಕರ್ ಬರೆದಿದ್ದಾರೆ.

”ಈ ಪುಸ್ತಕದ ಎರಡನೇ ಉದ್ದೇಶ ಎಂದರೆ, ಬ್ರಾಹ್ಮಣರ ತಂತ್ರಗಳತ್ತ ಹಿಂದೂ ಜನಸಾಮಾನ್ಯರ ಗಮನವನ್ನು ಹೇಗೆ ಸೆಳೆಯುತ್ತಾರೆ ಮತ್ತು ಅವರು ಬ್ರಾಹ್ಮಣರಿಂದ ಹೇಗೆ ವಂಚನೆಗೆ ಒಳಗಾಗಿದ್ದಾರೆ, ದಾರಿ ತಪ್ಪಿದ್ದಾರೆ ಎನ್ನುವುದನ್ನು ಸ್ವತಃ ಯೋಚಿಸುವಂತೆ ಮಾಡುವುದು ಹೇಗೆ” ಎನ್ನುವ ಬಗ್ಗೆ ಅಂಬೇಡ್ಕರ್ ಅವರು ಪುಸ್ತಕದಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...