Homeಮುಖಪುಟ'ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ': ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ಹೇಳುವ ಮೂಲಕ ಹಿಂದುತ್ವ ಸಂಘಟನೆಯಾದ ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ಹಮಾರಾ ಪ್ರಸಾದ್ ಅವರು ನಾಲಿಗೆ ಹರಿಬಿಟ್ಟಿದ್ದಾರೆ. ಅವರ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದಾರೆ.

ಹಮಾರಾ ಪ್ರಸಾದ್ ಮಾತನಾಡಿರುವ ವಿಡಿಯೋದಲ್ಲಿ, ”ಅಂಬೇಡ್ಕರ್ ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕ ಜನಸಾಮಾನ್ಯರಿಗೆ ಜ್ಞಾನೋದಯಕ್ಕೆ ಒಂದು ವಿವರಣೆ ಎಂದು ಹೇಳಿದ್ದಾರೆ. ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು.” ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದಾರೆ.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿರುವ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು.) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದಾರೆ. ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್, ದಲಿತರ ಬಗ್ಗೆ ಅಪಹಾಸ್ಯ ಮಾಡಿದ ಸ್ಕಿಟ್ ಪ್ರದರ್ಶನ; ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದಾರೆ.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು ಟಿಎನ್‌ಎಂ ಜೊತೆ ಮಾತನಾಡಿದ್ದು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಅಂಬೇಡ್ಕರ್ ಅವರು ಬರೆದಿರುವ ಹಿಂದೂ ಧರ್ಮದಲ್ಲಿ ಒಗಟುಗಳು ಎಂಬ ಪುಸ್ತಕವು ಹಿಂದೂ ಧರ್ಮವನ್ನು ವಿಮರ್ಶಸಿದೆ. ಈ ಪುಸ್ತಕದಲ್ಲಿ, ”ಬ್ರಾಹ್ಮಣ ಧರ್ಮಶಾಸ್ತ್ರ ಎಂದು ಹೇಳುತ್ತ ಜನಸಾಮಾನ್ಯರ ಮೇಲೆ ಹೇರಲಾದ ನಂಬಿಕೆಗಳ ಮೌಢ್ಯದ ನಿರೂಪಣೆಯನ್ನು ಒಳಗೊಂಡಿದೆ. ಬ್ರಾಹ್ಮಣರು ಇಲ್ಲಿಯ ಮೂಲ ನಿವಾಸಿಗಳನ್ನು ಯಾವ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಮತ್ತು ಅವರನ್ನು ತರ್ಕಬದ್ಧ ಚಿಂತನೆಯ ಹಾದಿಗೆ ಕರೆದೊಯ್ಯುವ ಉದ್ದೇಶ ಈ ಪುಸ್ತಕದಲ್ಲಿದೆ. ಹಿಂದು ಧರ್ಮ ಸನಾತನವಾದ ಧರ್ಮ ಇದು ಎಂದಿಗೂ ಬದಲಾಗುವುದಿಲ್ಲ ಎನ್ನುವ ದೃಷ್ಟಿಕೋನದಲ್ಲಿ ಬ್ರಾಹ್ಮಣರು ಪ್ರಚಾರ ಮಾಡಿದ್ದಾರೆ.”

”ಹಿಂದೂ ನಾಗರಿಕತೆಯು ಎಂದೂ ಬದಲಾಗದೇ ಸ್ಥಿರವಾಗಿದೆ ಎಂದು ಹೇಳಿದ ಅನೇಕ ಯುರೋಪಿಯನ್ ವಿದ್ವಾಂಸರು ಅವರ ದೃಷ್ಟಿಕೋನವನ್ನು ಬಲಪಡಿಸಿದ್ದಾರೆ. ಆದರೆ ಅವರ ದೃಷ್ಟಿಕೋನ ಸತ್ಯ ಅಲ್ಲ. ಹಿಂದೂ ಸಮಾಜವು ಕಾಲಕಾಲಕ್ಕೆ ಬದಲಾಗಿದೆ ಮತ್ತು ಆಗಾಗ್ಗೆ ಬದಲಾವಣೆಯು ಆಗುತ್ತಿದೆ ಎಂದು ನಾನು ಈ ಪುಸ್ತಕದಲ್ಲಿ ತೋರಿಸಲು ಪ್ರಯತ್ನಿಸಿದೆ. ಈ ಸಂಬಂಧದಲ್ಲಿ, ಒಗಟುಗಳನ್ನು ಹಿಂಸೆಯಿಂದ ಅಹಿಂಸೆಗೆ ಮತ್ತು ಅಹಿಂಸೆಯಿಂದ ಹಿಂಸೆಗೆ ಹೋಲಿಸಿ, ಈ ಹಿಂದೂ ಧರ್ಮ ಸನಾತನವಲ್ಲ ಎಂದು ಜನಸಾಮಾನ್ಯರಿಗೆ ಅರಿವು ಮೂಡಿಸಲು ಬಯಸುತ್ತೇನೆ” ಎಂದು ಪುಸ್ತಕದ ಪರಿಚಯದಲ್ಲಿ ಅಂಬೇಡ್ಕರ್ ಬರೆದಿದ್ದಾರೆ.

”ಈ ಪುಸ್ತಕದ ಎರಡನೇ ಉದ್ದೇಶ ಎಂದರೆ, ಬ್ರಾಹ್ಮಣರ ತಂತ್ರಗಳತ್ತ ಹಿಂದೂ ಜನಸಾಮಾನ್ಯರ ಗಮನವನ್ನು ಹೇಗೆ ಸೆಳೆಯುತ್ತಾರೆ ಮತ್ತು ಅವರು ಬ್ರಾಹ್ಮಣರಿಂದ ಹೇಗೆ ವಂಚನೆಗೆ ಒಳಗಾಗಿದ್ದಾರೆ, ದಾರಿ ತಪ್ಪಿದ್ದಾರೆ ಎನ್ನುವುದನ್ನು ಸ್ವತಃ ಯೋಚಿಸುವಂತೆ ಮಾಡುವುದು ಹೇಗೆ” ಎನ್ನುವ ಬಗ್ಗೆ ಅಂಬೇಡ್ಕರ್ ಅವರು ಪುಸ್ತಕದಲ್ಲಿ ಬರೆದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...