Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...