Homeಮುಖಪುಟಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

ಖರ್ಗೆ ಭಾಷಣಕ್ಕೆ ಅವಕಾಶ ನೀಡದ ಸಭಾಧ್ಯಕ್ಷ ಧನಕರ್; ಪ್ರತಿಪಕ್ಷಗಳಿಂದ ಸಭಾತ್ಯಾಗ

- Advertisement -
- Advertisement -

ಸದನದಲ್ಲಿ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಮತ್ತು ಇತರ ಕೆಲವು ಪ್ರತಿಪಕ್ಷಗಳ ಸದಸ್ಯರು ಘೋಷಣೆಗಳನ್ನು ಕೂಗಿ ಸಭಾತ್ಯಾಗ ಮಾಡಿದರು.

ರಾಜ್ಯಸಭಾ ಸಭಾಧ್ಯಕ್ಷ ಜಗದೀಪ್ ಧನಕರ್ ಅವರು, ಖರ್ಗೆ ಅವರಿಗೆ ಎರಡು ಬಾರಿ ಮಾತನಾಡಲು ಅವಕಾಶ ನೀಡಿದ್ದರೂ ಕೂಡ ಬಿಜೆಪಿ ಸದಸ್ಯರು ಅವರಿಗೆ ಮಾತನಾಡಲು ಅವಕಾಶ ನೀಡಲಿಲ್ಲ. ಮೊದಲಿಗೆ ಕಡತದಿಂದ ತೆಗೆದುಹಾಕಲಾದ ಆರು ಅಂಶಗಳ ಭಾಗಗಳನ್ನು ಖರ್ಗೆ ಅವರು ಓದಲು ಪ್ರಾರಂಭಿಸಿದಾಗ ಮೊದಲ ಬಾರಿಗೆ ನಿಲ್ಲಿಸಲಾಯಿತು.

ಆ ಬಳಿಕ ಖರ್ಗೆ ಅವರು, ”ನಾವು ನಿಮ್ಮನ್ನು ಗೌರವಿಸುತ್ತೇವೆ, ನಮ್ಮ ಕೋಪವೆಲ್ಲಾ ಸರ್ಕಾರದ ಮೇಲೆಯೇ ಹೊರತು ವೈಯಕ್ತಿಕವಾಗಿ ನಿಮ್ಮ ಮೇಲಲ್ಲ… ನೀವು ನನ್ನ ಆರು ಅಂಶಗಳನ್ನು ಕಡತದಿಂದ ತಗೆದು ಹಾಕಿದ್ದೀರಿ. ಅವು ಅಸಂಸದೀಯ ಅಂಶಗಳಲ್ಲ, ಆದರೂ ನೀವು ಕಡತಕ್ಕೆ ಏಕೆ ಸೇರಿಸಲಿಲ್ಲ? ಸದನದಲ್ಲಿ ಕೇಳಿದ್ದಾರೆ. ಅವರು ದಾಖಲೆಯಲ್ಲಿ ಯಾವುದನ್ನು ಸೇರಿಸಲಾಗಿಲ್ಲ ಎಂಬ ಬಗ್ಗೆ ಖರ್ಗೆ ಅವರು ಅಧ್ಯಕ್ಷರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು.

ಈ ವೇಳೆ ವಿರೋಧ ಪಕ್ಷದ ಸಂಸದರು ಖರ್ಗೆ ಅವರಿಗೆ ಬೆಂಬಲ ವ್ಯಕ್ತಪಡಿಸಿ ಸರ್ಕಾರದ ವಿರುದ್ಧ ಪ್ರತಿಭಟಿಸಿದರು. ಆದರೆ ಇದಕ್ಕೆ ಸಭಾಪತಿ ಸಮ್ಮತಿಸಲಿಲ್ಲ. ಶೂನ್ಯ ವೇಳೆಯಲ್ಲಿ ಸದಸ್ಯರು ಮಾತನಾಡುತ್ತಿದ್ದಾಗ ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ತನಿಖೆಗೆ ಜಂಟಿ ಸಂಸದೀಯ ಸಮಿತಿಗೆ ವಿರೋಧ ಪಕ್ಷಗಳು ಒತ್ತಾಯಿಸಿ, ಘೋಷಣೆಗಳನ್ನು ಕೂಗಿದರು.

ಇದನ್ನೂ ಓದಿ: ರಾಜ್ಯಸಭಾ ಕಡತದಿಂದ ಮೋದಿ ವಿರುದ್ಧದ ತಮ್ಮ ಹೇಳಿಕೆ ತಗೆದಿದ್ದಕ್ಕೆ ಖರ್ಗೆ ಆಕ್ಷೇಪ

ಆ ಬಳಿಕ ವಿರೋಧ ಪಕ್ಷದ ಸಂಸದರು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಆಗ ಸಭಾಧ್ಯಕ್ಷರು ”ನಾನು ಅವರನ್ನು (ಖರ್ಗೆ) ಮಾತನಾಡಲು ಕರೆದಿದ್ದೇನೆ. ನಾನು ಕಡತದಿಂದ ತಗೆಸಿದ ಭಾಗಗಳನ್ನು ವಿರೋಧ ಪಕ್ಷದ ನಾಯಕರು ಓದಲು ಆರಂಭಿಸಿದ್ದರಿಂದ ನಾನು ಎದ್ದು ಬಂದೆ. ಇದನ್ನು ಸದಸ್ಯರು ಅರ್ಥಮಾಡಿಕೊಳ್ಳಬೇಕು. ಈಗ, ಅದನ್ನು ಎಂದಾದರೂ ಅನುಮತಿಸಬಹುದೇ? ಇಲ್ಲ.” ಆದರೂ ನೀವು ಅದನ್ನು ಕಡತಕ್ಕೆ ಸೇರಿಸಬೇಕು ಎಂದು ಹೇಳಿದರೆ ಅದು ನನ್ನ ನಿರ್ದೇಶನದ “ಅತಿರೇಕದ ನಿರ್ಲಕ್ಷ್ಯ” ಎಂದು ಅಧ್ಯಕ್ಷರು ಕರೆದರು.

ಪಕ್ಷದ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಖರ್ಗೆ ಅವರು, ”ಸಂಸತ್ತಿನ ಒಳಗೆ ಮತ್ತು ಹೊರಗೆ ಅದಾನಿ ವಿಷಯವನ್ನು ಕಾಂಗ್ರೆಸ್ ಪ್ರಸ್ತಾಪಿಸುತ್ತಲೇ ಇರುತ್ತದೆ. ಆದರೂ ಸರ್ಕಾರ ಪ್ರಜಾಸತ್ತಾತ್ಮಕವಾಗಿ ಕೆಲಸ ಮಾಡಲು ಸಿದ್ಧವಿಲ್ಲದಿದ್ದರೆ ಜನರೇ ಅಧಿಕಾರದಿಂದ ಕೆಳಗಿಳಿಸುತ್ತಾರೆ” ಎಂದು ಹೇಳಿದ್ದಾರೆ.

ಅದಾನಿ ವಿವಾದ, ಸಂಸತ್ತಿನಲ್ಲಿ ತಮ್ಮ ಮತ್ತು ರಾಹುಲ್ ಗಾಂಧಿ ಅವರ ಕೆಲವು ಟೀಕೆಗಳನ್ನು ಕಡತಕ್ಕೆ ಸೇರಸದೇ ಇರುವುದರ ಬಗ್ಗೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಸರ್ಕಾರಕ್ಕೆ 10 ಪ್ರಶ್ನೆಗಳನ್ನು ಕೇಳಿದ್ದಾರೆ.

ಅದಾನಿ ವಿಷಯವು ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ಆಗಿದೆ. ಅದರ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆದರೆ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ತನಿಖೆಗೆ ಆದೇಶಿಸಲು ಸರ್ಕಾರ ಏಕೆ ಹಿಂಜರಿಯುತ್ತಿದೆ ಎಂದು ಖರ್ಗೆ ಪ್ರಶ್ನೆ ಮಾಡಿದ್ದಾರೆ.

”ನಾನಾಗಲಿ ರಾಹುಲ್ ಗಾಂಧಿ ಅವರಾಗಲಿ ಕಡತದಿಂದ ತಗೆಯುವಂತಹ ಅಸಂಸದೀಯ ಮಾತುಗಳನ್ನು ಮಾತನಾಡಿಲ್ಲ. ಅದಾನಿ ವಿಷಯದ ಬಗ್ಗೆ ಕೆಲವು ಪ್ರಶ್ನೆಗಳನ್ನು ಮಾತ್ರ ಕೇಳಿದ್ದೇವೆ” ಎಂದು ಖರ್ಗೆ ತಿಳಿಸಿದರು.

”ಅದಾನಿ ಗ್ರೂಪ್ ಮೇಲಿನ ಆರೋಪಗಳ ಬಗ್ಗೆ ಮೋದಿ ಸರ್ಕಾರವು ಜಂಟಿ ಸಂಸದೀಯ ಸಮಿತಿಯ ತನಿಖೆ ಏಕೆ ನಡೆಸುತ್ತಿಲ್ಲ? ಸಂಸತ್ತಿನಲ್ಲಿ ‘ಅದಾನಿ’ ಪದವನ್ನು ಯಾರಿಗೂ ಹೇಳಲು ಮೋದಿ ಜಿ ಮತ್ತು ಅವರ ಸರ್ಕಾರವು ಅವಕಾಶ ನೀಡದಿರುವುದಕ್ಕೆ ಕಾರಣವೇನು?” ಎಂದು ಪ್ರಶ್ನಿಸಿದರು.

ಸಾರ್ವಜನಿಕ ಹಣವನ್ನು ಒಳಗೊಂಡಿರುವ ಅತಿ ”ದೊಡ್ಡ ಹಗರಣ” ನಡೆದಿದ್ದರೂ ಆರ್‌ಬಿಐ, ಸೆಬಿ, ಇಡಿ, ಎಸ್‌ಎಫ್‌ಐಒ, ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ, ಐಟಿ ಮತ್ತು ಸಿಬಿಐ ಏಕೆ ಇನ್ನೂ ಮೌನವಾಗಿವೆ. ತನಿಖೆ ಏಕೆ ನಡೆಸುತ್ತಿಲ್ಲ? ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...