Homeಕರ್ನಾಟಕಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

ಅಂಬೇಡ್ಕರ್‌ ಕುರಿತು ಅವಹೇಳನ: ಜೈ‌ನ್‌ ವಿವಿ ವಿರುದ್ಧ ದಲಿತ ಮುಖಂಡರ ಆಕ್ರೋಶ

- Advertisement -
- Advertisement -

ರಾಷ್ಟ್ರ ನಾಯಕ, ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ಅವರಿಗೆ ಅವಹೇಳನ ಮಾಡಿ, ಮೀಸಲಾತಿ ಕುರಿತು ಕ್ಷುಲ್ಲಕವಾಗಿ ಚಿತ್ರಿಸಿ ಪ್ರಹಸನ (ಸ್ಕಿಟ್‌) ಪ್ರದರ್ಶಿಸಿರುವ ಬೆಂಗಳೂರಿನ ಜೈನ್‌‌ ವಿಶ್ವವಿದ್ಯಾನಿಲಯದ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಬಿ.ಆರ್.ಅಂಬೇಡ್ಕರ್ ಅಲ್ಲ ಅದು ಬಿಯರ್ ಅಂಬೇಡ್ಕರ್” ಎಂದು ಹೇಳುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಮತ್ತು ದಲಿತರ ಬಗ್ಗೆಯೂ ಅವಹೇಳನಕಾರಿ ಭಾಷೆ ಬಳಸಿ ವಿವಾದ ಹುಟ್ಟುಹಾಕಿದ್ದಾರೆ. ಸ್ಕಿಟ್‌ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶಕ್ಕೆ ಕಾರಣವಾಗಿದೆ.

ಬ್ಯಾನ್ ಜೈನ್‌ ಯೂನಿವರ್ಸಿಟಿ (ಜೈನ್ ವಿಶ್ವವಿದ್ಯಾನಿಲಯ ರದ್ದುಗೊಳಿಸಿ) ಎಂದು ದಲಿತ ಸಂಘರ್ಷ ಸಮಿತಿ ಆಗ್ರಹಿಸಿರುವ ಪೋಸ್ಟರ್‌ ವೈರಲ್ ಆಗುತ್ತಿದೆ. ಮತ್ತೊಂದೆಡೆ ಜೈನ್ ವಿವಿಯು, “ಅರಿವು ಮೂಡಿಸುವ ನಿಟ್ಟಿನಲ್ಲಿ ಈ ಸ್ಕಿಟ್ ಮಾಡಲಾಗಿದೆ. ಈ ರೀತಿಯ ಅಪಕಲ್ಪನೆಗಳು ಇರಬಾರದು ಎಂದು ಈ ಸ್ಕಿಟ್ ಕೊನೆಯಲ್ಲಿ ಸಂದೇಶ ಸಾರುತ್ತಿದೆ” ಎಂದು ಹೇಳಿಕೊಂಡಿದೆ. (ಸಾರ್ವಜನಿಕವಾಗಿ ಸ್ಕಿಟ್‌ನ ಪೂರ್ಣ ವಿಡಿಯೊ ಲಭ್ಯವಾಗಿಲ್ಲ.)

ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ ದಲಿತ ಮುಖಂಡರು ‘ನಾನುಗೌರಿ.ಕಾಂ’ಗೆ ಪ್ರತಿಕ್ರಿಯೆ ನೀಡಿದ್ದಾರೆ. ದಸಂಸ ಮುಖಂಡರಾದ ಮಾವಳ್ಳಿ ಶಂಕರ್‌ ಮಾತನಾಡಿ, “ಈ ಸ್ಕಿಟ್ ಮಾಡಿರುವವರ ಉದ್ದೇಶ ಸ್ಪಷ್ಟವಾಗುತ್ತಿದೆ. ಸಮಾಜದಲ್ಲಿ ಅರಿವು ಮೂಡಿಸಲು ಇದನ್ನು ಮಾಡಿದ್ದೇವೆ ಎಂದು ಅವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅರಿವು ಮೂಡಿಸಲು ಬೇರೆ ಬೇರೆ ಆಯಾಮಗಳು ಇರುತ್ತವೆ. ಆದರೆ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಬಗ್ಗೆ, ಮೀಸಲಾತಿ, ಅಸ್ಪೃಶ್ಯತೆಯ ಬಗ್ಗೆ ಬಳಸಿರುವ ಭಾಷೆಯು ಇವರ ಉದ್ದೇಶವೇನೆಂದು ಹೇಳುತ್ತದೆ. ಜಾತಿ ಪೀಡಿತ ಮನೋಭಾವ ಎದ್ದುಕಾಣುತ್ತಿದೆ” ಎಂದಿದ್ದಾರೆ.

“ಈ ಸ್ಕಿಟ್‌ನ ರಿಹರ್ಸಲ್‌ ನೋಡಿ ಪ್ರದರ್ಶನಕ್ಕೆ ಅನುಮತಿ ನೀಡಿದವರು ಯಾರು? ಅವರ ವಿರುದ್ಧ ಕಾನೂನು ಕ್ರಮ ಆಗಬೇಕಿದೆ. ಬಂಡವಾಳಶಾಹಿಗಳು ನಡೆಸುತ್ತಿರುವ ಈ ಸಂಸ್ಥೆಯ ಮ್ಯಾನೇಜ್‌ಮೆಂಟ್ ವಿರುದ್ಧ ಕ್ರಮ ಜರುಗಿಸಬೇಕಿದೆ. ಸರ್ಕಾರಗಳಿಗೆ ಈ ರೀತಿಯ ಮನಸ್ಥಿತಿಗಳೇ ಬೇಕಾಗಿವೆ. ಸಾಮಾಜಿಕ ನ್ಯಾಯವನ್ನು ಇವರು ಕಡೆಗಣಿಸುತ್ತಿದ್ದಾರೆ. ಅಪ್ರಜಾತ್ಮಕ ವ್ಯವಸ್ಥೆ ಬೆಳೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ಬಾಬಾ ಸಾಹೇಬರ ಕುರಿತು ಅವಹೇಳನಕಾರಿ ಸ್ಕಿಟ್ ಮಾಡಿಸಿದ್ದಾರೆ. ಯಾವ ಸಂದೇಶವನ್ನು ಸಮಾಜಕ್ಕೆ ನೀಡುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

“ಆರ್‌ಎಸ್‌ಎಸ್, ಬಿಜೆಪಿಯವರು ಮೀಸಲಾತಿ ಎಂದರೆ ಮೈ ಪರಚಿಕೊಳ್ಳುತ್ತಾರೆ. ಮೂಲತಃ ಸಾಮಾಜಿಕ ನ್ಯಾಯದ ವಿರೋಧಿ ಮನಸ್ಥಿತಿ ಇವರದ್ದು. ಮಂಡಲ್‌ ವರದಿಗೆ ಬೆಂಕಿ ಹಚ್ಚಿದವರು ಇವರು. ಮೀಸಲಾತಿಯ ವಿರುದ್ಧ ವಿಷ ಕಾರುತ್ತಿರುವವರು ಇವರು. ಆದರೆ ಇಡಬ್ಲ್ಯೂಎಸ್‌ ಮೂಲಕ ಅನಾಯಸವಾಗಿ ತಿನ್ನುತ್ತಿದ್ದಾರೆ. ಇಡಬ್ಲ್ಯೂಎಸ್‌ ಕುರಿತು ಇವರಿಗೆ ಏನೂ ಅನಿಸುವುದಿಲ್ಲ” ಎಂದು ಟೀಕಿಸಿದರು.

“ಬೆಂಗಳೂರು ವಿವಿ ವಿದ್ಯಾರ್ಥಿಗಳು ಹೋರಾಟಕ್ಕೆ ಕರೆ ನೀಡಿದ್ದು, ಜೈನ್‌ ವಿವಿ ಬಾಯ್ಕಾಟ್‌ ಘೋಷಣೆ ಕೂಗುತ್ತಿದ್ದಾರೆ. ಈ ವಿಶ್ವವಿದ್ಯಾನಿಲಯವನ್ನು ರದ್ದುಗೊಳಿಸಬೇಕು. ಈ ಸ್ಕಿಟ್‌ನಲ್ಲಿ ಭಾಗಿಯಾಗಿರುವವರು (ಸ್ಕಿಟ್ ಮಾಡಿದವನು, ಮಾಡಲು ಕುಮ್ಮಕ್ಕು ಕೊಟ್ಟವನು, ಅದನ್ನು ಪ್ರೋತ್ಸಾಹಿಸಿದ ಮ್ಯಾನೇಜ್‌ಮೆಂಟ್) ಯಾರೇ ಆದರೂ ಅವರ ವಿರುದ್ಧ ಕ್ರಮ ಜರುಗಿಸಬೇಕು. ಇಂತಹ ದೇಶದ್ರೋಹಿಗಳ ಮೇಲೆ ಯುಎಪಿಎ ಹಾಗೂ ಎಸ್‌ಸಿ, ಎಸ್‌ಟಿ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣದ ದಾಖಲಿಸಬೇಕು” ಎಂದು ಒತ್ತಾಯಿಸಿದರು.

ದಸಂಸ ಹಿರಿಯ ಮುಖಂಡರಾದ ಎನ್‌.ವೆಂಕಟೇಶ್ ಮಾತನಾಡಿ, “ದಲಿತ ಸಂಘಟನೆಗಳ ಐಕ್ಯತಾ ಹೋರಾಟ ಸಮಿತಿ ಈ ಘಟನೆಯನ್ನು ಖಂಡಿಸುತ್ತದೆ. ಇಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್‌ ಅವರನ್ನು ಟಾರ್ಗೆಟ್ ಮಾಡಿದ್ದಾರೆ. ಅಸಮಾನತೆಯನ್ನು ಉಳಿಸಿಕೊಂಡು ಹೋಗಬೇಕು ಎಂಬುದು ಸಂಘಪರಿವಾರದ ಆಲೋಚನೆ. ಹೀಗಾಗಿ ಅಂಬೇಡ್ಕರ್‌ ಅವರ ಚಿಂತನೆಗಳನ್ನು ಬುಡಮೇಲು ಮಾಡಲು, ಸಂವಿಧಾನ ವಿರೋಧಿ ಕಾರ್ಯಚರಣೆಯನ್ನು ನಡೆಸುತ್ತಿದ್ದಾರೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ” ಎಂದರು.

ಒಳಮೀಸಲಾತಿ ಹೋರಾಟದ ಮುಂಚೂಣಿ ಮುಖಂಡರಾದ ಅಂಬಣ್ಣ ಅರೋಲಿಕರ್‌ ಮಾತನಾಡಿ, “ಸಂವಿಧಾನ ಜಾರಿಮಾಡಬೇಕಾದ ಸರ್ಕಾರ ಇಂತಹ ಘಟನೆಗಳು ನಡೆದಾಗ ತಕ್ಷಣವೇ ಕ್ರಮ ಜರುಗಿಸಬೇಕು. ಸಂವಿಧಾನಶಿಲ್ಪಿಯನ್ನು ಅವಹೇಳನ ಮಾಡಿದವರನ್ನು ಬೇಷರತ್ತಾಗಿ ಅರೆಸ್ಟ್ ಮಾಡಿ, ತನಿಖೆ ಆರಂಭಿಸಬೇಕು. ಅನಗತ್ಯವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆಗೆ ಅವಕಾಶ ನೀಡಿ ಯುವಕರನ್ನು ಪ್ರಚೋದನೆ ಮಾಡಬಾರದು. ಇದು ಸರ್ಕಾರ ವೈಫಲ್ಯವಾಗುತ್ತದೆ. ಸ್ವಯಂ ಪ್ರೇರಣೆಯಿಂದ ಪ್ರಕರಣ ದಾಖಲಿಸಬೇಕು. ಇಂತಹ ವಿಚಾರಗಳು ಹೆಚ್ಚು ಚರ್ಚೆಯಾದಷ್ಟು ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ” ಎಂದು ಎಚ್ಚರಿಸಿದರು.

ಘಟನೆಯನ್ನು ಖಂಡಿಸಿದ ಹಿರಿಯ ದಲಿತ ಮುಖಂಡರಾದ ಕರಿಯಪ್ಪ ಗುಡಿಮನಿ, “ಕರ್ನಾಟಕ ಜನಶಕ್ತಿ, ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿಯ ಸ್ಥಳೀಯ ಕಾರ್ಯಕರ್ತರು ವಿಜಯನಗರ ಚಾಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಸುತ್ತಿದ್ದೇವೆ” ಎಂದು ಮಾಹಿತಿ ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...