Homeಕರ್ನಾಟಕಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ...!

ಹೈಕಮಾಂಡಿಗೇ ಸವಾಲು ಎಸೆದರೇ ಯಡಿಯೂರಪ್ಪ?: ಮತ್ತೊಂದು ದುಸ್ಸಾಹಸದತ್ತ ಹತಾಶ ನಾಯಕ…!

ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ...

- Advertisement -
- Advertisement -

ದಿಢೀರ್ ಬೆಳವಣಿಗೆ ಅನಿಸುವಂತಹ ಘಟನೆಗಳು ರಾಜ್ಯ ರಾಜಕೀಯದಲ್ಲಿ ಸಂಭವಿಸುತ್ತಿವೆ. ಮೊನ್ನೆ ಸರ್ಕಾರ ಬಿದ್ದಾಗ, ‘ಎಚ್ಚರಿಕೆಯ ಹೆಜ್ಜೆ ಇಡೋಣ’ ಎಂದು ಸಲಹೆ ನೀಡಿ, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದಕ್ಕೆ ತಡೆ ಹಾಕಿದ್ದ ಬಿಜೆಪಿ ಹೈಕಮಾಂಡ್ ಈಗ 12 ಗಂಟೆ ಸುಮಾರಿಗೆ ‘ಎಚ್ಚರಿಕೆಯ ಹೆಜ್ಜೆ ಇಡಿ, ರಿಸ್ಕ್ ತೆಗೆದುಕೊಳ್ಳುವ ಪೂರ್ತಿ ಜವಾಬ್ದಾರಿ ನಿಮ್ಮದೇ’ ಎನ್ನುವ ಮೂಲಕ ಯಡಿಯೂರಪ್ಪನವರ ಬಂಡಾಯದ ಮುಂದೆ ಮಂಡಿಯೂರಿ ಬಿಟ್ಟಂತಾಗಿದೆ.

ಸದ್ಯದ ರಾಜಕೀಯ ಪರಿಸ್ಥಿತಿ ಅದೆಷ್ಟು ಡೋಲಾಯಮಾನವಾಗಿದೆ ಎಂಬುದು ಸಾಮಾನ್ಯ ಜನರಿಗೂ ಗೊತ್ತು. ಅದಕ್ಕೆ ತಕ್ಕಂತೆ ಬಿಜೆಪಿ ಹೈಕಮಾಂಡ್ ಕೂಡ ಎಚ್ಚರ ವಹಿಸಿ ತಾಳ್ಮೆಯ ನಡೆಯ ಹಾದಿ ಆರಿಸಿಕೊಂಡಿತ್ತು. ಆದರೆ, ಮೊದಲೇ ಹತಾಶಗೊಂಡಿದ್ದ ಯಡಿಯೂರಪ್ಪ ನಿನ್ನೆ ರಾತ್ರಿ ಹೈಕಮಾಂಡಿಗೇ ಸವಾಲು ಎಸೆಯುವ ಮೂಲಕ ಹೈಕಮಾಂಡ್ ಅನ್ನು ತಮ್ಮ ಬೇಡಿಕೆಗೆ ಅಥವಾ ಆಗ್ರಹಕ್ಕೆ ಬಗ್ಗುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಇವತ್ತು ದೆಹಲಿಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ ಕುರಿತಂತೆ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ.ಪಿ ನಡ್ಡಾ ಅವರು ಪತ್ರಿಕಾಗೋಷ್ಠಿ ನಡೆಸುವುದು ನಿಗದಿಯಾಗಿತ್ತು. ನಿನ್ನೆ ಸ್ಪೀಕರ್ ರಮೇಶಕುಮಾರ್ ಮೂವರು ಶಾಸಕರನ್ನು ಅನರ್ಹಗೊಳಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಇನ್ನಷ್ಟು ಶಾಸಕರನ್ನು ಅನರ್ಹತೆಗೊಳಿಸುವ ಸೂಕ್ಷ್ಮ ಸೂಚನೆಯನ್ನು ಕೊಟ್ಟ ಮೇಲೆ ಎಚ್ಚರಗೊಂಡ ಬಿಜೆಪಿ ಹೈಕಮಾಂಡ್ ಸದ್ಯಕ್ಕೆ ದುಡುಕುವುದು ಬೇಡ ಎಂಬ ತೀರ್ಮಾನಕ್ಕೆ ಬಂದು, ಅದನ್ನೇ ಇವತ್ತು ಕಾರ್ಯಾಧ್ಯಕ್ಷ ಛಡ್ಡಾ ಮೂಲಕ ಹೇಳಿಸುವ ಉದ್ದೇಶ ಹೊಂದಿತ್ತು.

ಆದರೆ, ನಿನ್ನೆ ಸ್ಪೀಕರ್ ನಡೆ ನೋಡಿದ ಯಡಿಯೂರಪ್ಪ ತಮ್ಮ ಬೆಂಬಗಲಿಗರೊಂದಿಗೆ ಸಭೆ ನಡೆಸಿ, ‘ಇನ್ನು ಸುಮ್ಮನಿರಲಾಗಲ್ಲ, ಬಹುಮತ ಸಾಬೀತು ಮಾಡುವುದೇನೂ ದೊಡ್ಡ ಕೆಲಸವಲ್ಲ… ಹೀಗೇ ಬಿಟ್ಟರೆ ಈ ಹೈಕಮಾಂಡ್ ಇಲ್ಲಿ ರಾಷ್ಟ್ರಪತಿ ಆಡಳಿತವನ್ನೂ ಹೇರಬಹುದು. ಹಾಗಾಗಿ ಪ್ರಮಾಣವಚನ ತೆಗೆದುಕೊಳ್ಳುವುದೇ ಸೈ’ ಎಂಬ ಅಂತಿಮ ನಿರ್ಧಾರಕ್ಕೆ ಬಂದಿದ್ದರು ಎನ್ನಲಾಗಿದೆ. ಅದರ ಪರಿಣಾಮವಾಗಿಯೇ ಅವರು ಸೀದಾ ಅಮಿತ್ ಶಾಗೆ ಫೋನ್ ಮಾಡಿ, ನಾಳೆ ಯಾವುದೇ ಪರಿಸ್ಥಿತಿಯಲ್ಲೂ ನಾನು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದು ಪಕ್ಕಾ. ನೀವು ಒಪ್ಪದಿದ್ದರೆ ನಾನು ಬಿಜೆಪಿಗೇ ರಾಜೀನಾಮೆ ಕೊಡುತ್ತೇನೆ ಎಂದು ಬೆದರಿಸಿದ್ದಾರೆ ಎಂಬ ಮಾಹಿತಿಯಿದೆ. ಇದನ್ನು ಕೇಳಿ ಬೆಚ್ಚಿಬಿದ್ದ ಅಮಿತ್ ಶಾ ಅನಿವಾರ್ಯವಾಗಿ ಯಡಿಯೂರಪ್ಪರ ನಿಲುವಿಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಆದರೆ, 221 ಸದಸ್ಯರ ಸದನದಲ್ಲಿ 111 ಸದಸ್ಯರ ಬೆಂಬಲ ಇರಬೇಕು. ಆದರೆ 105 ಸದಸ್ಯರ ಬಲ ಹೊಂದಿರುವ ಯಡಿಯೂರಪ್ಪ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಆಶ್ಚರ್ಯದ ವಿಷಯವೇನೂ ಅಲ್ಲ. ಅವರು ಈ ಹಿಂದೆಯೂ ಬಿಜೆಪಿಗೆ ಬಹುಮತ ಇಲ್ಲದಾಗ್ಯೂ, ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷಗಳು ಜಂಟಿಯಾಗಿ ಪತ್ರ ನೀಡಿದ್ದಾಗ್ಯೂ, ಯಡಿಯೂರಪ್ಪನವರನ್ನೇ ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಆದರೆ, ಈಗಿನ ಪರಿಸ್ಥಿತಿ ಬೇರೆ. ಈಗ ಸ್ಪೀಕರ್ ಮೂವರನ್ನು ಅನರ್ಹಗೊಳಿಸಿದ್ದಾರೆ, ಉಳಿದವರ ರಾಜೀನಾಮೆ ಅಂಗೀಕರಿಸಿಲ್ಲ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಒಬ್ಬ ಪಕ್ಷೇತರ, ಒಬ್ಬ ಬಿಎಸ್ಪಿ ಸದಸ್ಯರು ಬೆಂಬಲ ನೀಡಿದರೂ, 111 ಆಗಲ್ಲ.

ಇಲ್ಲಿ ಯಡಿಯೂರಪ್ಪ ಮತ್ತು ರಾಜ್ಯಪಾಲರು ಮತ್ತೊಂದು ದುಸ್ಸಾಹಸಕ್ಕೆ ಕೈ ಹಾಕಿದ್ದಾರಾ? ಅಥವಾ ಯಡಿಯೂರಪ್ಪ ವಿಶ್ವಾಸಮತದಲ್ಲಿ ಫೇಲಾದ ನಂತರ ಬಿಜೆಪಿಗೆ ಅನುಕಂಪದ ಅಲೆ ದೊರೆಯಬಹುದು, ರಾಷ್ಟ್ರಪತಿ ಆಡಳಿತ ಘೋಷಿಸಿ ಆಮೇಲೆ ಚುನಾವಣೆ ಎದುರಿಸುವ ಯೋಜನೆಯನ್ನು ಹೈಕಮಾಡ್ ಮಾಡಿಕೊಂಡಿದೆಯಾ?

ಇವರ ಈ ಎಲ್ಲ ಆಟಗಳು ಸುಲಭವಾಗಿ ನಡೆಯುತ್ತವಾ? ಬರಲಿರುವ ಸ್ಪೀಕರ್ ತೀರ್ಮಾನಗಳು ಮತ್ತು ಸುಪ್ರಿಂಕೋರ್ಟಿನ ಆದೇಶಗಳನ್ನೂ ನಾವು ಗಮನದಲ್ಲಿಟ್ಟು ನೋಡಿದಾಗ, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಏನು ಸಂಭವಿಸಬಹುದು ಎಂದು ಹೇಳುವುದು ಕಷ್ಟವೇ…

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...