Homeಅಂಕಣಗಳುಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

ಏನಾದ್ರು ಮಾಡಿ ಮಂತ್ರಿಯಾಗಲೆಬೇಕು ಕಂಡ್ರೀ

- Advertisement -
- Advertisement -

ಅಂತಾರಾಷ್ಟ್ರೀಯ ಮಟ್ಟದ ಅರ್ಥಶಾಸ್ತ್ರಜ್ಞೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಇಡೀ ದೇಶದ ತುಂಬ ಚರ್ಚೆಯಾಗುತ್ತಿರುವ ಸಮಯದಲ್ಲಿ, ಬಡವರ ಪಾಲಿಗೆ ಯಾವ ಬೆನಿಫಿಟ್ಟೂ ಬಜೆಟ್ಟಿನಲ್ಲಿ ಇಲ್ಲವಂತಲ್ಲಾ. ಇದೇನು ಆಶ್ಚರ್ಯಪಡುವ ಸಂಗತಿಯಲ್ಲ. ಬಿಜೆಪಿ ಹುಟ್ಟಿನಲ್ಲೇ ಬಡವರ ವಿರೋಧಿಯಾಗಿದೆ. ಬಡವರು ಬಡವರಾಗಿದ್ದರೆ ಮಾತ್ರ ನಾವು ಮೆರೆಯಬಹುದು; ಗರ್ಭಗುಡಿಯಲ್ಲಿ ಕುಳಿತು ಶಿಖೆ ನೀವುತ್ತಾ, ಬೆವರಿಳಿಯುವಂತೆ ಭೂರಿ ಭೋಜನ ಬಾರಿಸಬಹುದು ಎಂದು ನಂಬಿದವರ ಸರಕಾರದಿಂದ ಬಡವರಿಗೆ ಅನುಕೂಲವಾಗುವುದುಂಟೆ. ಎಂದಿನವರೆಗೆ ಬಡತನ ತಾಂಡವವಾಡುತ್ತಿರುತ್ತದೊ ಅಲ್ಲಿಯವರೆಗೆ ನಾವೂ ನೃತ್ಯ ಮಾಡಬಹುದೆಂದು ನಂಬಿರುವ ಜನ ನಡೆಸುವ ಸರಕಾರದಲ್ಲಿ ಬಡವರಿಗಾಗಿ ನಿರ್ಮಲಾ ಏನಾದರೂ ಕೊಡುವುದರ ಬದಲು ಹಿಂದೆ ಕೊಟ್ಟಿದೆಲ್ಲವನ್ನ ಕಿತ್ತುಕೊಂಡಿದ್ದಾರೆ. ಎಂದಿನಂತೆ ದೇಶದ ಭವಿಷ್ಯದ ದೃಷ್ಟಿಯಿಂದ ಯಾವ ಭರವಸೆಯೂ ಇಲ್ಲದ ಬಜೆಟ್ಟು ದೇಶವ್ಯಾಪ್ತಿ ಚರ್ಚೆಯಾಗದಂತೆ ಮಾಡಲು ಈಗಾಗಲೇ ವೈದಿಕ ಶಿಖಾಮಣಿಗಳು ರಾಮಮಂದಿರವನ್ನು ಉಡಾಯಿಸುವ ಬೆದರಿಕೆ ಕರೆಗಳು ಬರುತ್ತಿವೆಯೆಂದು ಹುಯಿಲೆಬ್ಬಿಸತೊಡಗಿದ್ದಾರೆ. ಇಂತಹ ನಾಟಕಗಳು ಈ ಹಿಂದಿನಿಂದಲೂ ನಡೆದುಬರುತ್ತಿರುವುದರಿಂದ ಸಂಘಿಗಳ ಚೇಷ್ಟೆಗೆ ಯಾರೂ ಗಮನಕೊಡದಿರುವುದನ್ನು ಕಂಡ ಅವುಗಳು ಭಾರತದ ಜನಕ್ಕೆ ಮನದಟ್ಟಾಗುವವರೆಗೂ ಹೇಳಲು ತಯಾರಾಗಿವೆಯಂತಲ್ಲಾ, ಥೂತ್ತೇರಿ.

*****

ರಾಜ್ಯದಲ್ಲಿ ಪಂಚರತ್ನ ಯಾತ್ರೆ, ಸಂಕಲ್ಪಯಾತ್ರೆ, ಬಿಜೆಪಿಗಳ ಪರಿಷೆ ನಡೆಯುತ್ತಿರುವಾಗ ಒಂದು ಜೀವ ಅತೃಪ್ತಿ, ಅಶಾಂತಿ, ಹಿಂಸೆ ಮತ್ತು ಅಸಹನೆಯಿಂದ ಕ್ರೋಧಗೊಂಡಿದೆಯಲ್ಲಾ. ಆ ಆಸಾಮಿಯ ಬಯಕೆ ಈಡೇರಿದ್ದೇ ಆದರೆ ಕರ್ನಾಟಕವನ್ನ ಕಿತ್ತು ತಿನ್ನುತ್ತಿರುವ ಸಮಸ್ಯೆಗಳೆಲ್ಲಾ ಜಾದೂ ಮಾಡಿದಂತೆ ಮಾಯವಾಗಲಿವೆಯಂತಲ್ಲಾ. ಈ ಆಸಾಮಿಯ ಬಯಕೆ ಈಡೇರಿಸುವ ಶಕ್ತಿಯಿರುವುದು ಬಸವರಾಜ ಬೊಮ್ಮಾಯಿಗೆ ಮಾತ್ರ. ಈ ಸಮಸ್ಯೆಗೆ ತುತ್ತಾದ ವ್ಯಕ್ತಿ ಈಶ್ವರಪ್ಪ. ಈ ಬಗ್ಗೆ ಅವರನ್ನೇ ಕೇಳಲೆಂದು ಫೋನ್ ಮಾಡಲಾಗಿ ರಿಂಗಾಯ್ತು. ರಿಂಗ್ ಟೋನ್ “ನಮಸ್ತೆ ಸಧಾ ವತ್ಸಲೇ ಮಾತೃ ಭೂಮಿ”.

“ಹಲೋ ಯಾರ್ರಿ?”

“ನಾನು ಸಾರ್ ಯಾಹೂ.”

“ಎಲ್ರಿ ಕಾಣ್ತನೆಯಿಲ್ಲಾ ನೀವು?”

“ಯಾತ್ರೆ, ಜಾತ್ರೆ, ಪರಿಷೆ ತಿರಗದೆ ಆಗಿದೆ ಸಾರ್ ಪುರಸತ್ತೆಯಿಲ್ಲ.”

“ಪುರಸತ್ತು ಮಾಡಿಕಂಡು ಬರಬೇಕಪ್ಪ, ಪತ್ರಕರ್ತರನ್ನ ನಾವು ಹ್ಯಂಗೆ ನೋಡಿಕಂಡಿದ್ದಿವಿ, ಸೈಟ್ ಕೊಟ್ಟಿದ್ದಿವಿ, ಮನೆಕೊಟ್ಟಿದ್ದಿವಿ, ಕೈಗೆ ದುಡ್ಡನ್ನೂ ಕೊಟ್ಟಿದ್ದಿವಿ. ಬಂಗ್ಲೆಲಿ ಆರಾಮವಾಗಿ ಇದ್ದುಬುಡೊದಲ್ಲ. ಬಂದು ನಮ್ಮ ಕಷ್ಟನೂ ಕೇಳಬೇಕು.”

“ಸಾರಿ ಸರ್, ಪತ್ರಕರ್ತರಿಂದ ಕೃತಜ್ಞತೆ ನಿರೀಕ್ಷೆ ಮಾಡಬೇಡ್ರಿ. ನೀವು ನಿಮ್ಮ ಕೆಲಸ ಮಾಡಿದ್ರೆ, ನಾವು ನಮ್ಮ ಕೆಲಸ ಮಾಡಿದೊ. ಕಾಲ ಹತ್ರ ಬರ್ತಾಯಿದೆ. ಮುಂದೆ ಯಾವ ಸರಕಾರ ಬರುತ್ತೊ ಏನೊ..”

“ಅದ್ಕೆ ಕಂಡ್ರಿ, ಕಡೇ ಅವಧಿಲಾರ ಮಂತ್ರಿಯಾಗನ ಅಂತ ಹೋರಾಡ್ತಯಿದ್ದಿನಿ, ಗೊತ್ತ?”

“ಸಾರ್ ನೀವು ಹೋರಾಡಬೇಕಾಗಿದ್ದುದ್ದು ಮಂತ್ರಿ ಪದವಿಗಲ್ಲ. ಶರಾವತಿ ಸಂತ್ರಸ್ತರ ಬಗ್ಗೆ, ಅಡಕೆ ತೋಟಕ್ಕೆ ಹಳದಿ ರೋಗ ಬಂದು ಅಟಗಾಯಿಸಿಗಂಡಿರದಕ್ಕೆ, ಮತ್ತೆ ವಿ.ಐ.ಎಸ್.ಎಲ್ ಮುಚ್ಚತಾಯಿರಕ್ಕೆ, ಹಿಂಗೆ ಜನರ ಬದುಕು ನಾಶವಾಗ್ತಯಿರದರ ವಿರುದ್ಧ ಹೋರಾಡಬೇಕು ಸಾರ್.”

“ಮಂತ್ರಿಯಾದ ಮೇಲೆ ಚೆನ್ನಾಗೆ ಹೋರಾಡಬಹುದಲ್ರೀ? ಅಧಿಕಾರನೂ ಇರತ್ತೆ, ಜನಗಳೂ ಮಾತ್ ಕೇಳ್ತರೆ.”

“ಯಲಕ್ಷನ್ ಕೆಲವೇ ತಿಂಗಳದೆ ಸಾರ್.”

“ಮೂರೆ ದಿನ ಇರ್ಲಿ ಕಂಡ್ರೀ, ಮತ್ತೆ ಮಂತ್ರಿಯಾದ್ರೆ ಕಳಂಕ ಯಲ್ಲ ಹೋಗಿ ನಾನು ನಿರ್ದೋಷಿ ಅಂತ ಸಾಬೀತಾಯ್ತದೆ.”

“ಯಾವ ವಿಷಯದಲ್ಲೀ?”

“ಗುತ್ತಿಗೆದಾರ ಸಂತೋಷನಿಂದ ನಲವತ್ತು ಪರಸೆಂಟು ಕಮಿಷನ್ ತಂಗಂಡೆ ಅನ್ನೋ ವಿಷಯದಲ್ಲಿ.”

“ನಿರ್ದೋಷಿ ಸರಿ, ಆದರೆ ಸಂತೋಷ ಆತ್ಮಹತ್ಯೆ ಮಾಡಿಕೊಂಡವರೆ ಸಾರ್.”

“ತನಿಖೆಲಿ ನಾನು ನಿರ್ದೋಷಿ ಅಂತ ಆಯ್ತಲ್ರೀ?”

ಇದನ್ನೂ ಓದಿ: ಕೆಲವೇ ದಿನಗಳಲ್ಲಿ ಆಡು ಕುರಿ ಕರ ಕಾಣೆಯಾಗುತ್ತವಲ್ಲಾ!

“ಸಾರ್ ನಿಮ್ಮದೇ ಸರಕಾರ, ನೀವೇ ಮಂತ್ರಿ. ತನಿಖೆ ಮಾಡೋರು ಹ್ಯಂಗೆ ಮಾಡಿರಬಹುದು ಹೇಳಿ? ಹಂಗಂತ ನಿಮ್ಮವರೆ ಮಾತಾಡಿಕೊಳ್ತಾ ಅವುರೆ.”

“ಅವುರ್ಯಾರು ಅಂತ ನನಿಗ್ಗೊತ್ತು. ಅವುರ ಮಾತ ಕೇಳಕ್ಕೋಗಬ್ಯಾಡಿ. ನನ್ನ ಮ್ಯಾಲೆ ದೂರಿತ್ತು, ಅದು ನಿವಾರಣೆ ಆಯ್ತು. ಈಗ ಮಂತ್ರಿಯಾಗಬೇಕು, ಆಗಲಿಲ್ಲ ಕಳಂಕ ಅಂಗೇ ಉಳಿತದೆ”

“ನೀವು ಒಂದು ಕ್ಯಲಸ ಮಾಡಬಹುದು ಸಾರ್.”

“ಅದೇನೇಳ್ರಿ?”

“ಬೊಮ್ಮಾಯಿ ಅಳ್ಳಾಡಸೊ ಅಂತ ಯಾವುದಾದ್ರು ಗುಟ್ಟಿದ್ರೆ ಅದ ಪತ್ತೆ ಮಾಡಿ ಹಿಡಕಳಿ.”

“ಬೊಮ್ಮಾಯಿದೇನಾದ್ರು ಅಕ್ರಮ ಇದ್ರೆ, ಕೊಲೆ ಕೇಸಿದ್ರೆ, ಅಕ್ರಮ ಸಂಬಂಧ ಇದ್ರೆ ಪತ್ತೆ ಹಚ್ಚಿ ಸಾಕ್ಷಿ ಸಮೇತ ಅವರ ಮುಖಕ್ಕೆ ಹಿಡಿರಿ. ಮರುದಿನವೇ ನೀವು ವಿಧಾನಸೌಧದ ಎದುರು ಮಂತ್ರಿಯಾಗಿ ಪ್ರಮಾಣ ವಚನ ತಗೊಳ್ತೀರಿ.”

“ಬೊಮ್ಮಾಯಿ ವಿಷಯದಲ್ಲಿ ಅಂತವ್ಯಾವೂ ಇಲ್ಲ ಕಂಡ್ರಿ.”

“ಹೋಗ್ಲಿ ರೇಣುಕಾಚಾರಿ ಕೇಳಿ, ಏನಾದ್ರೂ ಹೇಳ್ತರೆ.”

“ಅವುನ್ಯಾಕೆ ಕೇಳಲಿ?”

“ಆತ ಎಡೂರಪ್ಪನ ಇದೇತರ ಹೆದರಿಸಿ ಮಂತ್ರಿಯಾದದ್ದು. ನಿಮಗೂ ಗೊತ್ತಲವೇನ್ರಿ?”

“ಹೌದು ಗೊತ್ತು. ಬೊಮ್ಮಾಯಿನ ಅಂಗೆ ಹೆದರಸಕ್ಕಾಗಲ್ಲ. ಆತ ಅಂತಹ ಯಾವ ತಪ್ಪನ್ನು ಮಾಡಿರಲಾರ.”

“ಸಿದ್ದರಾಮಯ್ಯರಿಂದ ಬೊಮ್ಮಾಯಿಗೇಳಸಕ್ಕಾಗಲವ.”

“ಹೇಳಸಬಹುದಿತ್ತು, ಆದ್ರೆ ಈಚೆಗೆ ಸಿದ್ದರಾಮಯ್ಯ ನನ್ನ ಹೆಣಾನೂ ಬಿಜೆಪಿಗೆ ಹೋಗಲ್ಲ ಅಂದಿದ್ಕೆ, ಸಿದ್ದರಾಮಯ್ಯನ ಹೆಣನ ನಾಯಿನೂ ತಿನ್ನಲ್ಲ ಅಂದುಬುಟ್ಟೆ ಕಂಡ್ರಿ.”

“ಓ ಅದಕೆ ಏನು ಸಾರ್? ಅದಕ್ಕೆ ಪ್ರತಿಯಾಗಿ ಅವುರ ಕಡೆಯ ಕೆಲವು ಕಿಡಿಗೇಡಿಗಳು ಹಂದಿನೂ ತಿನ್ನಲ್ಲ ನಿಮಿಗೇ ಹೇಳತಾ ಅವುರೆ.”

“ಹೇಳ್‌ಕಳ್ಳಿ ಬುಡ್ರಿ ಹಂದಿ ಹ್ಯಣ ತಿಂತವ?”

“ಐದು ನಿಮಿಷಕ್ಕೆ ತಿನ್ನಕತ್ತವೆ, ಅದರಲ್ಲೂ ಕಾಡಂದಿ ರಾಜಕಾರಣಿಗಳ ಹ್ಯಣನ ಹುಡಿಕ್ಕಂಡು ತಿರುಗ್ತವೆ.”

“ಹೋಗ್ಲಿ ಬಿಡ್ರಿ, ನಾನು ಮಂತ್ರಿಯಾಗಕ್ಕೆ ಒಂದು ಪ್ಲಾನೇಳಿ.”

“ಎಡೂರಪ್ಪನ ಕಾಲಿಗೆ ಬೀಳಕ್ಕಾಗಲ್ಲವಾ?”

“ಆಗಲ್ಲ.”

“ವಿಧಾನಸೌಧದ ಎದಿರೀಗೆ ಬಿದ್ದಿದ್ರಿ?”

“ಅದಾ? ಕಾಲ. ಈಗ ಬಿದ್ರು ಪ್ರಯೋಜನಯಿಲ್ಲ. ಬೊಮ್ಮಾಯಿ ಕಡೆ ಕೈ ತೋರತಾರೆ.”

“ಕುಮಾರಸ್ವಾಮಿಯಿಂದ ಹೇಳಿಸಿದರಾಗಲ್ಲವೆ?”

“ಹೇಳಸಬಹುದು, ಈಗ್ಯಾಕೆ ಬಿಡಿ ಈಶ್ವರಪ್ಪ, ಮುಂದೆ ನನ್ನದೇ ಸರಕಾರ ಬರುತ್ತೆ, ಆಗ ನನ್ನ ಸಂಪುಟದಲ್ಲೇ ಪಿ.ಡಬ್ಳು.ಡಿ ಮಂತ್ರಿಯಾಗಿ ಅಂದುಬುಡ್ತಾರೆ.”

“ಪಿ.ಡಬ್ಳು.ಡಿ ಖಾತೆಯ ರೇವಣ್ಣನಿಂದ ಕಿತಗಳಕ್ಕೆ ಯಾರಿಂದ್ಲೂ ಆಗಲ್ಲ ಸಾರ್. ನಿಂಬೆ ಹಣ್ಣಲ್ಲೆ ಹ್ವಡಿತರೆ.”

“ಅದೇನೊ, ಅವುರು ಮನೆ, ಅವುರ ಪಾರ್ಟಿ ನಮಗ್ಯಾಕೆ. ನಾನು ಮಂತ್ರಿಯಾಗೊ ಪ್ಲಾನೇಳಿ.”

“ಸಾರ್, ನಿಜಕ್ಕೂ ಅಸಾಧ್ಯವಾದದ್ದು ಯಾವುದೂ ಇಲ್ಲ ಸಾರ್, ಶಿವಮೊಗ್ಗದಲ್ಲಿ 144 ಸೆಕ್ಷನ್ ಹಾಕಿದ್ದಾಗ್ಲೂ ಮೆರವಣಿಗೆ ತಗದು ಎಸ್ಪಿ, ಡಿಸಿ ಮತ್ತೆ ಜಿಲ್ಲಾ ಆಡಳಿತನೆ ಮುಸ್ಲಿಂ ಕೇರಿಗೆ ನುಗ್ಗಿಸಿ ದೊಂಬಿ ಮಾಡಿಸಿದ್ರಿ, ಆಗ ಪಿಎಫ್‌ಐ ಜನ ಪರಾರಿಯಾದ್ರು. ಅಲ್ಲೆ ಇದ್ದ ಸಾಮಾನ್ಯರು ಮೆಗ್ಗಾನ್ ಆಸುಪತ್ರೆಗೆ ಅಡ್ಮಿಟ್ ಆದ್ರು, ಇಡೀ ಶಿವಮೊಗ್ಗನೆ ನಡುಗಿಸಿದ್ರಿ. ಅಂತಹ ಈಶ್ವರಪ್ಪನಿಗೆ ಜುಜುಬಿ ಒಂದು ಮಂತ್ರಿ ಖಾತೆ ಪಡಿಯಕ್ಕಾಗಲ್ಲವ ಸಾರ್. ಈಗ್ಲು ಒಂದು ಅವಾಜ್ ಹಾಕಿ, ಶಿವಮೊಗ್ಗದ ಜನಗಳೆ ಸೇರಿ, ಶಿವಮೊಗ್ಗ ತಣ್ಣಗಿರಬೇಕಾದ್ರೆ ಮೊದ್ಲು ಈಶ್ವರಪ್ಪನ್ನ ಮಂತ್ರಿ ಮಾಡಿಬಿಡಿ ಅಂತಾರೆ. ಆಗ ವಿಧಾನಸೌಧದ ಎದುರು ನೀವೊಬ್ಬರೆ ಮಂತ್ರಿಯಾಗಿ ಪ್ರಮಾಣ ವಚನ ತಗೋಳ್ತಿರಿ. ಲೇಟ್ ಮಾಡಬೇಡಿ”

“ಸರಕಾರ ನಡಸೋರೆ ತಿಳಕಬೇಕು ಕಂಡ್ರಿ. ನಲವತ್ತು ಪರಸೆಂಟ್ ವಿಷಯನ ಇಡೀ ಸರಕಾರ ಹೊರಬೇಕು. ಏನೊ ನಾನೊಬ್ನೆ ಪರಸೆಂಟೇಜ್ ತಗೊಂಡನೆ? ದೂರು ಹೊತ್ತಗಂಡೋನು ನಾನೊಬ್ಬನೆ ಕಂಡ್ರಿ. ಈಗ ಸಮಸ್ಯೆನ ಸರಕಾರವೇ ಪರಿಹಾರ ಮಾಡಬೇಕು.”

“ಥೂತ್ತೇರಿ”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...