Homeಮುಖಪುಟಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದಿದ್ದ ಹಿಂದುತ್ವ ಮುಖಂಡ ಅರೆಸ್ಟ್

- Advertisement -
- Advertisement -

ಗೋಡ್ಸೆ ಗಾಂಧಿಯನ್ನು ಕೊಂದಂತೆ ನಾನು ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ ಎಂದು ನಾಲಿಗೆ ಹರಿಬಿಟ್ಟಿದ್ದ ಹಿಂದುತ್ವ ಸಂಘಟನೆಯ, ರಾಷ್ಟ್ರೀಯ ದಲಿತ ಸೇನೆಯ ಸಂಸ್ಥಾಪಕ ತೆಲಂಗಾಣದ ಹಮಾರಾ ಪ್ರಸಾದ್‌ನನ್ನು ಬಂಧಿಸಲಾಗಿದೆ. ಹಮಾರಾ ಪ್ರಸಾದ್, ಡಾ ಬಿಆರ್ ಅಂಬೇಡ್ಕರ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿರುವ ವೀಡಿಯೊವನ್ನು ಹರಿಬಿಟ್ಟಿದ್ದನು.

ಹೈದರಾಬಾದ್ ಪೊಲೀಸರು ಶುಕ್ರವಾರ ಹಮಾರಾ ಪ್ರಸಾದ್‌ನನ್ನು ಬಂಧಿಸಿ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು 505 (2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಹೈದರಾಬಾದ್ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು, ”ಡಾ ಬಿಆರ್ ಅಂಬೇಡ್ಕರ್ ಅವರನ್ನು ನಿಂದನೆ ಮಾಡಿರುವ ವಿಡಿಯೋ ರೆಕಾರ್ಡ ಮಾಡಿಕೊಂಡು ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ವೀಡಿಯೊಗಳನ್ನು ಫಾರ್ವರ್ಡ್ ಮಾಡಿದ ಹಮಾರಾ ಪ್ರಸಾದ್‌ರನ್ನು ಇಂದು ಬಂಧಿಸಿದ್ದೇವೆ. ಅವರ ವಿರುದ್ಧ 256/2023 ಯು/ಎಸ್ 153 ಎ, 505 (2) ಐಪಿಸಿ ಎಫ್‌ಐಆರ್ ದಾಖಲಿಸಿದ್ದೇವೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಅಂಬೇಡ್ಕರ್‌ರನ್ನು ಗುಂಡಿಟ್ಟು ಕೊಲ್ಲುತ್ತಿದ್ದೆ’: ನಾಲಿಗೆ ಹರಿಬಿಟ್ಟ ಹಿಂದುತ್ವ ನಾಯಕ; ಕ್ರಮಕ್ಕೆ BSP ನಾಯಕರ ಆಗ್ರಹ

ಹಮಾರಾ ಪ್ರಸಾದ್ ಆ ವಿಡಿಯೋದಲ್ಲಿ, ಡಾ. ಬಿಆರ್ ಅಂಬೇಡ್ಕರ್ ಅವರು ಬರೆದಿರುವ ‘ಹಿಂದೂಯಿಸಂನಲ್ಲಿ ಒಗಟುಗಳು’ ಎನ್ನುವ ಪುಸ್ತಕವನ್ನು ಹಿಡಿದು, “ಈ ಮನುಷ್ಯ (ಅಂಬೇಡ್ಕರ್) ಸ್ಪಷ್ಟವಾಗಿ 12 ಡಿಗ್ರಿ (ಮಾಸ್ಟರ್ಸ್) ಹೊಂದಿರುವ ಬುದ್ಧಿಜೀವಿಯಾಗಿದ್ದಾರೆ. ರಾಷ್ಟ್ರನಾಯಕನಾದವನು ದೇಶದ ಎಲ್ಲ ಜನರನ್ನು ಸಮಾನವಾಗಿ ಕಾಣಬೇಕು. ಅವನು ಕಷ್ಟ ಅನುಭವಿಸಿದರೂ ಇತರರ ಮೇಲೆ ತನ್ನ ದ್ವೇಷವನ್ನು ತೋರಿಸಬಾರದು. ಅಂಬೇಡ್ಕರ್ ಅವರು ಈ ರೀತಿಯ ಕಸ ಬರೆಯುವ ಮೂಲಕ ಕೋಟ್ಯಂತರ ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಹಮಾರಾ ಪ್ರಸಾದ್ ಹೇಳಿದ್ದಾರೆ. ಅಷ್ಟೇ ಅಲ್ಲದೇ ಮುಂದುವರೆದು, ”ನಾನು ಅಂಬೇಡ್ಕರ್ ಬದುಕಿದ್ದಾಗ ಹುಟ್ಟಿದ್ದರೆ, ಈ ಪುಸ್ತಕ ನನ್ನ ಕಣ್ಣಿಗೆ ಬಿದ್ದಿದ್ದರೆ, ಗೋಡ್ಸೆ ಗಾಂಧಿಗೆ ಹೇಗೆ ಗುಂಡು ಹಾರಿಸಿದನೋ ಅದೇ ರೀತಿ ನಾನು ಅಂಬೇಡ್ಕರ್‌ಗೆ ಗುಂಡು ಹಾರಿಸುತ್ತಿದ್ದೆ” ಎಂದು ನಾಲಿಗೆ ಹರಿಬಿಟ್ಟಿದ್ದನು.

ಈ ವಿಚಾರವಾಗಿ ಹಮಾರಾ ಪ್ರಸಾದ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಮತ್ತು ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಬಹುಜನ ಸಮಾಜ ಪಕ್ಷದ ತೆಲಂಗಾಣ ಮುಖ್ಯಸ್ಥ ಆರ್‌.ಎಸ್ ಪ್ರವೀಣ್ ಕುಮಾರ್ ಆಗ್ರಹಿಸಿದ್ದರು.

ವಿಡಿಯೊ ಕ್ಲಿಪ್ಪಿಂಗ್ ಶೇರ್ ಮಾಡಿದ್ದ ಆರ್‌.ಎಸ್. ಪ್ರವೀಣ್ ಕುಮಾರ್ ಅವರು, ಬಿಆರ್ ಎಸ್ ಪಕ್ಷವನ್ನು ಟ್ಯಾಗ್ ಮಾಡಿ, ಈ ‘ಈಡಿಯಟ್’ ವಿರುದ್ಧ 153 ಎ (ಧರ್ಮ, ಜನಾಂಗ, ಜನ್ಮಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸೌಹಾರ್ದತೆ ಕಾಪಾಡಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಅಡಿಯಲ್ಲಿ ಸರ್ಕಾರ ಏಕೆ ಪ್ರಕರಣ ದಾಖಲಿಸಿಲ್ಲ ಎಂದು ಕೇಳಿದ್ದರು. ಪ್ರಿವೆಂಟಿವ್ ಡಿಟೆನ್ಶನ್ ಆಕ್ಟ್‌ನ ಅಡಿಯಲ್ಲಿ ಅವನನ್ನು ಜೈಲಿನಲ್ಲಿಡಿ ಎಂದು ಪ್ರವೀಣ್ ಕುಮಾರ್ ತಮ್ಮ ಆಕ್ರೋಶ ಹೊರಹಾಕಿದ್ದರು.

”ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ನಿಂದಿಸುವ ಮತ್ತು ಪರಿಶಿಷ್ಟ ಜಾತಿಯ ನಾಗರಿಕರ ಭಾವನೆಗಳಿಗೆ ನೋವುಂಟು ಮಾಡುವ ವೀಡಿಯೊಗಳನ್ನು ಮಾಡಿ ಮತ್ತು ಫಾರ್ವರ್ಡ್ ಮಾಡಿದ್ದಾರೆ” ಎಂದು ದಲಿತಪರ ಹೋರಾಟಗಾರ ಕಾರ್ತಿಕ್ ನವಯನ್ ಅವರು ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರಿಗೆ ಆನ್‌ಲೈನ್ ದೂರು ದಾಖಲಿಸಿದ್ದರು.

ಆದರೆ, ಹೈದರಾಬಾದ್ ಸೈಬರ್ ಕ್ರೈಮ್ ಪೊಲೀಸರು, ಹಮಾರಾ ಪ್ರಸಾದ್ ವಿರುದ್ಧ ಇನ್ನೂ ಯಾವುದೇ ದೂರುಗಳು ಬಂದಿಲ್ಲ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ದರು. ಇದಕ್ಕೆ ದಲಿತಪರ ಸಂಘಟನೆಗಳು ಮತ್ತು ಪ್ರಜ್ಞಾವಂತ ಜನರು, ತೆಲಂಗಾಣ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕೂಡಲೇ ಹಮಾರಾ ಪ್ರಸಾದ್‌ನನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...