Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಸತ್ತಿನ ಚಳಿಗಾಲದ ಅಧಿವೇಶನ : ಎಸ್‌ಐಆರ್ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್

ಸೋಮವಾರ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನವೇ, ದೇಶದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ತುರ್ತು ಚರ್ಚೆ ನಡೆಸಬೇಕೆಂದು ಕೋರಿ ಕಾಂಗ್ರೆಸ್ ನಿಲುವಳಿ ಸೂಚನೆ...

ತಮಿಳುನಾಡಿನಲ್ಲಿ ಎರಡು ಬಸ್ಸುಗಳು ಡಿಕ್ಕಿ:10ಕ್ಕೂ ಹೆಚ್ಚು ಜನರ ಸಾವು, 20 ಜನರಿಗೆ ಗಂಭೀರ ಗಾಯಗಳಾಗಿವೆ

ಚೆನ್ನೈ: ಶಿವಗಂಗಾ ಜಿಲ್ಲೆಯ ಕುಮ್ಮಂಗುಡಿ ಬಳಿ ಭಾನುವಾರ ಸಂಜೆ ಎರಡು ತಮಿಳುನಾಡು ಸರ್ಕಾರಿ ಬಸ್‌ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿ, 20 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು...

ನಾಳೆಯಿಂದ ಸಂಸತ್ ಚಳಿಗಾಲದ ಅಧಿವೇಶನ | ಸುಗಮ ಕಲಾಪಕ್ಕೆ ಸಹಕಾರ ಕೋರಿದ ಆಡಳಿತ : ಎಸ್‌ಐಆರ್ ಚರ್ಚೆ ಮುಂದಿಟ್ಟ ಪ್ರತಿಪಕ್ಷಗಳು

ನಾಳೆಯಿಂದ (ಡಿಸೆಂಬರ್ 1) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭಗೊಳ್ಳಲಿದೆ. ಅದಕ್ಕೂ ಮುನ್ನ ಇಂದು (ನವೆಂಬರ್ 30) ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ನೇತೃತ್ವದಲ್ಲಿ ಸರ್ವಪಕ್ಷಗಳ ಸಭೆ ನಡೆದಿದೆ. ಸಭೆಯಲ್ಲಿ ಸುಗಮ...

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿವೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.  ನವೆಂಬರ್ 30ರಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು...

ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಯುವಕ: ಮನನೊಂದು 22 ವರ್ಷದ ಯುವತಿ ಆತ್ಮಹತ್ಯೆ 

ಮದುವೆಯಾಗುವುದಾಗಿ ನಂಬಿಸಿದ್ದ ಯುವಕ, ಯುವತಿಗೆ ಮಾನಸಿಕ-ದೈಹಿಕ ಹಲ್ಲೆ ನಡೆಸಿದ್ದು, ಆತನ ಲೈಂಗಿಕ ಕಿರುಕುಳಕ್ಕೆ ಬೇಸತ್ತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಇಂಜಿನಿಯರಿಂಗ್ ಪದವೀಧರೆ...

ಮಹಾರಾಷ್ಟ್ರ : ಪ್ರಮುಖ ನಾಯಕ ಅನಂತ್ ಸೇರಿದಂತೆ 10 ಮಂದಿ ಮಾವೋವಾದಿಗಳು ಶರಣಾಗತಿ

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯಲ್ಲಿ ಶುಕ್ರವಾರ (ನ.28) ಪ್ರಮುಖ ಮಾವೋವಾದಿ ನಾಯಕ ವಿಕಾಸ್ ನಾಗಪುರೆ ಅಲಿಯಾಸ್ ನವಜ್ಯೋತ್ ಅಲಿಯಾಸ್ ಅನಂತ್ ಮತ್ತು ಇತರ 10 ಮಂದಿ ಪೊಲೀಸರ ಮುಂದೆ ಶರಣಾಗಿದ್ದಾರೆ. ಅನಂತ್ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ...

ಎಸ್‌ಐಆರ್ : 12 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಗಡುವು ವಿಸ್ತರಿಸಿದ ಚು. ಆಯೋಗ

ಒಂಬತ್ತು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌)ಯಲ್ಲಿ ಮತದಾರರು ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವನ್ನು ಡಿಸೆಂಬರ್ 4 ರಿಂದ 11ಕ್ಕೆ ಚುನಾವಣಾ ಆಯೋಗ...

ಗೆಳತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ವಿವಾಹ: 18ವರ್ಷದ ಪದವಿಪೂರ್ವ ವಿದ್ಯಾರ್ಥಿ ಆತ್ಮಹತ್ಯೆ

ತನ್ನ ಗೆಳತಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾದ ಕಾರಣ ನವೆಂಬರ್ 29, ಶನಿವಾರ ಹೈದರಾಬಾದ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಘಟನೆ ಸುರರಾಮ್ ಪೊಲೀಸ್ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು 18 ವರ್ಷದ ಅಭಿಲಾಷ್ ಎಂದು...

ಅರ್ಫಾಝ್‌ನ ಮನೆ ಕೆಡವಿದ ಆಡಳಿತ : ತನ್ನ ಜಾಗ ಉಡುಗೊರೆಯಾಗಿ ಕೊಟ್ಟ ಕುಲ್ದೀಪ್ ಶರ್ಮಾ

ಅರ್ಫಾಝ್ ಎಂಬ ಪತ್ರಕರ್ತನ ಮನೆಯನ್ನು ಆಡಳಿತ ಕೆಡವಿದಾಗ, ತನ್ನ ಜಾಗವನ್ನು ಉಡುಗೊರೆಯಾಗಿ ಕೊಟ್ಟ ಜಮ್ಮು ಕಾಶ್ಮೀರದ ಸಾಮಾಜಿಕ ಹೋರಾಟಗಾರ ಕುಲ್ದೀಪ್ ಶರ್ಮಾ ನಡೆಗೆ ದೇಶದಾದ್ಯಂತ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಜಮ್ಮುವಿನ ಜ್ಯುವೆಲ್ ಪ್ರದೇಶದ ನಿವಾಸಿ...

ತೆಲಂಗಾಣದಲ್ಲಿ ಭೀಕರ ಅಗ್ನಿ ಅವಘಡ, ಕೊಂಡಗಟ್ಟು ಪ್ರದೇಶದಲ್ಲಿ 20ಕ್ಕೂ ಹೆಚ್ಚು ಅಂಗಡಿಗಳು ಭಸ್ಮ

ಹೈದರಾಬಾದ್: ತೆಲಂಗಾಣದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಕೊಂಡಗಟ್ಟು ಪ್ರದೇಶದಲ್ಲಿ ಇಪ್ಪತ್ತಕ್ಕೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ. ಶನಿವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಕೊಂಡಗಟ್ಟು ಬೆಟ್ಟಗಳ ತಪ್ಪಲಿನಲ್ಲಿರುವ ಅಂಗಡಿಗಳ ಸಾಲಿಗೆ ಬೆಂಕಿ ವ್ಯಾಪಿಸಿದ್ದು, ತೀವ್ರ...