Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...