Homeಮುಖಪುಟಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

ಜೋಕುಗಳಿಗೆ ಸರ್ಕಾರ ಹೆದರಿತೆ?: ‘ಹಸು ಅಪ್ಪಿಕೋ ದಿನಾಚರಣೆ’ ರದ್ದು ಕುರಿತು ತರೂರ್‌ ವ್ಯಂಗ್ಯ

- Advertisement -
- Advertisement -

ಫೆಬ್ರವರಿ 14 ರಂದು ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ವನ್ನಾಗಿ ಆಚರಿಸಲು ಹೇಳಿದ್ದ ಭಾರತೀಯ ಪಶು ಕಲ್ಯಾಣ ಮಂಡಳಿಯು (AWBI) ಶುಕ್ರವಾರ ತನ್ನ ಮನವಿಯನ್ನು ಹಿಂತೆಗೆದುಕೊಂಡಿದೆ. ಇದೀಗ ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವಿಟರ್‌ನಲ್ಲಿ ಕೇಂದ್ರ ಸರ್ಕಾರವನ್ನು ಪದಗಳ ಮೂಲಕ ಲೇವಡಿ ಮಾಡಿದ್ದಾರೆ.

ಮೋದಿ ಸರ್ಕಾರವು ಬೆದರಿತೇ? ಅಥವಾ ಇದು ಸರ್ಕಾರದ ಪುಕ್ಕಲುತನವೇ ಎಂದು ತರೂರ್ ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಸೋಮವಾರ, ಭಾರತೀಯ ಪಶು ಕಲ್ಯಾಣ ಮಂಡಳಿಯು ಫೆಬ್ರವರಿ 14 ರಂದು ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿಯನ್ನು ಮಾಡಿತ್ತು. ಈ ಮನವಿಯನ್ನು ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಸರ್ಕಾರದ ಗೋವಿನ ಕಾರ್ಯಸೂಚಿಯ ಭಾಗವಾಗಿ ಇತ್ತೀಚಿನ ಕ್ರಮವೆಂದು ಪರಿಗಣಿಸಲಾಗಿದೆ. ಇದು ಪ್ರೇಮಿಗಳ ದಿನ ಎನ್ನುವ ಪಾಶ್ಚಾತ್ಯ ಸಂಸ್ಕೃತಿಯನ್ನು ವಿರೋಧಿಸಿ ಹಿಂದೂತ್ವವನ್ನು ಹೇರುವ ಬಗೆಯಂತೆ ಕಂಡುಬಂದಿದೆ.

ಮೋದಿ ಸರ್ಕಾರದ ನಡೆಯನ್ನು ಟ್ವೀಟ್ ಮಾಡಿರುವ ಶಶಿ ತರೂರ್, ”ಸರ್ಕಾರ ತನ್ನ ವಿರುದ್ಧ ಬಂದ ಜೋಕುಗಳಿಗೆ ಬೆದರಿತೇ (Cow-ed) ಅಥವಾ ಇದು ಕೇವಲ ಸರ್ಕಾರದ ಪುಕ್ಕಲುತನವೇ (Cow-ardice)? ನನ್ನ ಊಹೆಯ ಪ್ರಕಾರ ಮೂಲ ಮನವಿ ಒಂದು ಮಾತಿನ ಸೂಚನೆಯಾಗಿತ್ತು. ‘ಪ್ರೇಮಿಗಳ ದಿನಾಚರಣೆ: ಅವರು ಒಬ್ಬ ವ್ಯಕ್ತಿಯನ್ನು (Guy) ತಬ್ಬಿಕೊಳ್ಳಲಿ’ ಎಂದು ಆದರೆ ಕೊನೆಯ ಪದ Guy ಅನ್ನು ಹಿಂದಿ ರಾಷ್ಟ್ರವಾದಿಗಳು ಗಾಯ್ (ಹಿಂದಿಯಲ್ಲಿ ಹಸು) ಎಂದು ತಪ್ಪಾಗಿ ಕೇಳಿಸಿಕೊಂಡಿದ್ದಾರೆ” ಹೀಗೆ cow ಹಿಡಿದುಕೊಂಡು ತರೂರು ಸರ್ಕಾರವನ್ನು ಗೇಲಿ ಮಾಡಿದ್ದಾರೆ.

ಹಸು ಅಪ್ಪುಗೆಯ ದಿನವನ್ನು ಆಚರಿಸಲು ಮನವಿ ಮಾಡಿದ ಭಾರತೀಯ ಪಶು ಕಲ್ಯಾಣ ಮಂಡಳಿಯು, ಇದು ವೈಯಕ್ತಿಕ ಮತ್ತು ಸಾಮೂಹಿಕ ಸಂತೋಷವನ್ನು ತರುತ್ತದೆ ಎಂದು ಹೇಳಿತ್ತು. ಇತ್ತೀಚಿನ ವರ್ಷಗಳಲ್ಲಿ ಅದು ಗೋಮೂತ್ರವನ್ನು ಔಷಧವಾಗಿ ಪ್ರಚಾರ ಮಾಡುವುದರಿಂದ ಹಿಡಿದು ಹಸುವಿನ ಸಗಣಿಯಿಂದ ವಿಕಿರಣದ ವಿರುದ್ಧ ರಕ್ಷಣೆ ಪಡೆಯಬಹುದು ಎಂದು ಘೋಷಿಸುವವರೆ ಹಸುವಿನ ಉಪಯೋಗಗಳ ಪಟ್ಟಿ ಮಾಡಿತ್ತು.

ಇದನ್ನೂ ಓದಿ: ‘ಹಸು ಅಪ್ಪಿಕೊ ದಿನಾಚರಣೆ’ ರದ್ದು: ಪಶು ಕಲ್ಯಾಣ ಮಂಡಳಿ ಸ್ಪಷ್ಟನೆ

”ಗೋವಿನ ಅಗಾಧವಾದ ಪ್ರಯೋಜನವನ್ನು ದೃಷ್ಟಿಯಲ್ಲಿಟ್ಟುಕೊಂಡು, ಹಸುವನ್ನು ಅಪ್ಪಿಕೊಳ್ಳುವುದರಿಂದ ಭಾವನಾತ್ಮಕ ಶ್ರೀಮಂತಿಕೆ ಬರುತ್ತದೆ. ಆದ್ದರಿಂದ, ಎಲ್ಲಾ ಗೋ ಪ್ರೇಮಿಗಳು ಫೆಬ್ರವರಿ 14 ಅನ್ನು ಗೋವು ಹಗ್ ಡೇ ಎಂದು ಆಚರಿಸಬಹುದು ಮತ್ತು ತಾಯಿ ಹಸುವಿನ ಪ್ರಾಮುಖ್ಯತೆಯನ್ನು ಗಮನದಲ್ಲಿಟ್ಟುಕೊಂಡು ಜೀವನದಲ್ಲಿ ಸಂತೋಷ ಮತ್ತು ಸಕಾರಾತ್ಮಕ ಶಕ್ತಿಯನ್ನು ಪಡೆಯಬಹುದು” ಎಂದು ಇಲಾಖೆ ಹೇಳಿದೆ.

ಭಾರತೀಯ ಪಶು ಕಲ್ಯಾಣ ಮಂಡಳಿಯು ಕೇಂದ್ರ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಇಲಾಖೆಯ ಅಡಿಯಲ್ಲಿ ಶಾಸನಬದ್ಧ ಸಂಸ್ಥೆಯಾಗಿದೆ. ಪ್ರಾಣಿ ಕಲ್ಯಾಣಕ್ಕಾಗಿ ಕಾನೂನು ನಿಬಂಧನೆಗಳ ಸಲಹೆ ನೀಡುವುದು ಇದರ ಮುಖ್ಯ ಕಾರ್ಯವಾಗಿದೆ.

ಹಿಂದೂ ಬಲಪಂಥೀಯರು ಈ ಗೋಸಂರಕ್ಷಣೆಯನ್ನು ಭಾರತೀಯ ಸಂಸ್ಕೃತಿಗೆ ಸಮಾನಾರ್ಥಕವೆಂದು ಶ್ಲಾಘಿಸಿದ್ದಾರೆ.  ಇದನ್ನು ನೀವು AWBIನ ಪತ್ರದಲ್ಲಿ ಕಾಣಬಹುದು, “ಪಾಶ್ಚಿಮಾತ್ಯ ನಾಗರಿಕತೆಯ ಬೆರಗು” ಅಡಿಯಲ್ಲಿ “ವೈದಿಕ ಸಂಪ್ರದಾಯಗಳು ಬಹುತೇಕ ಅಳಿವಿನ ಅಂಚಿನಲ್ಲಿವೆ” ಎಂದು ಪತ್ರದಲ್ಲಿ ಹೇಳಲಾಗಿದೆ. ಹೀಗೆ ಹಸುವಿನ ಹಗ್ ಡೇ, ಹಿಂದೂ ಬಲಪಂಥೀಯರಿಗೆ ಪ್ರಿಯವಾದ ಎರಡು ಸಮಸ್ಯೆಗಳನ್ನು ಒಟ್ಟುಗೂಡಿಸುತ್ತದೆ. ಒಂದು, ಹಸು. ಮತ್ತೊಂದು ಪಾಶ್ಚಿಮಾತ್ಯ ಅತಿಕ್ರಮಣವಾಗಿ ಕಾಣುವ ವ್ಯಾಲೆಂಟೈನ್ಸ್ ಡೇಗೆ ವಿರೋಧ ವ್ಯಕ್ತಪಡಿಸುವುದು.

ತರೂರ್ ತಮ್ಮ ಟ್ವೀಟ್‌ನಲ್ಲಿ ಸಲಿಂಗಕಾಮಕ್ಕೆ ಬಿಜೆಪಿಯ ವಿರೋಧವನ್ನು ಉಲ್ಲೇಖಿಸಿದ್ದಾರೆ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆಯನ್ನು ವಿರೋಧಿಸಿದೆ. ಬಿಜೆಪಿಯು ಸಲಿಂಗ ವಿವಾಹವನ್ನು “ಎಡ-ಉದಾರವಾದಿ” ಮತ್ತು “ಪಾಶ್ಚಿಮಾತ್ಯ” ಪರಿಕಲ್ಪನೆ ಎಂದು ಗುರುತಿಸಿದೆ.

AWBI ಯ ಕೌ ಹಗ್ ಡೇ ಮನವಿಯು ಸಾಮಾಜಿಕ ಮಾಧ್ಯಮದಲ್ಲಿ ಅಪಹಾಸ್ಯಕ್ಕೆ ಕಾರಣವಾಯಿತು. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಸಾಕಷ್ಟು ಹಾಸ್ಯಭರಿತ ಸಂದೇಶಗಳು ವಿಡಿಯೋಗಳು ಹರಿದಾಡಿದ ಬಳಿಕ AWBI ತನ್ನ ಹಿಂಪಡೆಯುವಿಕೆಯನ್ನು ಘೋಷಿಸಿತು. “ಸಕ್ಷಮ ಪ್ರಾಧಿಕಾರ ಮತ್ತು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯದ ನಿರ್ದೇಶನದಂತೆ 14 ಫೆಬ್ರವರಿ 2023 ರಂದು ಹಸುವಿನ ಹಗ್ ಡೇ ಆಚರಿಸಲು ಭಾರತೀಯ ಪ್ರಾಣಿ ಕಲ್ಯಾಣ ಮಂಡಳಿಯು ನೀಡಿದ ಮನವಿಯನ್ನು ಹಿಂತೆಗೆದುಕೊಳ್ಳಲಾಗಿದೆ” ಎಂದು ಹೇಳಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...