Homeಮುಖಪುಟಪಾಕಿಸ್ತಾನ: ಧರ್ಮನಿಂದನೆ ಆರೋಪದಲ್ಲಿ ಪೊಲೀಸ್ ಬಂಧನದಲ್ಲಿದ್ದ ವ್ಯಕ್ತಿಯ ಕೊಲೆ; ಠಾಣೆಗೆ ನುಗ್ಗಿ ಉದ್ರಿಕ್ತ ಗುಂಪಿನ ಅಟ್ಟಹಾಸ

ಪಾಕಿಸ್ತಾನ: ಧರ್ಮನಿಂದನೆ ಆರೋಪದಲ್ಲಿ ಪೊಲೀಸ್ ಬಂಧನದಲ್ಲಿದ್ದ ವ್ಯಕ್ತಿಯ ಕೊಲೆ; ಠಾಣೆಗೆ ನುಗ್ಗಿ ಉದ್ರಿಕ್ತ ಗುಂಪಿನ ಅಟ್ಟಹಾಸ

- Advertisement -
- Advertisement -

“ಪಾಕಿಸ್ತಾನದ ನಂಕಾನಾ ಸಾಹಿಬ್ ನಗರದಲ್ಲಿ ಧರ್ಮನಿಂದೆಯ ಆರೋಪದ ಮೇಲೆ ಬಂಧಿಸಲಾಗಿದ್ದ ವ್ಯಕ್ತಿಯನ್ನು ಉದ್ರಿಕ್ತ ಗುಂಪೊಂದು ಶನಿವಾರ ಪೊಲೀಸ್ ಠಾಣೆಗೆ ನುಗ್ಗಿ ಕೊಂದಿದೆ” ಎಂದು ಪಾಕಿಸ್ತಾನದ ‘ಡಾನ್’ ಮಾಧ್ಯಮ ವರದಿ ಮಾಡಿದೆ.

ಸಂತ್ರಸ್ತ ಮುಹಮ್ಮದ್ ವಾರಿಸ್, ಕುರಾನ್‌ನ ಕೆಲವು ಪುಟಗಳನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಉದ್ರಿಕ್ತ ಗುಂಪು ಶನಿವಾರ ವಾರಿಸ್‌ನನ್ನು ನೇಣಿಗೆ ಹಾಕಲು ಪ್ರಯತ್ನಿಸಿತ್ತು, ಆದರೆ ಪೊಲೀಸರು ಆತನನ್ನು ವಶಕ್ಕೆ ಪಡೆದುಕೊಂಡಿದ್ದರು.

ದೊಡ್ಡ ಗುಂಪೊಂದು ನಂಕಾನಾ ಸಾಹಿಬ್ ಪೊಲೀಸ್ ಠಾಣೆಯ ಗೇಟ್‌ಗಳನ್ನು ಒಡೆದು, ಆವರಣಕ್ಕೆ ನುಗ್ಗುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿದೆ.

“ಪೊಲೀಸರು ಅವರನ್ನು [ಜನಸಮೂಹ] ತಡೆಯಲು ಸಾಧ್ಯವಾಗಲಿಲ್ಲ. ಏಕೆಂದರೆ ಬೆರಳೆಣಿಕೆಯಷ್ಟು ಅಧಿಕಾರಿಗಳು ಪೊಲೀಸ್ ಠಾಣೆಯಲ್ಲಿ ಇದ್ದರು” ಎಂದು ಪೊಲೀಸ್ ವಕ್ತಾರ ಮುಹಮ್ಮದ್ ವಕಾಸ್ ರಾಯಿಟರ್ಸ್‌‌ಗೆ ತಿಳಿಸಿದ್ದಾರೆ.

ಆರೋಪಿಯನ್ನು ಸೆರೆಮನೆಯಿಂದ ಹೊರಗೆ ಎಳೆದೊಯ್ದು ಹೊಡೆದು ಕೊಲ್ಲಲಾಗಿದೆ. ದೇಹಕ್ಕೆ ಬೆಂಕಿ ಹಚ್ಚುವುದನ್ನು ತಡೆಯಲಷ್ಟೇ ಪೊಲೀಸ್ ಸಿಬ್ಬಂದಿಗೆ ಸಾಧ್ಯವಾಯಿತು ಎಂದು ವಕಾಸ್ ತಿಳಿಸಿದ್ದಾರೆ.

ಘಟನೆಯ ನಂತರ ಪಂಜಾಬ್ ಇನ್ಸ್‌ಪೆಕ್ಟರ್ ಜನರಲ್ ಡಾ ಉಸ್ಮಾನ್ ಅನ್ವರ್ ಅವರು ಸ್ಟೇಷನ್ ಹೌಸ್ ಆಫೀಸರ್ ಮತ್ತು ನಂಕಾನಾ ಸಾಹಿಬ್ ಸರ್ಕಲ್ ಡೆಪ್ಯುಟಿ ಸೂಪರಿಂಟೆಂಡೆಂಟ್ ಆಫ್ ಪೊಲೀಸ್ ನವಾಜ್ ವಾರಕ್ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ‘ಜಿಯೋ ನ್ಯೂಸ್’ ವರದಿ ಮಾಡಿದೆ.

ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘಟನೆಯನ್ನು ಟೀಕಿಸಿದ್ದು, ತನಿಖೆಗೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ.

ಈ ವರ್ಷದ ಆರಂಭದಲ್ಲಿ ಪಾಕಿಸ್ತಾನದ ಮಾನವ ಹಕ್ಕುಗಳ ಆಯೋಗವು ಬಿಡುಗಡೆ ಮಾಡಿದ ‘ಎ ಬ್ರೀಚ್ ಆಫ್ ಫೇಯ್ತ್: ಫ್ರೀಡಂ ಆಫ್ ರಿಲಿಜನ್ ಆರ್‌ ಬಿಲೀಫ್ ಇನ್ 2021-22’ ಎಂಬ ವರದಿಯು ದೇಶದಲ್ಲಿ ಧರ್ಮನಿಂದೆಯ ಪ್ರಕರಣಗಳ ಆತಂಕಕಾರಿ ಏರಿಕೆಯನ್ನು ಪ್ರಕಟಿಸಿತ್ತು.

2021ರ ಪೊಲೀಸ್ ಅಂಕಿಅಂಶಗಳು, ಈ ವರ್ಷದಲ್ಲಿ ಧರ್ಮನಿಂದೆಯ ಕಾನೂನಿನ ಅಡಿಯಲ್ಲಿ 585 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದಿವೆ. ಹೆಚ್ಚಿನ ಪ್ರಕರಣಗಳು ಪಂಜಾಬ್ ಪ್ರಾಂತ್ಯದಲ್ಲಿ ದಾಖಲಾಗಿವೆ ಎಂದು ವರದಿ ತಿಳಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...