Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

- Advertisement -
- Advertisement -

ಕಳೆದ ವಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು, ಪ್ರಧಾನಿಗೆ-ಅದಾನಿಗೆ ಏನು ಸಂಬಂಧ ಎಂದು ಪ್ರಶ್ನಿಸಿ ಮೋದಿಯವರ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಲೋಕಸಭೆ ಸೆಕ್ರೆಟರಿಯೇಟ್, ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್‌ಗೆ ಉತ್ತರ ನೀಡುವಂತೆ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಕೇಳಿದೆ ಎಂದು ಎನ್‌ಡಿಟಿವಿ ಭಾನುವಾರ ವರದಿ ಮಾಡಿದೆ.

ಬಿಜೆಪಿ ನಾಯಕರಾದ ಪ್ರಲ್ಹಾದ್ ಜೋಶಿ ಮತ್ತು ನಿಶಿಕಾಂತ್ ದುಬೆಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಬುಧವಾರದೊಳಗೆ ಉತ್ತರ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್‌ಗೆ ಇದೀಗ ಸೂಚಿಸಲಾಗಿದೆ.

ಫೆಬ್ರವರಿ 7ರಂದು ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ, ”ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಪರವಾಗಿದ್ದಾರೆ” ಎಂದು ಆರೋಪಿಸಿದರು. ಅವರು, ಸೆಪ್ಟೆಂಬರ್‌ನಿಂದ ಜನವರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವಾಗ ಸಾರ್ವಜನಿಕರು ಅದಾನಿ ಅವರ ಯಶಸ್ಸಿನ ಬಗ್ಗೆ ಮತ್ತು ಹಲವಾರು ಕ್ಷೇತ್ರಗಳಲ್ಲಿ ಅವರು ವ್ಯವಹಾರವನ್ನು ಹೇಗೆ ವಿಸ್ತರಿಸಲು ಸಾಧ್ಯವಾಯಿತು? ಎಂದು ಕೇಳಿದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಅದಾನಿಯವರ ವ್ಯವಹಾರವು ಈಗ ಎಂಟರಿಂದ ಹತ್ತು ವಲಯಗಳಲ್ಲಿದೆ ಮತ್ತು ಅವರ ನಿವ್ವಳ ಮೌಲ್ಯವು 2014 ಮತ್ತು 2022 ರ ನಡುವೆ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ತಲುಪಿದೆ. ಭಾರತದ ಪ್ರಧಾನ ಮಂತ್ರಿಯೊಂದಿಗೆ ಅವರ [ಅದಾನಿ] ಸಂಬಂಧ ಏನು ಎಂದು ಯುವಕರು ನಮ್ಮನ್ನು ಕೇಳಿದರು” ಎಂದು ಗಾಂಧಿ ಹೇಳಿದರು.

ಇದನ್ನೂ ಓದಿ: ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಈ ವೇಳೆ ರಾಹುಲ್ ಗಾಂಧಿ ಅವರು ಒಂದು ಚಿತ್ರವನ್ನು ಹೊರತಗೆದರು. ಅದು, ಖಾಸಗಿ ಜೆಟ್‌ನಲ್ಲಿ ಉದ್ಯಮಿ ಅದಾನಿ ಮತ್ತು ಪ್ರಧಾನ ಮಂತ್ರಿ ಕುಳಿತಿರುವ ಚಿತ್ರವಾಗಿತ್ತು. “ಹಾಗಾದರೆ ಈ ಸಂಬಂಧ ಏನು?” ಎಂದು ರಾಹುಲ್ ಕೇಳಿದರು.

ಮರುದಿನ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಪೀಕರ್‌ಗೆ ನಿಯಮಗಳ ಪ್ರಕಾರ ಯಾವುದೇ ಸಂಸದರು ಇನ್ನೊಬ್ಬರ ವಿರುದ್ಧ ಆರೋಪ ಮಾಡಲು ಬಯಸಿದರೆ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದರು. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಯಾವುದೇ ದಾಖಲೆ ಪುರಾವೆಗಳಿಲ್ಲದೆ ಮೋದಿಯವರ ಮೇಲೆ ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸುವ ಮೂಲಕ ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿ ಹದಿನೆಂಟು ಟೀಕೆಗಳನ್ನು ಮಾಡಿದ್ದರು ಅವೆಲ್ಲವೂ ಅದಾನಿಗೆ ಸಂಬಂಧಿಸಿವೆ.

ಸಂಸತ್ತಿನ ಬಜೆಟ್ ಅಧಿವೇಶನವು ಪದೇ ಪದೇ ಗದ್ದಲ ಗಲಾಟೆಗಳಿಂದಾಗಿ ಮುಂದೂಡಲಾಗುತ್ತಿದೆ. ಅದಾನಿ ಗ್ರೂಪ್‌ ಹಗರಣದ ಆರೋಪದ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ ಆದರೆ ಸರ್ಕಾರ ಮಾತ್ರ ತನಿಖೆ ಬಗ್ಗೆಒಂದು ಪದವನ್ನು ಮಾತನಾಡುತ್ತಿಲ್ಲ.

ಜನವರಿ 24 ರಂದು ಅಮೇರಿಕನ್ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಯು, ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ನೇತೃತ್ವದ ಸಂಘಟಿತ ಸಂಸ್ಥೆಯು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಂಚನೆ ಮಾಡಿದೆ ಎಂದು ಆರೋಪಿಸಿದೆ. ಈ ವರದಿ ಹೊರಬಂದ ಬಳಿಕ ಅದಾನಿ ಗ್ರೂಪ್ ಕಂಪನಿಗಳು ಸ್ಟಾಕ್ ಮಾರುಕಟ್ಟೆಗಳಲ್ಲಿ 100 ಶತಕೋಟಿಗಿಂತ ಹೆಚ್ಚಿನ ನಷ್ಟವನ್ನು ಅನುಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...