Homeಮುಖಪುಟಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

- Advertisement -
- Advertisement -

ಕಳೆದ ವಾರ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು, ಪ್ರಧಾನಿಗೆ-ಅದಾನಿಗೆ ಏನು ಸಂಬಂಧ ಎಂದು ಪ್ರಶ್ನಿಸಿ ಮೋದಿಯವರ ಬಗ್ಗೆ ಹೇಳಿಕೆ ನೀಡಿದ್ದರು. ಇದೀಗ ಲೋಕಸಭೆ ಸೆಕ್ರೆಟರಿಯೇಟ್, ವಿಶೇಷ ಹಕ್ಕು ಉಲ್ಲಂಘನೆಯ ನೋಟಿಸ್‌ಗೆ ಉತ್ತರ ನೀಡುವಂತೆ  ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಕೇಳಿದೆ ಎಂದು ಎನ್‌ಡಿಟಿವಿ ಭಾನುವಾರ ವರದಿ ಮಾಡಿದೆ.

ಬಿಜೆಪಿ ನಾಯಕರಾದ ಪ್ರಲ್ಹಾದ್ ಜೋಶಿ ಮತ್ತು ನಿಶಿಕಾಂತ್ ದುಬೆಅವರು ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಬುಧವಾರದೊಳಗೆ ಉತ್ತರ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್‌ಗೆ ಇದೀಗ ಸೂಚಿಸಲಾಗಿದೆ.

ಫೆಬ್ರವರಿ 7ರಂದು ಸಂಸತ್ತಿನಲ್ಲಿ ಮಾತನಾಡುತ್ತಿದ್ದಾಗ, ”ಪ್ರಧಾನಿ ನರೇಂದ್ರ ಮೋದಿ ಅವರು ಅದಾನಿ ಗ್ರೂಪ್ ಪರವಾಗಿದ್ದಾರೆ” ಎಂದು ಆರೋಪಿಸಿದರು. ಅವರು, ಸೆಪ್ಟೆಂಬರ್‌ನಿಂದ ಜನವರಿವರೆಗೆ ಭಾರತ್ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವಾಗ ಸಾರ್ವಜನಿಕರು ಅದಾನಿ ಅವರ ಯಶಸ್ಸಿನ ಬಗ್ಗೆ ಮತ್ತು ಹಲವಾರು ಕ್ಷೇತ್ರಗಳಲ್ಲಿ ಅವರು ವ್ಯವಹಾರವನ್ನು ಹೇಗೆ ವಿಸ್ತರಿಸಲು ಸಾಧ್ಯವಾಯಿತು? ಎಂದು ಕೇಳಿದರು ಎಂದು ಕಾಂಗ್ರೆಸ್ ನಾಯಕ ಹೇಳಿದ್ದಾರೆ.

“ಅದಾನಿಯವರ ವ್ಯವಹಾರವು ಈಗ ಎಂಟರಿಂದ ಹತ್ತು ವಲಯಗಳಲ್ಲಿದೆ ಮತ್ತು ಅವರ ನಿವ್ವಳ ಮೌಲ್ಯವು 2014 ಮತ್ತು 2022 ರ ನಡುವೆ 8 ಶತಕೋಟಿಯಿಂದ 140 ಶತಕೋಟಿಗೆ ಹೇಗೆ ತಲುಪಿದೆ. ಭಾರತದ ಪ್ರಧಾನ ಮಂತ್ರಿಯೊಂದಿಗೆ ಅವರ [ಅದಾನಿ] ಸಂಬಂಧ ಏನು ಎಂದು ಯುವಕರು ನಮ್ಮನ್ನು ಕೇಳಿದರು” ಎಂದು ಗಾಂಧಿ ಹೇಳಿದರು.

ಇದನ್ನೂ ಓದಿ: ಅದಾನಿಗೂ ಪ್ರಧಾನಿ ಮೋದಿಗೂ ಇರುವ ಸಂಬಂಧವೇನು? ಸಂಸತ್ತಿನಲ್ಲಿ ರಾಹುಲ್ ಗಾಂಧಿ ಪ್ರಶ್ನೆ

ಈ ವೇಳೆ ರಾಹುಲ್ ಗಾಂಧಿ ಅವರು ಒಂದು ಚಿತ್ರವನ್ನು ಹೊರತಗೆದರು. ಅದು, ಖಾಸಗಿ ಜೆಟ್‌ನಲ್ಲಿ ಉದ್ಯಮಿ ಅದಾನಿ ಮತ್ತು ಪ್ರಧಾನ ಮಂತ್ರಿ ಕುಳಿತಿರುವ ಚಿತ್ರವಾಗಿತ್ತು. “ಹಾಗಾದರೆ ಈ ಸಂಬಂಧ ಏನು?” ಎಂದು ರಾಹುಲ್ ಕೇಳಿದರು.

ಮರುದಿನ ಸದನದ ಕಲಾಪ ಆರಂಭವಾಗುತ್ತಿದ್ದಂತೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸ್ಪೀಕರ್‌ಗೆ ನಿಯಮಗಳ ಪ್ರಕಾರ ಯಾವುದೇ ಸಂಸದರು ಇನ್ನೊಬ್ಬರ ವಿರುದ್ಧ ಆರೋಪ ಮಾಡಲು ಬಯಸಿದರೆ ಮುಂಚಿತವಾಗಿ ನೋಟಿಸ್ ನೀಡಬೇಕಾಗುತ್ತದೆ ಎಂದು ಹೇಳಿದರು. ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಯಾವುದೇ ದಾಖಲೆ ಪುರಾವೆಗಳಿಲ್ಲದೆ ಮೋದಿಯವರ ಮೇಲೆ ಕ್ರೋನಿ ಕ್ಯಾಪಿಟಲಿಸಂ ಎಂದು ಆರೋಪಿಸುವ ಮೂಲಕ ಸದನವನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಮಾಡಿದ ಭಾಷಣದಲ್ಲಿ ಹದಿನೆಂಟು ಟೀಕೆಗಳನ್ನು ಮಾಡಿದ್ದರು ಅವೆಲ್ಲವೂ ಅದಾನಿಗೆ ಸಂಬಂಧಿಸಿವೆ.

ಸಂಸತ್ತಿನ ಬಜೆಟ್ ಅಧಿವೇಶನವು ಪದೇ ಪದೇ ಗದ್ದಲ ಗಲಾಟೆಗಳಿಂದಾಗಿ ಮುಂದೂಡಲಾಗುತ್ತಿದೆ. ಅದಾನಿ ಗ್ರೂಪ್‌ ಹಗರಣದ ಆರೋಪದ ಕುರಿತು ಜಂಟಿ ಸಂಸದೀಯ ಸಮಿತಿಯ ತನಿಖೆಗೆ ಒತ್ತಾಯಿಸಿ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ ಆದರೆ ಸರ್ಕಾರ ಮಾತ್ರ ತನಿಖೆ ಬಗ್ಗೆಒಂದು ಪದವನ್ನು ಮಾತನಾಡುತ್ತಿಲ್ಲ.

ಜನವರಿ 24 ರಂದು ಅಮೇರಿಕನ್ ಕಿರು-ಮಾರಾಟಗಾರ ಹಿಂಡೆನ್‌ಬರ್ಗ್ ರಿಸರ್ಚ್‌ ವರದಿಯು, ಭಾರತದ ಎರಡನೇ ಶ್ರೀಮಂತ ವ್ಯಕ್ತಿ ಗೌತಮ್ ಅದಾನಿ ನೇತೃತ್ವದ ಸಂಘಟಿತ ಸಂಸ್ಥೆಯು ಕಾರ್ಪೊರೇಟ್ ಇತಿಹಾಸದಲ್ಲಿ ಅತಿದೊಡ್ಡ ವಂಚನೆ ಮಾಡಿದೆ ಎಂದು ಆರೋಪಿಸಿದೆ. ಈ ವರದಿ ಹೊರಬಂದ ಬಳಿಕ ಅದಾನಿ ಗ್ರೂಪ್ ಕಂಪನಿಗಳು ಸ್ಟಾಕ್ ಮಾರುಕಟ್ಟೆಗಳಲ್ಲಿ 100 ಶತಕೋಟಿಗಿಂತ ಹೆಚ್ಚಿನ ನಷ್ಟವನ್ನು ಅನುಭವಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...