Homeಮುಖಪುಟಜಮ್ಮು ಕಾಶ್ಮೀರದ ಜನರಿಗೆ ಬೇಕಾಗಿದ್ದು ಉದ್ಯೋಗ, ಸಿಕ್ಕಿದ್ದು ಬಿಜೆಪಿಯ ಬುಲ್ಡೋಜರ್: ರಾಹುಲ್ ಗಾಂಧಿ

ಜಮ್ಮು ಕಾಶ್ಮೀರದ ಜನರಿಗೆ ಬೇಕಾಗಿದ್ದು ಉದ್ಯೋಗ, ಸಿಕ್ಕಿದ್ದು ಬಿಜೆಪಿಯ ಬುಲ್ಡೋಜರ್: ರಾಹುಲ್ ಗಾಂಧಿ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಜನರಿಗೆ ಉದ್ಯೋಗ ನೀಡಲು ಭಾರತೀಯ ಜನತಾ ಪಕ್ಷ ವಿಫಲವಾಗಿದೆ ಮತ್ತು ಈ ಕೇಂದ್ರಾಡಳಿತ ಪ್ರದೇಶದ ನಿವಾಸಿಗಳನ್ನು ಹೊರಹಾಕಲು ಬುಲ್ಡೋಜರ್‌ಗಳನ್ನು ಕಳುಹಿಸಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಭಾನುವಾರ ಆರೋಪಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಆಡಳಿತವು ಜನವರಿ 9 ರಂದು, ರಾಜ್ಯದಲ್ಲಿನ ಎಲ್ಲಾ ಅತಿಕ್ರಮಣಗಳನ್ನು ಜನವರಿ 31ರೊಳಗೆ ತೆಗೆದುಹಾಕುವುದಕ್ಕೆ ಕೇಂದ್ರಾಡಳಿತ ಪ್ರದೇಶದ ಉಪ ಆಯುಕ್ತರಿಗೆ ನಿರ್ದೇಶನ ನೀಡಿತ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ 2.75 ಲಕ್ಷ ಎಕರೆ ಭೂಮಿಯನ್ನು (ಅಥವಾ ಸುಮಾರು 1,112.8 ಚದರ ಕಿಲೋಮೀಟರ್ ಭೂಮಿ) ಅತಿಕ್ರಮಿಸಲಾಗಿದೆ ಎಂದು ಸರ್ಕಾರ ಹೇಳಿಕೊಂಡಿದೆ. ಈ ನೆಲಸಮ ಮಾಡುವ ಕಾರ್ಯಾಚರಣೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಕೈಗೊಂಡ ಅತಿ ದೊಡ್ಡ ಅತಿಕ್ರಮಣ ವಿರೋಧಿ ಕ್ರಮವಾಗಿದೆ.

ಇದನ್ನೂ ಓದಿ: ಸಂಸತ್ತಿನಲ್ಲಿ ಪ್ರಧಾನಿ ಬಗ್ಗೆ ಮಾತನಾಡಿದ್ದಕ್ಕೆ ರಾಹುಲ್ ಗಾಂಧಿಗೆ ನೋಟಿಸ್‌

”ಜಮ್ಮು ಮತ್ತು ಕಾಶ್ಮೀರದ ಜನರಿಗೆ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿ ಬೇಕಿತ್ತು, ಆದರೆ ಅವರಿಗೆ ಸಿಕ್ಕಿದ್ದೇನು? ಬಿಜೆಪಿಯ ಬುಲ್ಡೋಜರ್..” ಎಂದು ರಾಹುಲ್ ಗಾಂಧಿ ಭಾನುವಾರ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ. ಹಲವು ದಶಕಗಳಿಂದ ಕಷ್ಟಪಟ್ಟು ಜನರು ನೀರಾವರಿ ಮಾಡಿಕೊಂಡಿದ್ದಾರೆ. ಆ ಭೂಮಿಯನ್ನುಇದೀಗ ಕಸಿದುಕೊಳ್ಳುತ್ತಿದ್ದಾರೆ. ಶಾಂತಿ ಮತ್ತು ಕಾಶ್ಮೀರವನ್ನು ಒಗ್ಗೂಡಿಸುವ ಮೂಲಕ ರಕ್ಷಿಸಬೇಕು, ಜನರನ್ನು ವಿಭಜಿಸುವ ಮತ್ತು ವಿಭಜನೆಯಿಂದ ಅಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಜನವರಿ 31ರೊಳಗೆ ಸರ್ಕಾರಿ ಜಮೀನುಗಳಲ್ಲಿನ ಅತಿಕ್ರಮಣಗಳನ್ನು ತೆಗೆದುಹಾಕಲು ಜಮ್ಮು ಮತ್ತು ಕಾಶ್ಮೀರ ಆಡಳಿತದ ಸುತ್ತೋಲೆಗೆ ತಡೆ ನೀಡಲು ಜನವರಿ 20 ರಂದು ಸುಪ್ರೀಂ ಕೋರ್ಟ್ ನಿರಾಕರಿಸಿತು. ಇದೀಗ ಸ್ಥಳೀಯರು ತಮ್ಮ ಭೂಮಿಯನ್ನು ಕಳೆದುಕೊಳ್ಳುವ ಭಯದಲ್ಲಿದ್ದಾರೆ.

ಪ್ರಭಾವಿ ವ್ಯಕ್ತಿಗಳಿಂದ ಮಾತ್ರ ಭೂಮಿಯನ್ನು ಹಿಂಪಡೆಯುತ್ತಾರೆ ಎಂದು ಕಳೆದ ವಾರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭರವಸೆ ನೀಡಿದ್ದರು ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.

“ಅತಿಕ್ರಮಣ ವಿರೋಧಿ ಅಭಿಯಾನದಲ್ಲಿ ಜನಸಾಮಾನ್ಯರ ಮೇಲೆ ಪರಿಣಾಮ ಬೀರಲಿದೆ ಎಂದು ಕೆಲವರು ತಪ್ಪು ಮಾಹಿತಿ ಹರಡಲು ಯತ್ನಿಸಿದ್ದಾರೆ” ಎಂದು ಸಿನ್ಹಾ ಹೇಳಿದರು. “ತಮ್ಮ ಸ್ಥಾನವನ್ನು ದುರುಪಯೋಗಪಡಿಸಿಕೊಂಡ ಮತ್ತು ರಾಜ್ಯದ ಭೂಮಿಯನ್ನು ಅತಿಕ್ರಮಿಸಲು ಕಾನೂನನ್ನು ಉಲ್ಲಂಘಿಸಿದ ಪ್ರಭಾವಿ ಮತ್ತು ಶಕ್ತಿಯುತ ವ್ಯಕ್ತಿಗಳು ಮಾತ್ರ ದೇಶದ ಈ ಕಾನೂನನ್ನು ಎದುರಿಸಬೇಕಾಗುತ್ತದೆ” ಎಂದು ಹೇಳಿದ್ದಾರೆ.

ಕಾಶ್ಮೀರದ ಮಾಜಿ ಸಚಿವರಾದ ಪೀರ್ಜಾದಾ ಮೊಹಮ್ಮದ್ ಸಯೀದ್, ಮಕ್ಬೂಲ್ ದಾರ್, ಹಸೀಬ್ ದ್ರಾಬು, ತಾಜ್ ಮೊಹಿಯುದ್ದೀನ್ ಮತ್ತು ಅಲಿ ಮೊಹಮ್ಮದ್ ಸಾಗರ್ ಅವರ ಭೂಮಿಯನ್ನು ಅಧಿಕಾರಿಗಳು ಹಿಂಪಡೆದಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...