Homeಮುಖಪುಟಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

- Advertisement -
- Advertisement -

ಕೇರಳದ ಸುರಕ್ಷತೆ ಬಗ್ಗೆ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಮಾತನಾಡಿದ್ದರು. ಅದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ, ”ನಿಮಗೆ [ಕರ್ನಾಟಕ] ಸಮೀಪದಲ್ಲಿ ಕೇರಳವಿದೆ” ಎಂದು ಅಮಿತ್ ಶಾ ಹೇಳಿದ್ದರು. “ನಾನು ಹೆಚ್ಚು ಹೇಳಲು ಬಯಸುವುದಿಲ್ಲ. ಕರ್ನಾಟಕವನ್ನು ಸುರಕ್ಷಿತವಾಗಿಡಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ತಮ್ಮ ಪಕ್ಷದಿಂದ ಮಾತ್ರ ರಾಜ್ಯವನ್ನು ಸುರಕ್ಷಿತವಾಗಿಡಲು ಸಾಧ್ಯ ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿತ್ತು.

ಕೇರಳದ ಉಲ್ಲೇಖದ ಅರ್ಥವನ್ನು ಗೃಹ ಸಚಿವರು ವಿವರಿಸಲಿಲ್ಲ. ಆದಾಗ್ಯೂ, ಕಳೆದ ವರ್ಷ ಐದು ವರ್ಷಗಳ ಕಾಲ ನಿಷೇಧಕ್ಕೊಳಗಾದ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಕೇಂದ್ರದ ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ. ನವೆಂಬರ್ 2006ರಲ್ಲಿ ಕೇರಳದ ಕೋಝಿಕ್ಕೋಡ್‌ನಲ್ಲಿ ಈ ಸಂಘಟನೆಯನ್ನು ರಚಿಸಲಾಯಿತು.

ಇದನ್ನೂ ಓದಿ: ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಅಮಿತ್ ಶಾ ಅವರ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ವಿಜಯನ್, ”ಕೇರಳ ಶಾಂತಿ ಮತ್ತು ಜಾತ್ಯತೀತತೆಯ ಓಯಸಿಸ್ ಎಂದು ಹೇಳಿದ್ದಾರೆ ಮತ್ತು ಸಂಘ ಪರಿವಾರದ ಕಾರ್ಯಸೂಚಿಯು ರಾಜ್ಯದಲ್ಲಿ ಸ್ವಲ್ಪಮಟ್ಟಿನ ಎಳೆತವನ್ನು ಕಂಡುಕೊಂಡಿದೆ ಎಂದು ಹೇಳರುವುದಾಗಿ ದಿ ಹಿಂದೂ ವರದಿ ಮಾಡಿದೆ.

”ಮಂಗಳೂರಿನಲ್ಲಿ 2021ರ ಕ್ರಿಸ್‌ಮಸ್ ಸಮಯದಲ್ಲಿ 150 ವರ್ಷಗಳಷ್ಟು ಹಳೆಯದಾದ ಚರ್ಚ್‌ನ್ನು ಧ್ವಂಸ ಮಾಡಿದ ಶ್ರೀರಾಮ ಸೇನೆ ಕೇರಳದಲ್ಲಿ ಇಲ್ಲ” ಎಂದು ವಿಜಯನ್ ಹೇಳಿದರು.

ದೇಶದಲ್ಲಿ ಹೆಚ್ಚುತ್ತಿರುವ ಬಡತನ ಮತ್ತು ಹಸಿವು, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಬೆರಳಣಿಕೆ ಜನರ ಸಂಪತ್ತು ಹೆಚ್ಚುತ್ತಿರುವ ವಿಚಾರಗಳ ಬಗ್ಗೆ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕರ್ನಾಟಕದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರನ್ನು ರಾಕ್ಷಸೀಕರಿಸುವ ಮೂಲಕ ರಾಜಕೀಯ ಲಾಭಕ್ಕಾಗಿ ಕೋಮು ವಿಭಜನೆಯನ್ನು ಪ್ರಚೋದಿಸಿದೆ ಎಂದು ಅವರು ಹೇಳಿದರು.

“ಮಂಗಳೂರು ಸೇರಿದಂತೆ ಕರ್ನಾಟಕದ ನಮ್ಮ ಗಡಿ ಪ್ರದೇಶಗಳು ಅನೇಕ ಕೋಮುಗಲಭೆಗೆ ಸಾಕ್ಷಿಯಾಗಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ”2021ರ ಕ್ರಿಸ್‌ಮಸ್ ಋತುವಿನಲ್ಲಿ ಚಿಕ್ಕಮಗಳೂರಿನ 150 ವರ್ಷ ಹಳೆಯ ಚರ್ಚ್ ಮೇಲೆ ಸಂಘಪರಿವಾರ ದಾಳಿ ನಡೆಸಿತ್ತು. ಕ್ರೈಸ್ತರು ಮತ್ತು ಇತರ ಅಲ್ಪಸಂಖ್ಯಾತರು ಸಂಘಪರಿವಾರದಿಂದ ಇಂತಹ ಅನೇಕ ದಾಳಿಗಳನ್ನು ಎದುರಿಸಿದ್ದಾರೆ. ಆದರೆ ಕೇರಳದ ಪರಿಸ್ಥಿತಿ ಹೀಗಿದೆಯೇ? ಕೇರಳದಲ್ಲಿ ಯಾರೂ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಏಕೆಂದರೆ ಅವರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ ಇದೆ” ಎಂದರು.

”ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ. ಬಿಜೆಪಿಗೆ ಇನ್ನೂ ಒಂದು ಅವಕಾಶ ನೀಡಿದರೆ, ಅದು ಈ ದೇಶಕ್ಕೆ ದುರಂತವಾಗಲಿದೆ” ಎಂದು ಮುಖ್ಯಮಂತ್ರಿ ವಿಜಯನ್ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...