Homeಮುಖಪುಟಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿ: ಅಮಿತ್ ಶಾಗೆ ಪಿಣರಾಯಿ ವಿಜಯನ್ ತಿರುಗೇಟು

- Advertisement -
- Advertisement -

ಕೇರಳದ ಸುರಕ್ಷತೆ ಬಗ್ಗೆ ಇತ್ತೀಚೆಗೆ ಚುನಾವಣಾ ರ್ಯಾಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು  ಮಾತನಾಡಿದ್ದರು. ಅದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ ಎಂದು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ, ”ನಿಮಗೆ [ಕರ್ನಾಟಕ] ಸಮೀಪದಲ್ಲಿ ಕೇರಳವಿದೆ” ಎಂದು ಅಮಿತ್ ಶಾ ಹೇಳಿದ್ದರು. “ನಾನು ಹೆಚ್ಚು ಹೇಳಲು ಬಯಸುವುದಿಲ್ಲ. ಕರ್ನಾಟಕವನ್ನು ಸುರಕ್ಷಿತವಾಗಿಡಬೇಕಾದರೆ ಬಿಜೆಪಿಯಿಂದ ಮಾತ್ರ ಸಾಧ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ತಮ್ಮ ಪಕ್ಷದಿಂದ ಮಾತ್ರ ರಾಜ್ಯವನ್ನು ಸುರಕ್ಷಿತವಾಗಿಡಲು ಸಾಧ್ಯ ಎಂದು ಹೇಳಿರುವುದಾಗಿ ಎಎನ್‌ಐ ವರದಿ ಮಾಡಿತ್ತು.

ಕೇರಳದ ಉಲ್ಲೇಖದ ಅರ್ಥವನ್ನು ಗೃಹ ಸಚಿವರು ವಿವರಿಸಲಿಲ್ಲ. ಆದಾಗ್ಯೂ, ಕಳೆದ ವರ್ಷ ಐದು ವರ್ಷಗಳ ಕಾಲ ನಿಷೇಧಕ್ಕೊಳಗಾದ ಇಸ್ಲಾಮಿ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಮೇಲೆ ಕೇಂದ್ರದ ಶಿಸ್ತುಕ್ರಮದ ಹಿನ್ನೆಲೆಯಲ್ಲಿ ಅವರು ಈ ರೀತಿ ಮಾತನಾಡಿದ್ದಾರೆ. ನವೆಂಬರ್ 2006ರಲ್ಲಿ ಕೇರಳದ ಕೋಝಿಕ್ಕೋಡ್‌ನಲ್ಲಿ ಈ ಸಂಘಟನೆಯನ್ನು ರಚಿಸಲಾಯಿತು.

ಇದನ್ನೂ ಓದಿ: ಹೈದರಾಬಾದ್ ಕೇಂದ್ರೀಯ ವಿ.ವಿಯಲ್ಲಿ ಮೋದಿ ಸಾಕ್ಷ್ಯಚಿತ್ರ ಪ್ರದರ್ಶನ ಯಶಸ್ವಿ: JNU, ಕೇರಳದಲ್ಲಿ ಇಂದು

ಅಮಿತ್ ಶಾ ಅವರ ಹೇಳಿಕೆಗೆ ಭಾನುವಾರ ಪ್ರತಿಕ್ರಿಯಿಸಿದ ವಿಜಯನ್, ”ಕೇರಳ ಶಾಂತಿ ಮತ್ತು ಜಾತ್ಯತೀತತೆಯ ಓಯಸಿಸ್ ಎಂದು ಹೇಳಿದ್ದಾರೆ ಮತ್ತು ಸಂಘ ಪರಿವಾರದ ಕಾರ್ಯಸೂಚಿಯು ರಾಜ್ಯದಲ್ಲಿ ಸ್ವಲ್ಪಮಟ್ಟಿನ ಎಳೆತವನ್ನು ಕಂಡುಕೊಂಡಿದೆ ಎಂದು ಹೇಳರುವುದಾಗಿ ದಿ ಹಿಂದೂ ವರದಿ ಮಾಡಿದೆ.

”ಮಂಗಳೂರಿನಲ್ಲಿ 2021ರ ಕ್ರಿಸ್‌ಮಸ್ ಸಮಯದಲ್ಲಿ 150 ವರ್ಷಗಳಷ್ಟು ಹಳೆಯದಾದ ಚರ್ಚ್‌ನ್ನು ಧ್ವಂಸ ಮಾಡಿದ ಶ್ರೀರಾಮ ಸೇನೆ ಕೇರಳದಲ್ಲಿ ಇಲ್ಲ” ಎಂದು ವಿಜಯನ್ ಹೇಳಿದರು.

ದೇಶದಲ್ಲಿ ಹೆಚ್ಚುತ್ತಿರುವ ಬಡತನ ಮತ್ತು ಹಸಿವು, ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಬೆರಳಣಿಕೆ ಜನರ ಸಂಪತ್ತು ಹೆಚ್ಚುತ್ತಿರುವ ವಿಚಾರಗಳ ಬಗ್ಗೆ ಸಾರ್ವಜನಿಕರ ಗಮನ ಬೇರೆಡೆಗೆ ತಿರುಗಿಸಲು ಕರ್ನಾಟಕದ ಬಿಜೆಪಿ ಸರ್ಕಾರವು ಅಲ್ಪಸಂಖ್ಯಾತರನ್ನು ರಾಕ್ಷಸೀಕರಿಸುವ ಮೂಲಕ ರಾಜಕೀಯ ಲಾಭಕ್ಕಾಗಿ ಕೋಮು ವಿಭಜನೆಯನ್ನು ಪ್ರಚೋದಿಸಿದೆ ಎಂದು ಅವರು ಹೇಳಿದರು.

“ಮಂಗಳೂರು ಸೇರಿದಂತೆ ಕರ್ನಾಟಕದ ನಮ್ಮ ಗಡಿ ಪ್ರದೇಶಗಳು ಅನೇಕ ಕೋಮುಗಲಭೆಗೆ ಸಾಕ್ಷಿಯಾಗಿದೆ” ಎಂದು ವಿಜಯನ್ ಹೇಳಿರುವುದಾಗಿ ಪಿಟಿಐ ವರದಿ ಮಾಡಿದೆ. ”2021ರ ಕ್ರಿಸ್‌ಮಸ್ ಋತುವಿನಲ್ಲಿ ಚಿಕ್ಕಮಗಳೂರಿನ 150 ವರ್ಷ ಹಳೆಯ ಚರ್ಚ್ ಮೇಲೆ ಸಂಘಪರಿವಾರ ದಾಳಿ ನಡೆಸಿತ್ತು. ಕ್ರೈಸ್ತರು ಮತ್ತು ಇತರ ಅಲ್ಪಸಂಖ್ಯಾತರು ಸಂಘಪರಿವಾರದಿಂದ ಇಂತಹ ಅನೇಕ ದಾಳಿಗಳನ್ನು ಎದುರಿಸಿದ್ದಾರೆ. ಆದರೆ ಕೇರಳದ ಪರಿಸ್ಥಿತಿ ಹೀಗಿದೆಯೇ? ಕೇರಳದಲ್ಲಿ ಯಾರೂ ಯಾವುದೇ ಸಮಸ್ಯೆಗಳನ್ನು ಎದುರಿಸುವುದಿಲ್ಲ ಏಕೆಂದರೆ ಅವರಿಗೆ ನಮ್ಮ ಸರ್ಕಾರದ ಮೇಲೆ ನಂಬಿಕೆ ಇದೆ” ಎಂದರು.

”ಬಿಜೆಪಿ ದೇಶಕ್ಕೆ ವಿನಾಶಕಾರಿ ಶಕ್ತಿಯಾಗಿ ಪರಿಣಮಿಸಿದೆ. ಬಿಜೆಪಿಗೆ ಇನ್ನೂ ಒಂದು ಅವಕಾಶ ನೀಡಿದರೆ, ಅದು ಈ ದೇಶಕ್ಕೆ ದುರಂತವಾಗಲಿದೆ” ಎಂದು ಮುಖ್ಯಮಂತ್ರಿ ವಿಜಯನ್ ಹೇಳಿರುವ ಬಗ್ಗೆ ಪಿಟಿಐ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...