Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...