Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...