Homeಮುಖಪುಟಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

ಪಂಡಿತ್‌ ವಿವಾದ: ಭಾಗವತ್ ಹೇಳಿಕೆ ಬಳಿಕ ‘ಶ್ರೇಣೀಕೃತ ಜಾತಿ ವ್ಯವಸ್ಥೆ’ ಸಮರ್ಥಿಸಿದ ಸ್ವಾಮೀಜಿಗಳು

- Advertisement -
- Advertisement -

ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ ಬಳಿಕ, ಹಿಂದೂ ಧಾರ್ಮಿಕ ಮುಖಂಡರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿ, ಬ್ರಾಹ್ಮಣರ ಮೇಲರಿಮೆಯನ್ನು ಪ್ರದರ್ಶಿಸುತ್ತಿದ್ದಾರೆ.

ಭಕ್ತಿ ಕವಿ ಸಂತ ರವಿದಾಸ್ ಅವರ ಜಯಂತಿಯ ಸ್ಮರಣಾರ್ಥ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಭಾಗವತ್, “ಜಾತಿ ವಿಭಜನೆಯ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆ” ಎಂದು ಹೇಳಿದ್ದರು.

ಸಂತ ರವಿದಾಸ್ ಅವರು ದೇವರು ಕುರಿತು ಹೇಳಿರುವುದನ್ನು ಉಲ್ಲೇಖಿಸಿ ಭಾಗವತ್ ಭಾಷಣ ಮಾಡಿದ್ದರು. “ನಾನು (ದೇವರು) ಎಲ್ಲಾ ಜೀವಿಗಳಲ್ಲಿ ಇದ್ದೇನೆ. ಹೆಸರು ಅಥವಾ ಬಣ್ಣ ಯಾವುದೇ ಇರಲಿ, ಎಲ್ಲರಿಗೂ ಒಂದೇ ಸಾಮರ್ಥ್ಯ, ಒಂದೇ ಗೌರವವಿದೆ. ಎಲ್ಲಾ ನನ್ನ ಸ್ವಂತದ್ದು. ಯಾರೂ ಮೇಲು ಅಥವಾ ಕೀಳು ಅಲ್ಲ. ಶಾಸ್ತ್ರಗಳ ಆಧಾರದ ಮೇಲೆ ಪಂಡಿತರು ಹೇಳುವುದು ಸುಳ್ಳು. ಮೇಲು-ಕೀಳು ಎಂಬ ಈ ಕಲ್ಪನೆಯಲ್ಲಿ ಸಿಲುಕಿ ದಾರಿ ತಪ್ಪಿದ್ದೇವೆ. ಈ ಭ್ರಮೆಯನ್ನು ತೊಲಗಿಸಬೇಕು”- ಎಂದು ಭಾಗವತ್ ಹೇಳಿದ್ದರು.

ಕೆಲವು ದಿನಗಳ ನಂತರ ಆರ್‌ಎಸ್‌ಎಸ್ ಪ್ರತಿಕ್ರಿಯಿಸಿ, ಭಾಗವತ್ ಅವರು ಮಠಾಠಿ ಮೇಲ್ವರ್ಗದ ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾತನಾಡಿಲ್ಲ ಎಂದು ತಿಳಿಸಿತು. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆ ಹೊರತು, ‘ಬ್ರಾಹ್ಮಣರು’ ಎಂದಲ್ಲ ಎಂಬುದು ಆರ್‌ಎಸ್‌ಎಸ್‌ ನೀಡಿದ ಸಮರ್ಥನೆ.

ಭಾಗವತ್‌ ಅವರ ಹೇಳಿಕೆಗೆ ಸಂಬಂಧಿಸಿದಂತೆ ಪುರಿ ಶಂಕರಾಚಾರ್ಯರಾದ ನಿಶ್ಚಲಾನಂದ ಸರಸ್ವತಿ ಅವರಲ್ಲಿ ಭಕ್ತರೊಬ್ಬರು ಪ್ರಶ್ನಿಸಿದಾಗ ಸ್ವಾಮೀಜಿಯವರು ಜಾತಿ ವ್ಯವಸ್ಥೆಯನ್ನು ಸಮರ್ಥಿಸಿದ್ದು, ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮೊದಲ ಬ್ರಾಹ್ಮಣನ ಹೆಸರು ಬ್ರಹ್ಮಜಿ. ನೀವು ಧರ್ಮಗ್ರಂಥಗಳನ್ನು ಅಧ್ಯಯನ ಮಾಡಬೇಕು. ಪ್ರಪಂಚದ ಎಲ್ಲಾ ಶಾಸ್ತ್ರಗಳು ಮತ್ತು ಕಲೆಗಳನ್ನು ಬ್ರಾಹ್ಮಣರು ಮಾತ್ರ ವಿವರಿಸುತ್ತಾರೆ. ಶಿಕ್ಷಣ, ರಕ್ಷಣೆ ಮತ್ತು ಇತರ ಸೇವೆಗಳು ಯಾವಾಗಲೂ ಸಮತೋಲನದಲ್ಲಿರಬೇಕು. ನಾವು ಸನಾತನ ವ್ಯವಸ್ಥೆಯನ್ನು ಒಪ್ಪಿಕೊಳ್ಳದಿದ್ದರೆ, ಆಗ ಅಲ್ಲಿ ಯಾವ ವ್ಯವಸ್ಥೆ ಇರಬೇಕು?” ಎಂದು ಪ್ರಶ್ನಿಸಿದ್ದಾರೆ ನಿಶ್ಚಲಾನಂದ ಸರಸ್ವತಿ.

“ಆರ್‌ಎಸ್‌ಎಸ್‌ಗೆ ಸ್ವಂತ ಜ್ಞಾನವಿಲ್ಲ. ಜಾತಿ ವ್ಯವಸ್ಥೆಯನ್ನು ಪಂಡಿತರು ಸೃಷ್ಟಿಸಿದ್ದಾರೆಯೇ ಹೊರತು ಮೂರ್ಖರಿಂದಲ್ಲ. ಇಂದಿಗೂ ಜನರು ಪ್ರಪಂಚದ ಸಮಸ್ಯೆಗಳನ್ನು ಪರಿಹರಿಸಲು ಭಾರತದ ಬ್ರಾಹ್ಮಣರ ಬಳಿಗೆ ಬರುತ್ತಾರೆ” ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸನಾತನ ಸಮಾಜದ ರಚನೆಯ ಅನುಪಸ್ಥಿತಿಯಲ್ಲಿ, ಯುಎಸ್ ಮತ್ತು ಫ್ರಾನ್ಸ್‌ನಂತಹ ಪಾಶ್ಚಿಮಾತ್ಯ ದೇಶಗಳಲ್ಲಿ “ಪರ್ಯಾಯ ಜಾತಿ ಶ್ರೇಣಿಯನ್ನು ಸೃಷ್ಟಿಸುವ ಅಗತ್ಯವಿದೆ” ಎಂದು ಕರೆ ನೀಡಿದ್ದಾರೆ.

ಭಾಗವತ್ ಅವರ ಹೇಳಿಕೆಗಳ ವಿರುದ್ಧ ಟೀಕೆಗಳು ವ್ಯಕ್ತವಾದ ಬಳಿಕ, ಆರ್‌ಎಸ್‌ಎಸ್ ಸ್ಪಷ್ಟೀಕರಣ ನೀಡಿ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಮುಂದಾಯಿತು. “ಭಾಗವತ್ ಅವರ ಮಾತುಗಳನ್ನು ಮಾಧ್ಯಮಗಳು ತಪ್ಪಾಗಿ ವರದಿ ಮಾಡಿವೆ. ಭಾಗವತ್ ಅವರು ಬಳಸಿದ ‘ಪಂಡಿತ್‌’ ಎಂಬ ಪದವು ‘ವಿದ್ವಾಂಸರು’ ಎಂಬ ಅರ್ಥವನ್ನು ಹೊಂದಿದೆಯೇ ಹೊರತು, ‘ಬ್ರಾಹ್ಮಣರು’ ಎಂದಲ್ಲ” ಎಂದಿದೆ ಆರ್‌ಎಸ್‌ಎಸ್‌.

ಇದನ್ನೂ ಓದಿರಿ: ‘ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ದೊಡ್ಡ ಅಪಾಯ’: ಮಾಜಿ ನ್ಯಾಯಾಧೀಶರನ್ನು ರಾಜ್ಯಪಾಲರನ್ನಾಗಿಸಿದ್ದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ

ಭಾಗವತ್ ಅವರ ಹೇಳಿಕೆಗಳು ಮತ್ತು ಆರ್‌ಎಸ್‌ಎಸ್‌ ನಂತರ ನೀಡಿದ ಸ್ಪಷ್ಟೀಕರಣಕ್ಕೆ ಪ್ರತಿಕ್ರಿಯಿಸಿದ ದ್ವಾರಕಾ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ್, “ಭಾಗವತ್ ಅವರು ತಡವಾಗಿ ಅಪಾರ ಬುದ್ಧಿವಂತಿಕೆಯನ್ನು ಸಂಪಾದಿಸಿದ್ದಾರೆ. ನೀವು ಸಂಶೋಧನೆ ಮಾಡಿದ್ದೀರಾ?… ಭಗವದ್ಗೀತೆಯಲ್ಲಿ ಶ್ರೀಕೃಷ್ಣನು ನಾಲ್ಕು ವರ್ಣಗಳನ್ನು ಸೃಷ್ಟಿಸಿದನೆಂದು ನಾವು ಓದಿದ್ದೇವೆ. ದೇವರು ಇದನ್ನು (ಜಾತಿ ವ್ಯವಸ್ಥೆ) ಸೃಷ್ಟಿಸಿಲ್ಲ, ಅವುಗಳನ್ನು ಪಂಡಿತರು ನಿರ್ಮಿಸಿದ್ದಾರೆ ಎಂದು ಭಾಗವತ್ ಹೇಳುತ್ತಿದ್ದಾರೆ. ಈಗವರು ‘ಪಂಡಿತ್’ ಎಂದರೆ ‘ವಿದ್ವಾಂಸರು’ ಹೊರತು ‘ಬ್ರಾಹ್ಮಣ’ ಅಲ್ಲ ಎನ್ನುತ್ತಿದ್ದಾರೆ. ವಿದ್ವಾಂಸರು ಏನಾದರೂ ಹೇಳಿದ್ದರೆ ನೀವು ಅದನ್ನು ಏಕೆ ನಿರಾಕರಿಸುತ್ತೀರಿ?” ಎಂದು ಕೇಳಿದ್ದಾರೆ.

ವಿವಾದಾತ್ಮಕ ಹಾಗೂ ದ್ವೇಷ ಭಾಷಣಗಳಿಗೆ ಹೆಸರಾದ ದಾಸ್ನಾ ದೇವಸ್ಥಾನದ ಯತಿ ನರಸಿಂಹಾನಂದ್ ಮತ್ತು ತಪಸ್ವಿ ಚಾವ್ನಿಯ ಮಹಂತ್ ಪರಮಹಂಸ ದಾಸ್ ಅವರು ಭಾಗವತ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ದೇಶವಿರೋಧಿ ಶಕ್ತಿಗಳು ಹಿಂದೂಗಳ ನಡುವೆ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪಿತೂರಿ ನಡೆಸುತ್ತವೆ. ಆದರೆ ಕೆಲವು ಹಿಂದೂಗಳು ಅವರ ಪಿತೂರಿಯನ್ನು ಅರ್ಥಮಾಡಿಕೊಳ್ಳುವುದಿಲ್ಲ” ಎಂದು ಹೇಳಿಕೆಗಳನ್ನು ನೀಡಿದ್ದಾರೆ.

ವರದಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...